ದೊಡ್ಡಬಳ್ಳಾಪುರ: ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ (Terrorist attack) ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಮೊಂಬತ್ತಿಯೊಂದಿಗೆ ಮೌನ ಮೆರವಣಿಗೆ ನಡೆಯಿತು.
ಕನಸವಾಡಿಯ ಬೆಳವಂಗಲ ಕ್ರಾಸ್ ನಿಂದ ಶನಿಮಹಾತ್ಮ ದೇವಸ್ದಾನದವರೆಗೆ ಕಾಲು ನಡಿಗೆಯೊಂದಿಗೆ ಮೊಂಬತ್ತಿ ಹಚ್ಚಿ ಮೌನ ಮೆರವಣಿಗೆ ನಡೆಸಿ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಕಾಶ್ಮೀರ ಹತ್ಯಾಕಾಂಡವನ್ನು ಖಂಡಿಸಿದರು.
ಮೆರವಣಿಗೆಯಲ್ಲಿ ಮಾತನಾಡಿದ ಸಂಘಟನೆಗಳ ಮುಖಂಡರು, ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ದೇಶದ ಎಲ್ಲಾ ಜನರು ಖಂಡಿಸಬೇಕಾಗಿದೆ.
ಭಾರತ ಭಾವೈಕ್ಯತೆ ಉಗ್ರರು ಮಾರಕವಾಗಿದ್ದಾರೆ. 26 ಮಂದಿಯನ್ನು ಹತ್ಯೆ ಮಾಡಿರುವ ಉಗ್ರವಾದಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಇಂತಹ ಪ್ರಕರಣ ಮತ್ತೆ ಮರುಕಳಿಸದಂತೆ ಕಾನೂನು ಮತ್ತು ಭದ್ರತಾ ವ್ಯವಸ್ಥೆ ಸಮಪರ್ಕವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ಮೆರವಣಿಗೆಯಲ್ಲಿ ಮಧುರೆ ಕಲಾವಿದರ ಸಂಘ ,ಇಸ್ತೂರು ಕೋದಂಡರಾಮಸ್ವಾಮಿ ಭಜನಾ ಸಂಘ, ಶ್ರೀಅಭಯ ಆಂಜನೇಯಸ್ವಾಮಿ ಸಮಿತಿ ಮತ್ತು ಮಧುರೆ ಹೋಬಳಿಯ ವಿವಿಧ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ ನಗರದ ಸಮೀಪವಿರುವ ಅನಿಬೆಸೆಂಟ್ ಪಾರ್ಕ್ ನಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ, ರಾಜ್ಯ ಸಂಸ್ಥೆ ಆಯೋಜಿಸಿದ್ದ ರೋವರ್ಸ್ ಮತ್ತು ರೇಂಜರ್ಸ ಗಳ ಕೌಶಲ್ಯ ತರಬೇತಿ ಶಿಬಿರದ ಶಿಬಿರಾರ್ಥಿಗಳಿಂದ ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಬಲಿಯಾದ ದೇಶದ ನಾಗರಿಕರಿಗೆ ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿ ಗೌರವ ನಮನ ಸಲ್ಲಿಸಿದರು.
