ಚಿಕ್ಕಬಳ್ಳಾಪುರ: ಮಗಳು ಧನುಶ್ರೀಗೆ ಈಜು ಕಲಿಸಲು (swimming) ಹೋಗಿದ್ದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ನಾಗೇಶ್ (42 ವರ್ಷ) ಹಾಗೂ ಧನುಶ್ರೀ(12 ವರ್ಷ) ಮೃತ ದುರ್ದೈವಿಗಳು.
ಕೆರೆಯಲ್ಲಿ ಹೂಳು ತುಂಬಿದ್ದರಿಂದ ಹೂಳಿನಲ್ಲಿ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.
ಶಿಡ್ಲಘಟ್ಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಶಿಡ್ಲಘಟ್ಟದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಧನುಶ್ರಿ ಭರತನಾಟ್ಯದಲ್ಲಿ ಖ್ಯಾತಿ ಪಡೆದಿದ್ದು, ಆಸ್ಪತ್ರೆಯ ಮುಂದೆ ಮೃತರ ಸಂಬಂಧಿಗಳ ಆಕ್ರಂದ ಮುಗಿಲು ಮುಟ್ಟಿದೆ