Take action against those who throw garbage from the attic; Lokayukta Justice BS Patil

ಬೇಕಾಬಿಟ್ಟಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಿ; ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಬೆಂಗಳೂರು: ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ (BS Patil) ಸೂಚಿಸಿದರು.

ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಶುಕ್ರವಾರ ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು.

ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ ಚಿಕಿತ್ಸೆ ನೀಡಲಾಗುತ್ತಿದೆ. ನಗರದಲ್ಲಿ ಒಟ್ಟು ಎರಡು ಲಕ್ಷ ಎಪ್ಪತೊಂಭತ್ತು ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು, ಇವುಗಳಲಗಲಿ ಮೂವತ್ತೈದು ಸಾವಿರಕ್ಕೂ ಹೆಚ್ಚು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಲಾಗಿದೆ.

ಇದಕ್ಕೆ ಸರ್ಕಾರದಿಂದ 60 ಕೋಟಿ ಅನುದಾನ ದೊರೆತಿದ್ದು, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸಹಯೋಗದಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ ನಂತರ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು, ನಗರ ಪ್ರದೇಶ ಅಷ್ಟೇ ಅಲ್ಲದೆ ಗ್ರಾಮಪಂಚಾಯತಿ ಮಟ್ಟದಲ್ಲಿಯೂ ಸಹ ಈ ಕಾರ್ಯಕ್ರಮಗಳನ್ನು ರೂಪಿಸಬೇಕು. ಇದರಲ್ಲಿ ಸಾರ್ವಜನಿಕರ ಸಹಭಾಗಿತ್ವ, ಸಂವಹನ ಸಹ ಮುಖ್ಯ. ಪ್ರಾಣಿಗಳಿಗೆ ಕ್ರೌರ್ಯ ತೋರದೆ ಸಹನೆಯಿಂದ ವರ್ತಿಸಬೇಕೆಂದು ತಿಳಿಸಿದರು.

ಕೆರೆ ಮಾಲಿನ್ಯ, ಘನತ್ಯಾಜ್ಯ ಕೆರೆಗಳಿಗೆ ಪ್ರವೇಶಿಸುವುದನ್ನು ತಡೆಯಲು ಬಿ.ಬಿ.ಎಂ.ಪಿ. ಹಾಗೂ ಜಲಮಂಡಳಿಯ ಅಧಿಕಾರಿಗಳು ಜಂಟಿಯಾಗಿ ಕೆಲಸ ನಿರ್ವಹಿಸಬೇಕು. ಜಕ್ಕೂರು ಕೆರೆಯನ್ನು ತ್ಯಾಜ್ಯ ಮುಕ್ತ ಕೆರೆಯನ್ನಾಗಿ ಮಾಡಬೇಕು ಎಂದರು.

ಕಸ ವಿಲೇವಾರಿ ಕುರಿತು ಬಿ.ಬಿ.ಎಂ.ಪಿ ಹಣಕಾಸು ಹಾಗೂ ಕಸ ವಿಲೇವಾರಿ ವಿಭಾಗದ ವಿಶೇಷ ಆಯುಕ್ತರಾದ ಕೆ. ಹರೀಶ್ ಕುಮಾರ್ ಮಾತನಾಡಿ, ಹಸಿಕಸ, ಒಣಕಸ ಹಾಗೂ ನೈರ್ಮಲ್ಯ ತ್ಯಾಜ್ಯಗಳನ್ನು ಬಿ.ಬಿ.ಎಂ.ಪಿ ವತಿಯಿಂದ “ಮನೆಯಿಂದ ಮನೆಗೆ” ಸಂಗ್ರಹ ಮಾಡಲಾಗುತ್ತಿದೆ.

100 ಕೆ.ಜಿ.ಗಿಂತ ಹೆಚ್ಚಾಗಿ ಉತ್ಪಾದನೆಯಾದ ಕಸವನ್ನು ಸಗಟು ಕಸ ಎಂದು ಪರಿಗಣಿಸಲಾಗುವುದು. ಬಹುತೇಕರು ಸಗಟು ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದರಿಂದ ಕಸ ವಿಲೇವಾರಿಯಲ್ಲಿ ತೊಡಕಾಗುತ್ತದೆ. ಕಸ ವಿಲೇವಾರಿ ನಿರ್ವಹನೆಗೆ 24 ಗಂಟೆಗಳ ಕಮಾಂಡ್ ಸೆಂಟರ್ ಕಾರ್ಯ ನಿರ್ವಹಿಸುತ್ತದೆ. ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಕೆಲಸವನ್ನು ಬಿ.ಬಿ.ಎಂಪಿ ಮಾಡಿದೆ ಎಂದರು.

ಕಸ ವಿಲೇವಾರಿಗೆ ಈಗ ಹೊಸ ರೂಪವನ್ನು ನೀಡಲಾಗುವುದು. ತಂತ್ರಜ್ಞಾನ ಹಾಗೂ ಕೃತಕ ಬುದ್ದಿಮತ್ತೆ ಆಧಾರಿತ ವಿಧಾನಗಳನ್ನು ಅಳವಡಿಸುವ ಚಿಂತನೆ ನಡೆಯುತ್ತಿದೆ. ಸಾರ್ವಜನಿಕರಿಂದ ಕಸ ವಿಲೇವಾರಿಗೆ ಸಂಗ್ರಹವಾದ ಹಣ ಹಾಗೂ ಆಸ್ತಿ ತೆರಿಗೆ ಹಣವನ್ನು ಸಹ ಇದಕ್ಕೆ ಸದಬಳಕೆ ಮಾಡಿಕೊಳ್ಳಲಾಗುವುದು. ರಸ್ತೆಗಳನ್ನು ಶುಚಿಯಾಗಿಟ್ಟು, ನಿಗದಿತ ಸಮಯದಲ್ಲಿ ಸಂಪನ್ಮೂಲ ಬಳಸಿ ಸಮರ್ಪಕವಾಗಿ ನಾವು ಕೆಲಸ ನಿರ್ವಹಿಸಬೇಕೆಂದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕಯುಕ್ತ ನ್ಯಾಯಮೂರ್ತಿಗಳು ಕಸ ವಿಲೇವಾರಿಯಲ್ಲಿ ಯಾವುದೇ ಲೋಪವಾಗದಂತೆ ಬಿ.ಬಿ.ಎಂಪಿ ನಿಗದಿತ ಗುರಿ ಮುಟ್ಟಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ನಡೆಯಬೇಕು. ಬೇಕಾಬಿಟ್ಟಿ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ನ್ಯಾಯಮೂರ್ತಿಗಳಾದ ಶ್ರೀನಾಥ್. ಕೆ ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!