Terrible accident on NH 44

NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

ಚಿಕ್ಕಬಳ್ಳಾಪುರ (Harithalekhani): ಕ್ಯಾಂಟರ್ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ತಂದೆ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿ, ಗೃಹಿಣಿಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ (NH 44) ಮರಸನಹಳ್ಳಿ ಬಳಿ ಈಶ ಟೆಂಪಲ್ ಗೆ ಹೋಗುವ ಸ್ಥಳದಲ್ಲಿ ಶನಿವಾರ ನಡೆದಿದೆ.

ಮೃತರನ್ನು ತಾಲ್ಲೂಕಿನ ಬಂಡಹಳ್ಳಿಯ ನಿವಾಸಿಗಳಾದ ವೆಂಕಟೇಶ್(34 ವರ್ಷ) ಮತ್ತು ವಿಕ್ಷಿತಾ(5 ವರ್ಷ), ಗಾಯಾಳುವನ್ನು ರೂಪ (28 ವರ್ಷ) ಎಂದು ಗುರ್ತಿಸಲಾಗಿದ್ದು, ಗಾಯಾಳಯವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ತೆರಳಿಸಲಾಗಿದೆ.

NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

ಮೃತ ವೆಂಕಟೇಶ್ ತನ್ನ ಪತ್ನಿ ರೂಪ ಮತ್ತು ಮಗಳು ವಿಕ್ಷಿತಾಳೊಂದಿಗೆ ಬಂಡಹಳ್ಳಿಯಿಂದ ಸಂಬಂಧಿಕರ ಮದುವೆಗೆ ಚಿಕ್ಕಬಳ್ಳಾಪುರಕ್ಕೆ ತೆರಳಲು ಬೈಕ್ ನಲ್ಲಿ ಬರುತ್ತಿದ್ದಾಗ ಮರಸನಹಳ್ಳಿ ಬಳಿಯ ಈಶಾ ಟೆಂಪಲ್ ರಸ್ತೆಯಿಂದ ಬಂದ ಕಾರು ಏಕಾ ಏಕಿ ಹೆದ್ದಾರಿಯಲ್ಲಿ ತಿರುವು ಪಡೆದು ಕೊಂಡಾಗ, ಬಾಗೇಪಲ್ಲಿ ಕಡೆಯಿಂದ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ಕ್ಯಾಂಟರ್ ವಾಹನ ಎಡಕ್ಕೆ ತೆಗೆದು ಕೊಂಡಾಗ ಕ್ಯಾಂಟರ್ ವಾಹನ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದಿದೆ.

ಕ್ಯಾಂಟರ್ ಬಿದ್ದ ರಭಸಕ್ಕೆ ಬೈಕ್ ಅಪ್ಪಚ್ಚಿಯಾಗಿ ವೆಂಕಟೇಶ್ ಮತ್ತು ಮಗಳು ವಿಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಪತ್ನಿ ರೂಪಗೆ ತೀವ್ರ ತರವಾದ ಗಾಯಗಳಾಗಿ ಚಿಂತಾಜನಕ ಸ್ಥಿತಿ ತಲುಪಿದ್ದಾಳೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸರು ಕ್ರೈನ್ ಸಹಾಯದಿಂದ ಕ್ಯಾಂಟರ್ ಸರಿಸಿ ಮೃತದೇಹಗಳನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತವನ್ನು ವೀಕ್ಷಿಸಿದ ಸಾರ್ವಜನಿಕರು ಈಶ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಅಧಿಕಾರಗಳ ವಿರುದ್ಧ ರೊಚ್ಚಿಗೆದ್ದಿದ್ದರು,

ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಸಾವು ನೋವುಗಳು ಸಂಭವಿಸುತ್ತಿದ್ದು, ಈಶ ಸಂಸ್ಥೆಯು ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲದೆ ಜನರು ಹೈಸ್ಪೀಟ್ ನಲ್ಲಿ ಬಂದು ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿರುವುದು ಅಪಘಾತಗಳಿಗೆ ಕಾರಣವಾಗಿದೆ. ಹೆಚ್ಚು ಅಪಘಾತಗಳು ಆಗುತ್ತಿರುವುದು ಈಶ ಫೌಂಡೇಶನ್ ಆದಮೇಲೆ ಎಂದು ಸಾರ್ವಜನಿಕರು ದೂರಿದ್ದಾರೆ.

ಹೆದ್ದಾರಿಯಿಂದ ಈಶ ಫೌಂಡೇಶನ್ ತಿರುವಿಗೆ ಯಾವುದೇ ಸೂಚನೆ ಫಲಕ ಇಲ್ಲ. ಪ್ಲೈಓವರ್ ಅಥವಾ ಅಂಡರ್ ಪಾಸ್ ಇಲ್ಲ ಅದರಿಂದ ಹೆಚ್ಚಿನ ಅಪಘಾತಗಳಿಗೆ ಮುಖ್ಯ ಕಾರಣ ಆಗುತ್ತಿದೆ.

ಯುಗಾದಿ ಹಬ್ಬದಿಂದ ಸುಮಾರು 15 ಅಪಘಾತಗಳಾಗಿದ್ದು ಯಾವ ಜನಪ್ರತಿನಿಧಿಯು, ಯಾವ ಅಧಿಕಾರಿಗಳು ಇತ್ತ ಗಮನ ಕೊಡುತ್ತಿಲ್ಲ, ಹೋದ ಪ್ರಾಣಕ್ಕೆ ಬೆಲೆ ಇಲ್ಲದಂತಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಪಟ್ಟಂತ ಇಲಾಖೆಗಳು ಮತ್ತು ಅಧಿಕಾರಿಗಳು ಇತ್ತ ಗಮನ ಹರಿಸಿ, ಈ ಸ್ಥಳದಲ್ಲಿ ಪ್ಲೈಓವರ್ ಅಥವಾ ಅಂಡರ್ ಪಾಸ್ ನಿರ್ಮಿಸಿ ಸಾರ್ವಜನಿಕರ ಪ್ರಾಣಕ್ಕೆ ರಕ್ಷಣೆಯನ್ನು ಕೊಡಬೇಕು. ಮತ್ತು ಓವರ್ ಟೆಕ್ ಮಾಡುವ ವಾಹನಗಳನ್ನು ಆರ್ ಟಿ ಓ ಅಧಿಕಾರಿಗಳು ಗಮನ ಹರಿಸಿ ಅಂಥಹವುಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ‌.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!