ರಾಮನಗರ: ಜಿಲ್ಲೆಯ ಬಿಳಗುಂಬದಲ್ಲಿ ಆಯೋಜಿಸಿದ್ದ ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕರ ಅಭ್ಯರ್ಥಿ ಆಯ್ಕೆಯ ಸಂಬಂಧಿಸಿದ ಪೂರ್ವಭಾವಿ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪಾಲ್ಗೊಂಡರು.
ಇದೇ ವೇಳೆ ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ರೇಣುಕಾ ಕೆಂಪಣ್ಣ ಅವರನ್ನು ಆಯ್ಕೆ ಮಾಡಿ ಅವರ ಗೆಲುವಿಗಾಗಿ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕೆಂದು ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲೆಯ ಮುಖಂಡರು, ಕಾರ್ಯಕರ್ತರು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು, ನಿರ್ದೇಶಕರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಇದೇ ವೇಳೆ ಮಾಜಿ ಶಾಸಕ ಎ. ಮಂಜು, ರಾಮನಗರ ತಾಲ್ಲೂಕು ಅಧ್ಯಕ್ಷರಾದ ಶಿವಲಿಂಗಪ್ಪ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚಂದ್ರಣ್ಣ, ದಿಶಾ ಕಮಿಟಿ ಸದಸ್ಯ ಶಿವಣ್ಣ, ನರಸಿಂಹಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಮುಖಂಡರಾದ ಅಶ್ವಥ್, ಭರತ್ ಕೆಂಪಣ್ಣ, ಸುಪ್ರಿಯಾ ಚಂದ್ರಣ್ಣ, ಚಿಕ್ಕಣ್ಣಯ್ಯ, ಶೇಷಪ್ಪ, ಉಮೇಶ್, ಬಾಲಗೇರಿ ರವಿ, ಶ್ರೀ ಇಟ್ಟಮಡು ಗೋಪಾಲ್, ಮಾದಾಪುರ ಶಿವಕುಮಾರ್, ಸೋಮೇಗೌಡ ಅವರು ಸೇರಿದಂತೆ ಅನೇಕ ಮುಖಂಡರು ಜತೆಯಲ್ಲಿದ್ದರು.