ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

Victory against Delhi... RCB tops the table

ದೆಹಲಿ: ಕೃಣಾಲ್ ಪಾಂಡ್ಯ (73) ಹಾಗೂ ವಿರಾಟ್ ಕೊಹ್ಲಿ (51) ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆರ್‌ಸಿಬಿಯು ಡೆಲ್ಲಿ ಎದುರು ಉದ್ಯಾನ ನಗರಿಯಲ್ಲಿ ಎದುರಾಗಿದ್ದ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು. ಅಲ್ಲದೆ ಈ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ RCB ತಂಡವು ಅಗ್ರ ಸ್ಥಾನವನ್ನು ಅಲಂಕರಿಸಿತು.

ಆರ್‌ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿಸಿ, ಈ ಆವೃತ್ತಿಯಲ್ಲಿ ತವರಿನ ಹೊರಗೆ ಸತತ ಏಳನೇ ಪಂದ್ಯವನ್ನು ಗೆದ್ದು ಬೀಗಿತು. ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ.

ಆರ್‌ಸಿಬಿ ಆರಂಭಿಕ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 163 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿಗೆ ಉತ್ತಮ ಆರಂಭಸಿಗಲಿಲ್ಲ. ತಂಡದ ಮೊತ್ತ 26 ರನ್ ಇರುವಾಗಲೇ ಜಾಕೋಬ್ ಭೆಥೆಲ್, ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟೀದಾರ್ ಅವರ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.

ಕೃಣಾಲ್-ಕೊಹ್ಲಿ ಜತೆಯಾಟ: ಆರ್‌ಸಿಬಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಕೃಣಾಲ್ ಪಾಂಡ್ಯ ಅತ್ಯಂತ ಜವಾಬ್ದಾರಿಯುತ ಆಟವನ್ನು ಆಡಿ, ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 51 ರನ್ ತಂಡದ ಗೆಲುವಿನ ಸಮಯದಲ್ಲಿ ವಿಕೆಟ್ ಒಪ್ಪಿಸಿದರು.

ಕುಸಿದ ಡೆಲ್ಲಿ ಕ್ಯಾಪಿಟಲ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿಬರಲಿಲ್ಲ. ಭುವನೇಶ್ವರ್ ಕುಮಾರ್ ಹಾಗೂ ಜಾಶ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನಲುಗಿದ ಡೆಲ್ಲಿ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಮಾತ್ರ ಕಲೆ ಹಾಕಿತ್ತು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್‌ ಸ್ಟಬ್ 34, ಅಭಿಷೇಕ್ ಪೊರೆಲ್ 28 ರನ್ ಗಳಿಸಿದರು.

ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಪೋಟಕ ಆಟಕ್ಕೆ ಯತ್ನಿಸಿ 11 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 28 ರನ್ ಗಳಿಸಿ ಪವರ್ ಪ್ಲೇನಲ್ಲೇ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 26 ಎಸೆತಗಳಲ್ಲಿ ಕೇವಲ 2 ಬೌಂಡರಿ ಸಹಿತ 22 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆದರು.

ಕರುಣ್ ನಾಯರ್ ಕೇವಲ 4 ರನ್ ಗಳಿಸಿ ದಯಾಳ್ ಬೌಲಿಂಗ್‌ನಲ್ಲಿ ಭುವನೇಶ್ವರ್‌ಗೆ ಕ್ಯಾಚ್ ನೀಡಿದರು ಕೆಎಲ್ ರಾಹುಲ್ ಕೂಡ ರನ್‌ಗಳಿಸಲು ಪರದಾಡಿದರು. 39 ಎಸೆತಗಳಲ್ಲಿ 3 ಬೌಂಡರಿ ಸಹಿತ 41 ರನ್ ಗಳಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ನಾಯಕ ಅಕ್ಷರ್ ಪಟೇಲ್ ಆಟ ಕೇವಲ 15ಕ್ಕೆ ಅಂತ್ಯ ವಾಯಿತು. ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟಾನ್‌ ಸಬ್ ಸ್ಥಬ್ 18 1 ಎಸೆತಗ ಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 34 ರನ್‌ಗಳಿಸಿದರು. ಅಶು ತೋಷ್ ಶರ್ಮಾ 2 ರನ್, ವಿಪ್ರಜ್ ನಿಗಂ 12 ರನ್ ಗಳಿಸಿದರು.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]