623 fake doctors in the state..!

ರಾಜ್ಯದಲ್ಲಿ 623 ಮಂದಿ ನಕಲಿ ವೈದ್ಯರು..!

ಬೆಂಗಳೂರು (Harithalekhani): ರಾಜ್ಯದಲ್ಲಿ 623 ನಕಲಿ ವೈದ್ಯರು ( fake doctors) ಅಮಾಯಕರ ಜೀವದ ಜತೆಗೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಮಾಹಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಹಿರಂಗಪಡಿಸಿದೆ.

ಅದರಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಬೀದರ್‌ನಲ್ಲಿ ಪತ್ತೆಯಾಗಿದ್ದಾರೆ. ಇನ್ನೂ 623 ನಕಲಿ ವೈದ್ಯರ ಪೈಕಿ 442 ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ನೋಟಿಸ್‌ ಜಾರಿ ಮಾಡಿದೆ ಹಾಗೂ ಕಾನೂನಿನ ಅಡಿಯಲ್ಲಿ 67 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜತೆಗೆ 89 ಜನ ವೈದ್ಯರಿಗೆ ದಂಡವನ್ನು ಆರೋಗ್ಯ ಇಲಾಖೆ ವಿಧಿಸಿದೆ.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು. ನಕಲಿ ವೈದ್ಯರ ವಿರುದ್ಧ ಇಲಾಖೆ ಮೆಗಾ ಡ್ರೈವ್ ನಡೆಸಿದೆ.

ರಾಜ್ಯದಲ್ಲಿ ನಕಲಿ ವೈದ್ಯರಿಗೆ ಕಾನೂನಿನ ಅಡಿಯಲ್ಲಿ 1 ಲಕ್ಷ ವರೆಗೂ ದಂಡ ಹಾಗೂ 3 ವರ್ಷದ ವರೆಗೂ ಜೈಲು ಶಿಕ್ಷೆಗೆ ಗುರಿಯಾಗಿಸಬಹುದು. ಕೆಲ ಸಮಯದಲ್ಲಿ ಶಿಕ್ಷೆ ಹೆಚ್ಚಾಗುವ ಸಾಧ್ಯತೆ ಕೂಡ ಇರುತ್ತದೆ.

ಇಲಾಖೆ ನಕಲಿ ವೈದ್ಯರ ವಿರುದ್ದ ಸಮರಸಾರಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ವೈದ್ಯರಿಗೆ ಬಲೆ ಬೀಸಲು ಇಲಾಖೆ ಸಜ್ಜಾಗಿದೆ.

ಅಮಾಯಕರ ಜೀವನದ ಜತೆ ಚೆಲ್ಲಾಟ

ನಕಲಿ ವೈದ್ಯರು ಅಮಾಯಕರ ಜೀವನದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಸರ್ಕಾರಿ ವೈದ್ಯರ ಕೊರತೆಯಿರುವ ಗ್ರಾಮೀಣ ಪ್ರದೇಶಗಳಲ್ಲೂ ಇವರ ಹಾವಳಿ ವಿಪರೀತವಾಗಿದೆ. ಬಡವರು ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರು ಇವರಿಂದ ಮೋಸ ಹೋಗುತ್ತಿದ್ದಾರೆ.

ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಅದರಿಂದ ದೊಡ್ಡ ಮಟ್ಟದಲ್ಲಿ ಪ್ರಯೋಜನ ಆಗುತ್ತಿಲ್ಲ.

ಅಷ್ಟೇ ಅಲ್ಲದೆ ನ್ಯಾಯಾಲಯದಲ್ಲೂ ಕೆಲವು ಪ್ರಕರಣಗಳು ವಿಚಾರಣೆಯಲ್ಲಿರುವುದರಿಂದ ಇವರ ಹಾವಳಿಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!