ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

CM Siddaramaiah's raising of hand against police officer is evidence of goon behavior: BY Vijayendra

ಬೆಂಗಳೂರು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು ಸಮವಸ್ತ್ರದಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಅಧಿಕಾರ ಮದದಲ್ಲಿ ತೇಲುತ್ತಿರುವ ಸಿದ್ದರಾಮಯ್ಯನವರ ನಡೆ, ನುಡಿಗಳು ಇತ್ತೀಚಿನ ದಿನಗಳಲ್ಲಿ ವಿಪರೀತಕ್ಕೆ ಹೋಗುತ್ತಿದೆ. ಕೆಲ ತಿಂಗಳ ಹಿಂದೆ ಸಭೆಯೊಂದರಲ್ಲಿ ದಕ್ಷ ಜಿಲ್ಲಾಧಿಕಾರಿಯೊಬ್ಬರನ್ನು ಕೇವಲವಾಗಿ ಅಪಮಾನಿಸಿ, ತಮ್ಮ ಸಂಸ್ಕೃತಿ ಹೀನ ನಡುವಳಿಕೆಯನ್ನು ಸಿದ್ದರಾಮಯ್ಯನವರು ಅನಾವರಣ ಮಾಡಿಕೊಂಡಿದ್ದರು.

ಅವರ ವರ್ತನೆ ಇಂದು – ನಿನ್ನೆಯದಲ್ಲ, ತಮ್ಮ ಸ್ವಕ್ಷೇತ್ರದಲ್ಲಿ ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ಪ್ರದರ್ಶಿಸಿದ ಘಟನೆ ಇನ್ನೂ ಹಸಿಯಾಗಿಯೇ ಇದೆ. ಅದೇ ರೀತಿ ಮೈಸೂರು ಭಾಗದ ಹಿರಿಯ ರಾಜಕಾರಿಣಿಯಾಗಿದ್ದ ನಂಜನಗೂಡಿನ ದಿವಂಗತ ಎಂ.ಮಹದೇವು ಅವರ ಮೇಲೂ ಹಲ್ಲೆ ನಡೆಸಿದ ಪ್ರಕರಣವನ್ನು ಮಾಧ್ಯಮಗಳು ʼಸಿದ್ದು-ಗುದ್ದುʼ ಪ್ರಕರಣ ಎಂದೇ ವ್ಯಾಖ್ಯಾನಿಸಿದ್ದವು.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತವರಿಗೆ ಅನುಭವದ ಹಿರಿತನ, ನಡುವಳಿಕೆ, ಹಾಗೂ ಮಾತುಗಳನ್ನು ಮಾಗಿಸಬೇಕು, ಆದರೆ ಸಿದ್ದರಾಮಯ್ಯನವರ ವಿಷಯದಲ್ಲಿ ಇದು ತಿರುಗು-ಮುರುಗಾಗಿದೆ, ದಿನೇ ದಿನೇ ಅವರು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ.

ಹತಾಶೆಯಿಂದ ಜನರು ಹಾಗೂ ಅಧಿಕಾರಿಗಳ ಮೇಲೆ ಅಹಂಕಾರ ಹಾಗೂ ತೋಳ್ಬಲ ಪ್ರದರ್ಶಿಸುತ್ತಿದ್ದಾರೆ. ಇದು ಅತ್ಯಂತ ದುರ್ದೈವದ ಹಾಗೂ ಖಂಡನೀಯ ವರ್ತನೆಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಹುದೊಡ್ಡ ಹಿನ್ನೆಲೆಯಿದೆ, ಆ ಸ್ಥಾನದಲ್ಲಿ ಕುಳಿತ ಅನೇಕ ಮಹನೀಯರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮೇರುಮಟ್ಟಕ್ಕೆ ಕೊಂಡೊಯ್ದಿದ್ದಾರೆ, ವಿಶ್ವಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ.

ಕರ್ನಾಟಕ ಎಂದರೆ ಸಜ್ಜನಿಕೆಯ ರಾಜಕಾರಣ, ಸಂಸ್ಕೃತಿ-ಸಂಸ್ಕಾರದ ನೆಲೆಬೀಡು ಎಂಬ ಮಾತಿದೆ, ಆದರೆ ಸಿದ್ದರಾಮಯ್ಯನವರ ವರ್ತನೆಯಿಂದಾಗಿ ಇತಿಹಾಸದ ಪರಂಪರೆಗೆ ಕಪ್ಪು ಮಸಿ ಬಳಿಯುತ್ತಿದೆ.

ಕರ್ನಾಟಕದ ಗೌರವ ಹಾಗೂ ಮುಖ್ಯ ಮಂತ್ರಿ ಸ್ಥಾನದ ಘನತೆ ಸಂಪೂರ್ಣ ಕುಗ್ಗುತ್ತಿದೆ. ರಾಷ್ಟ್ರ ಭಕ್ತರೆಂದರೆ ಕೆಂಡಕಾರುವ, ದೇಶ ಸುರಕ್ಷತೆಯ ಬಗ್ಗೆ ಉಡಾಫೆಯ ಮಾತನಾಡುವ ಸಿದ್ದರಾಮಯ್ಯನವರಿಂದಾಗಿ ಇಡೀ ರಾಷ್ಟ್ರ ‘ಭಾರತದ ಸುಭದ್ರತೆಗೆ’ ಒಕ್ಕೊರಲ ದನಿಯಾಗಿ ನಿಂತಿದ್ದರೆ, ಅದಕ್ಕೆ ವ್ಯತಿರಿಕ್ತವಾಗಿ ಕರ್ನಾಟಕದ ಮುಖ್ಯಮಂತ್ರಿ ವರ್ತಿಸುತ್ತಿದ್ದಾರೆ.

ಕರ್ನಾಟಕದ ಜನತೆಯ ದೇಶಾಭಿಮಾನವನ್ನು ಮೆಟ್ಟಿ ನಿಲ್ಲುವ ವರ್ತನೆ ಸಿದ್ದರಾಮಯ್ಯನವರು ತೋರುತ್ತಿದ್ದಾರೆ, ಅದರ ಮುಂದುವರೆದ ಭಾಗ ಬೆಳಗಾವಿಯ ಘಟನೆ.

ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುವ ಮೂಲಕ ರಾಷ್ಟ್ರ ಭಕ್ತಿ ಮೆರೆದ ದಿಟ್ಟ ಮಹಿಳೆಯರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ.

ಕರ್ತವ್ಯ ನಿರತ ಪೊಲೀಸ್ ವರಿಷ್ಠಾಧಿಕಾರಿಯ ಮೇಲೆ ದರ್ಪ ತೋರಿ ಅವರ ಮೇಲೆ ಹಲ್ಲೆಗೆ ಮುಂದಾದ ಸಿದ್ದರಾಮಯ್ಯನವರ ವರ್ತನೆ ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅಪಮಾನವಾಗಿದೆ. ಈ ಹಿನ್ನೆಲೆಯಲ್ಲಿ ಅವಮಾನಕ್ಕೊಳಗಾದ ಪೊಲೀಸ್‌ ಅಧಿಕಾರಿ ಹಾಗೂ ಇಡೀ ಪೊಲೀಸ್‌ ಇಲಾಖೆಗೆ ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇನೆ.

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]