ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಇಂದು ನಡೆದಿದೆ.
ಆರೋಪಿ ಪತ್ನಿಯನ್ನು ತೇಜು ರಾಠೋಡ್ ಎಂದು ಗುರುತಿಸಲಾಗಿದೆ. ಈಕೆ ಪತಿ ಅಜಿತ್ ರಾಠೋಡ್ ಕೊಲೆಗೆ ಯತ್ನಿಸಿದ್ದಾಳೆ ಎಂದು ವರದಿಯಾಗಿದೆ.
ಮೊಬೈಲ್ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಪತಿ ಅಜಿತ್ ಪತ್ನಿ ತೇಜುಗೆ ಬುದ್ದಿವಾದ ಹೇಳಿದ್ದರಂತೆ. ಇಷ್ಟಕ್ಕೆ ಸಿಟ್ಟಾದ ತೇಜು, ಪತಿ ಅಜಿತ್ ಗಾಢ ನಿದ್ರೆಯಲ್ಲಿದ್ದಾಗ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ ಎನ್ನಲಾಗಿದೆ.
ಘಟನೆಯಿಂದ ಅಜಿತ್ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಆತಂಕಗೊಂಡು ಓಡಿ ಬಂದಿದ್ದಾರೆ. ಈ ವೇಳೆ ಅಜಿತ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಅಜಿತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತೇಜು ರಾಠೋಡ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.