Yatnal team meets DCM DK Shivakumar..!

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಯತ್ನಾಳ್ ಬಣ..!I DK Shivakumar

ಬೆಂಗಳೂರು (Harithalekhani): ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆರವುಗೊಳಿಸಬೇಕೆಂದು ಹೋರಾಟ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್‌ ( Basana Gouda patila yatnal) ಬಣದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ (GM Siddeshwara) ಹಾಗೂ ಶಾಸಕ ಬಿ.ಪಿ.ಹರೀಶ್ (BP Harish) ಅವರು ಶುಕ್ರವಾರ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.

ಇದು ಮೇಲ್ನೋಟಕ್ಕೆ ಸೌಜನ್ಯದ ಭೇಟಿಯಂತೆ ಕಂಡರೂ ದೂರದೃಷ್ಟಿಯ ಯೋಜನೆಯಂತೆ ಕಾಣುತ್ತಿದೆ ಎಂಬ ಮಾತು ವ್ಯಾಪಕವಾಗಿದೆ.

ಇದೇ ಸಮಯದಲ್ಲಿ ಮುರುಗೇಶ್ ನಿರಾಣಿ ಅವರೂ ಕೂಡ ಡಿಸಿಎಂ ಅವರನ್ನು ಭೇಟಿಯಾಗಿರು ವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಕಂಡುಬರುತ್ತಿದೆ.

ಬಿಜೆಪಿಯ ಪ್ರಮುಖ ನಾಯಕರು ಜನಾಕ್ರೋಶ ಯಾತ್ರೆಯಲ್ಲಿರುವಾಗಲೇ ಇತ್ತ ಕೆಪಿಸಿಸಿ ಅಧ್ಯಕ್ಷರನ್ನು ಭಿನ್ನ ಬಣದ ನಾಯಕರು ಭೇಟಿಯಾದ ನಡೆ ಕುತೂಹಲ ಮೂಡಿಸಿದೆ.

ಬಿಜೆಪಿಯ ಬಣ ಬಡಿದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದರೂ, ಈಗ ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಪಕ್ಷದ ನಾಯಕನ ಮೇಲೆಯೇ ತಿರುಗಿ ಬಿದ್ದಿದ್ದು, ಮತ್ತೊಂದು ಸುತ್ತಿನ ಕದನ ಆರಂಭವಾಗಲಿದೆ. ಇದೇ ವೇಳೆ ಕಮಲ ಪಾಳಯದ ಪ್ರಮುಖ ನಾಯಕರು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡುತ್ತಿ ರುವುದು ಬಿಜೆಪಿಯಲ್ಲಿ ಪೀಕಲಾಟ ಆರಂಭವಾದಂತಿದೆ.

ಬಣ ಬಡಿದಾಟದ ವೇಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ ಅನೇಕ ನಾಯಕರುಗಳಿಗೆ ನೋಟಿಸ್ ಕೂಡ ನೀಡಲಾಗಿತ್ತು. ಒಂದು ಹಂತದಲ್ಲಿ ಭಿನ್ನಮತವಿಲ್ಲ ಎನ್ನುತ್ತಿರುವಾಗ ಬಿಜೆಪಿಯ ಹಿರಿಯ ಶಾಸಕ ಎಸ್.ಟಿ.ಸೋಮಶೇಖರ್ ಈಗ ಪ್ರತಿಪಕ್ಷ ನಾಯಕ ಆರ್.ಅಶೋಕ ವಿರುದ್ಧ ವಾಗ್ದಾಳಿ ನಡೆಸಿದ್ದಲ್ಲದೆ, ತಮ್ಮ ಹಳೆಯ ಪಕ್ಷದ ನಾಯಕರನ್ನು ಹಾಡಿ ಹೊಗಳಿದ್ದಾರೆ.

ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ನಮ್ಮೊಂದಿಗಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ಹೇಳಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಎಸ್.ಟಿ.ಸೋಮಶೇಖರ್, ನನ್ನ ವಿರುದ್ಧ ಷಡ್ಯಂತ್ರ ಮಾಡಿರುವುದು ಅಶೋಕ, ಕೇಂದ್ರದ ಶಿಸ್ತು ಸಮಿತಿ ಕೊಟ್ಟ ನೋಟಿಸ್‌ಗೆ ಉತ್ತರಿಸಲಾಗಿದ್ದು, ಅವರು ಏನು ತೀರ್ಮಾನ ಮಾಡುತ್ತಾರೆ ನೋಡೋಣ ಎಂದಿದ್ದಾರೆ.

ಅಲ್ಲದೆ. ಹಿಂದಿನ ಸರಕಾರದಲ್ಲಿ ನಾನು 3 ವರ್ಷ ಮಂತ್ರಿಯಾಗಿದ್ದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಾಗ ನಾನು ಹೇಗಿದ್ದೆ? ಚುನಾವಣೆಯಲ್ಲಿ ನನ್ನ ಸೋಲಿಸುವ ಪ್ರಯತ್ನವಾಯಿತು. ಮೂಲ ಬಿಜೆಪಿಯವರೇ ನನ್ನನ್ನು ಸೋಲಿಸುವ ಪ್ರಯತ್ನ ಮಾಡಿದರು. ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದರೆ ತೆಗೆದುಕೊಂಡಿಲ್ಲ. ಅಶೋಕ ಅವರೇ ನನಗೂ ಮಾತಾಡೋಕೆ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ನಗರದಲ್ಲಿ ಶುಕ್ರವಾರ ನಡೆದ ಕಲಿದೇವ ಕನೆನನ್ ಹಾಲ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸೋಮಶೇಖರ್, ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಮನಸಾರೆ ಕೊಂಡಾಡಿ, ಇವರು ಕರ್ನಾಟಕ ರಾಜಕೀಯದ ದಿಗ್ಗಜರು, ಧೀಮಂತ ನಾಯಕರು ಮಣ್ಣಿನ ಮಕ್ಕಳು, ಕಳು, ಒಗ್ಗಟ್ಟಾಗಿ ಬೆಂಗಳೂರು ಮತ್ತು ಕರ್ನಾಟಕ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಹಾಡಿ ಹೊಗಳಿದ್ದು, ಸೋಮಶೇಖ‌ರ್ ಅವರ ಮನಸ್ಸು ಬಿಜೆಪಿ ತೊರೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]