ಚಿಕ್ಕಬಳ್ಳಾಪುರ (Harithalekhani): ತನ್ನ ಜಮೀನಿನಲ್ಲಿ ಉಳುಮೆ ಮಾಡುತ್ತಿರುವಾಗ ಟ್ರ್ಯಾಕ್ಟರ್ಪಲ್ಟಿಯಾಗಿ ಕೃಷಿ ಹೊಂಡಕ್ಕೆ (Krushi Honda) ಬಿದ್ದ ಪರಿಣಾಮ ಟ್ರಾಕ್ಟರ್ ಚಾಲನೆ ಮಾಡುತ್ತಿದ್ದ ರೈತ ಮೃತಪಟ್ಟ ಘಟನೆ ತಾಲೂಕಿನ ಗೊಲ್ಲದಡ್ಡಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಗೊಲ್ಲದಡ್ಡಿಯ ಓಬಲೇಶ್ (38 ವರ್ಷ) ಎಂದು ಗುರ್ತಿಸಲಾಗಿದೆ.
ಟ್ರ್ಯಾಕ್ಟರ್ ಓಬಲೇಶ್ ಎದೆಯ ಮೇಲೆ ಬಿದ್ದಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನು ಗಮನಿಸಿದ ಗ್ರಾಮಸ್ಥರು ಓಡೋಡಿ ಬಂದು ಟ್ರಾಕ್ಟರ್ ಕೆಳಗಡೆ ಇದ್ದ ಓಬಲೇಶ್ ಮೃತದೇಹವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಕೊನೆಗೆ ಮತ್ತೊಂದು ಟ್ರ್ಯಾಕ್ಟರ್ ಸಹಾಯ ದಿಂದ ಮೃತದೇಹವನ್ನು ತೆಗೆದು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.