ದೊಡ್ಡಬಳ್ಳಾಪುರ (Harithalekhani): ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘದ (VSSN) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಯಿತು.
11 ಸದಸ್ಯತ್ವ ಬಲದ ತಿಪ್ಪೂರು ವಿಎಸ್ಎಸ್ಎನ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ಕವಿತಾ ಅವರ ಸಮ್ಮುಖದಲ್ಲಿ ಚುನಾವಣೆ ನಡೆಸಲಾಯಿತು.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಪ್ರೇಮಚಂದ್ರ ಅಧ್ಯಕ್ಷರಾಗಿ, ವಿನೋಧಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಅಭಿನಂದನೆ ಸಲ್ಲಸಿದ್ದಾರೆ.