CM Siddaramaiah's raising of hand against police officer is evidence of goon behavior: BY Vijayendra

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು ಸಮವಸ್ತ್ರದಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಅಧಿಕಾರ ಮದದಲ್ಲಿ ತೇಲುತ್ತಿರುವ ಸಿದ್ದರಾಮಯ್ಯನವರ ನಡೆ, ನುಡಿಗಳು ಇತ್ತೀಚಿನ ದಿನಗಳಲ್ಲಿ ವಿಪರೀತಕ್ಕೆ ಹೋಗುತ್ತಿದೆ. ಕೆಲ ತಿಂಗಳ ಹಿಂದೆ ಸಭೆಯೊಂದರಲ್ಲಿ ದಕ್ಷ ಜಿಲ್ಲಾಧಿಕಾರಿಯೊಬ್ಬರನ್ನು ಕೇವಲವಾಗಿ ಅಪಮಾನಿಸಿ, ತಮ್ಮ ಸಂಸ್ಕೃತಿ ಹೀನ ನಡುವಳಿಕೆಯನ್ನು ಸಿದ್ದರಾಮಯ್ಯನವರು ಅನಾವರಣ ಮಾಡಿಕೊಂಡಿದ್ದರು.

ಅವರ ವರ್ತನೆ ಇಂದು – ನಿನ್ನೆಯದಲ್ಲ, ತಮ್ಮ ಸ್ವಕ್ಷೇತ್ರದಲ್ಲಿ ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ಪ್ರದರ್ಶಿಸಿದ ಘಟನೆ ಇನ್ನೂ ಹಸಿಯಾಗಿಯೇ ಇದೆ. ಅದೇ ರೀತಿ ಮೈಸೂರು ಭಾಗದ ಹಿರಿಯ ರಾಜಕಾರಿಣಿಯಾಗಿದ್ದ ನಂಜನಗೂಡಿನ ದಿವಂಗತ ಎಂ.ಮಹದೇವು ಅವರ ಮೇಲೂ ಹಲ್ಲೆ ನಡೆಸಿದ ಪ್ರಕರಣವನ್ನು ಮಾಧ್ಯಮಗಳು ʼಸಿದ್ದು-ಗುದ್ದುʼ ಪ್ರಕರಣ ಎಂದೇ ವ್ಯಾಖ್ಯಾನಿಸಿದ್ದವು.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತವರಿಗೆ ಅನುಭವದ ಹಿರಿತನ, ನಡುವಳಿಕೆ, ಹಾಗೂ ಮಾತುಗಳನ್ನು ಮಾಗಿಸಬೇಕು, ಆದರೆ ಸಿದ್ದರಾಮಯ್ಯನವರ ವಿಷಯದಲ್ಲಿ ಇದು ತಿರುಗು-ಮುರುಗಾಗಿದೆ, ದಿನೇ ದಿನೇ ಅವರು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ.

ಹತಾಶೆಯಿಂದ ಜನರು ಹಾಗೂ ಅಧಿಕಾರಿಗಳ ಮೇಲೆ ಅಹಂಕಾರ ಹಾಗೂ ತೋಳ್ಬಲ ಪ್ರದರ್ಶಿಸುತ್ತಿದ್ದಾರೆ. ಇದು ಅತ್ಯಂತ ದುರ್ದೈವದ ಹಾಗೂ ಖಂಡನೀಯ ವರ್ತನೆಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಹುದೊಡ್ಡ ಹಿನ್ನೆಲೆಯಿದೆ, ಆ ಸ್ಥಾನದಲ್ಲಿ ಕುಳಿತ ಅನೇಕ ಮಹನೀಯರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮೇರುಮಟ್ಟಕ್ಕೆ ಕೊಂಡೊಯ್ದಿದ್ದಾರೆ, ವಿಶ್ವಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ.

ಕರ್ನಾಟಕ ಎಂದರೆ ಸಜ್ಜನಿಕೆಯ ರಾಜಕಾರಣ, ಸಂಸ್ಕೃತಿ-ಸಂಸ್ಕಾರದ ನೆಲೆಬೀಡು ಎಂಬ ಮಾತಿದೆ, ಆದರೆ ಸಿದ್ದರಾಮಯ್ಯನವರ ವರ್ತನೆಯಿಂದಾಗಿ ಇತಿಹಾಸದ ಪರಂಪರೆಗೆ ಕಪ್ಪು ಮಸಿ ಬಳಿಯುತ್ತಿದೆ.

ಕರ್ನಾಟಕದ ಗೌರವ ಹಾಗೂ ಮುಖ್ಯ ಮಂತ್ರಿ ಸ್ಥಾನದ ಘನತೆ ಸಂಪೂರ್ಣ ಕುಗ್ಗುತ್ತಿದೆ. ರಾಷ್ಟ್ರ ಭಕ್ತರೆಂದರೆ ಕೆಂಡಕಾರುವ, ದೇಶ ಸುರಕ್ಷತೆಯ ಬಗ್ಗೆ ಉಡಾಫೆಯ ಮಾತನಾಡುವ ಸಿದ್ದರಾಮಯ್ಯನವರಿಂದಾಗಿ ಇಡೀ ರಾಷ್ಟ್ರ ‘ಭಾರತದ ಸುಭದ್ರತೆಗೆ’ ಒಕ್ಕೊರಲ ದನಿಯಾಗಿ ನಿಂತಿದ್ದರೆ, ಅದಕ್ಕೆ ವ್ಯತಿರಿಕ್ತವಾಗಿ ಕರ್ನಾಟಕದ ಮುಖ್ಯಮಂತ್ರಿ ವರ್ತಿಸುತ್ತಿದ್ದಾರೆ.

ಕರ್ನಾಟಕದ ಜನತೆಯ ದೇಶಾಭಿಮಾನವನ್ನು ಮೆಟ್ಟಿ ನಿಲ್ಲುವ ವರ್ತನೆ ಸಿದ್ದರಾಮಯ್ಯನವರು ತೋರುತ್ತಿದ್ದಾರೆ, ಅದರ ಮುಂದುವರೆದ ಭಾಗ ಬೆಳಗಾವಿಯ ಘಟನೆ.

ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುವ ಮೂಲಕ ರಾಷ್ಟ್ರ ಭಕ್ತಿ ಮೆರೆದ ದಿಟ್ಟ ಮಹಿಳೆಯರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ.

ಕರ್ತವ್ಯ ನಿರತ ಪೊಲೀಸ್ ವರಿಷ್ಠಾಧಿಕಾರಿಯ ಮೇಲೆ ದರ್ಪ ತೋರಿ ಅವರ ಮೇಲೆ ಹಲ್ಲೆಗೆ ಮುಂದಾದ ಸಿದ್ದರಾಮಯ್ಯನವರ ವರ್ತನೆ ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅಪಮಾನವಾಗಿದೆ. ಈ ಹಿನ್ನೆಲೆಯಲ್ಲಿ ಅವಮಾನಕ್ಕೊಳಗಾದ ಪೊಲೀಸ್‌ ಅಧಿಕಾರಿ ಹಾಗೂ ಇಡೀ ಪೊಲೀಸ್‌ ಇಲಾಖೆಗೆ ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇನೆ.

ರಾಜಕೀಯ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ (Budget) ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್

[ccc_my_favorite_select_button post_id="119957"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!