Terrible accident on NH 44

NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

ಚಿಕ್ಕಬಳ್ಳಾಪುರ (Harithalekhani): ಕ್ಯಾಂಟರ್ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ತಂದೆ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿ, ಗೃಹಿಣಿಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ (NH 44) ಮರಸನಹಳ್ಳಿ ಬಳಿ ಈಶ ಟೆಂಪಲ್ ಗೆ ಹೋಗುವ ಸ್ಥಳದಲ್ಲಿ ಶನಿವಾರ ನಡೆದಿದೆ.

ಮೃತರನ್ನು ತಾಲ್ಲೂಕಿನ ಬಂಡಹಳ್ಳಿಯ ನಿವಾಸಿಗಳಾದ ವೆಂಕಟೇಶ್(34 ವರ್ಷ) ಮತ್ತು ವಿಕ್ಷಿತಾ(5 ವರ್ಷ), ಗಾಯಾಳುವನ್ನು ರೂಪ (28 ವರ್ಷ) ಎಂದು ಗುರ್ತಿಸಲಾಗಿದ್ದು, ಗಾಯಾಳಯವನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ತೆರಳಿಸಲಾಗಿದೆ.

ಮೃತ ವೆಂಕಟೇಶ್ ತನ್ನ ಪತ್ನಿ ರೂಪ ಮತ್ತು ಮಗಳು ವಿಕ್ಷಿತಾಳೊಂದಿಗೆ ಬಂಡಹಳ್ಳಿಯಿಂದ ಸಂಬಂಧಿಕರ ಮದುವೆಗೆ ಚಿಕ್ಕಬಳ್ಳಾಪುರಕ್ಕೆ ತೆರಳಲು ಬೈಕ್ ನಲ್ಲಿ ಬರುತ್ತಿದ್ದಾಗ ಮರಸನಹಳ್ಳಿ ಬಳಿಯ ಈಶಾ ಟೆಂಪಲ್ ರಸ್ತೆಯಿಂದ ಬಂದ ಕಾರು ಏಕಾ ಏಕಿ ಹೆದ್ದಾರಿಯಲ್ಲಿ ತಿರುವು ಪಡೆದು ಕೊಂಡಾಗ, ಬಾಗೇಪಲ್ಲಿ ಕಡೆಯಿಂದ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ಕ್ಯಾಂಟರ್ ವಾಹನ ಎಡಕ್ಕೆ ತೆಗೆದು ಕೊಂಡಾಗ ಕ್ಯಾಂಟರ್ ವಾಹನ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದಿದೆ.

ಕ್ಯಾಂಟರ್ ಬಿದ್ದ ರಭಸಕ್ಕೆ ಬೈಕ್ ಅಪ್ಪಚ್ಚಿಯಾಗಿ ವೆಂಕಟೇಶ್ ಮತ್ತು ಮಗಳು ವಿಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಪತ್ನಿ ರೂಪಗೆ ತೀವ್ರ ತರವಾದ ಗಾಯಗಳಾಗಿ ಚಿಂತಾಜನಕ ಸ್ಥಿತಿ ತಲುಪಿದ್ದಾಳೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸರು ಕ್ರೈನ್ ಸಹಾಯದಿಂದ ಕ್ಯಾಂಟರ್ ಸರಿಸಿ ಮೃತದೇಹಗಳನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಅಪಘಾತವನ್ನು ವೀಕ್ಷಿಸಿದ ಸಾರ್ವಜನಿಕರು ಈಶ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಅಧಿಕಾರಗಳ ವಿರುದ್ಧ ರೊಚ್ಚಿಗೆದ್ದಿದ್ದರು,

ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಸಾವು ನೋವುಗಳು ಸಂಭವಿಸುತ್ತಿದ್ದು, ಈಶ ಸಂಸ್ಥೆಯು ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲದೆ ಜನರು ಹೈಸ್ಪೀಟ್ ನಲ್ಲಿ ಬಂದು ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿರುವುದು ಅಪಘಾತಗಳಿಗೆ ಕಾರಣವಾಗಿದೆ. ಹೆಚ್ಚು ಅಪಘಾತಗಳು ಆಗುತ್ತಿರುವುದು ಈಶ ಫೌಂಡೇಶನ್ ಆದಮೇಲೆ ಎಂದು ಸಾರ್ವಜನಿಕರು ದೂರಿದ್ದಾರೆ.

ಹೆದ್ದಾರಿಯಿಂದ ಈಶ ಫೌಂಡೇಶನ್ ತಿರುವಿಗೆ ಯಾವುದೇ ಸೂಚನೆ ಫಲಕ ಇಲ್ಲ. ಪ್ಲೈಓವರ್ ಅಥವಾ ಅಂಡರ್ ಪಾಸ್ ಇಲ್ಲ ಅದರಿಂದ ಹೆಚ್ಚಿನ ಅಪಘಾತಗಳಿಗೆ ಮುಖ್ಯ ಕಾರಣ ಆಗುತ್ತಿದೆ.

ಯುಗಾದಿ ಹಬ್ಬದಿಂದ ಸುಮಾರು 15 ಅಪಘಾತಗಳಾಗಿದ್ದು ಯಾವ ಜನಪ್ರತಿನಿಧಿಯು, ಯಾವ ಅಧಿಕಾರಿಗಳು ಇತ್ತ ಗಮನ ಕೊಡುತ್ತಿಲ್ಲ, ಹೋದ ಪ್ರಾಣಕ್ಕೆ ಬೆಲೆ ಇಲ್ಲದಂತಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಪಟ್ಟಂತ ಇಲಾಖೆಗಳು ಮತ್ತು ಅಧಿಕಾರಿಗಳು ಇತ್ತ ಗಮನ ಹರಿಸಿ, ಈ ಸ್ಥಳದಲ್ಲಿ ಪ್ಲೈಓವರ್ ಅಥವಾ ಅಂಡರ್ ಪಾಸ್ ನಿರ್ಮಿಸಿ ಸಾರ್ವಜನಿಕರ ಪ್ರಾಣಕ್ಕೆ ರಕ್ಷಣೆಯನ್ನು ಕೊಡಬೇಕು. ಮತ್ತು ಓವರ್ ಟೆಕ್ ಮಾಡುವ ವಾಹನಗಳನ್ನು ಆರ್ ಟಿ ಓ ಅಧಿಕಾರಿಗಳು ಗಮನ ಹರಿಸಿ ಅಂಥಹವುಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ‌.

ರಾಜಕೀಯ

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ 21ನೇ ವಾರ್ಡ್ ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದ್ದು, ಚುನಾವಣಾ ಆಯೋಗ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ

[ccc_my_favorite_select_button post_id="117576"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!