Victory against Delhi... RCB tops the table

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ದೆಹಲಿ: ಕೃಣಾಲ್ ಪಾಂಡ್ಯ (73) ಹಾಗೂ ವಿರಾಟ್ ಕೊಹ್ಲಿ (51) ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆರ್‌ಸಿಬಿಯು ಡೆಲ್ಲಿ ಎದುರು ಉದ್ಯಾನ ನಗರಿಯಲ್ಲಿ ಎದುರಾಗಿದ್ದ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು. ಅಲ್ಲದೆ ಈ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ RCB ತಂಡವು ಅಗ್ರ ಸ್ಥಾನವನ್ನು ಅಲಂಕರಿಸಿತು.

ಆರ್‌ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿಸಿ, ಈ ಆವೃತ್ತಿಯಲ್ಲಿ ತವರಿನ ಹೊರಗೆ ಸತತ ಏಳನೇ ಪಂದ್ಯವನ್ನು ಗೆದ್ದು ಬೀಗಿತು. ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ.

ಆರ್‌ಸಿಬಿ ಆರಂಭಿಕ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 163 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿಗೆ ಉತ್ತಮ ಆರಂಭಸಿಗಲಿಲ್ಲ. ತಂಡದ ಮೊತ್ತ 26 ರನ್ ಇರುವಾಗಲೇ ಜಾಕೋಬ್ ಭೆಥೆಲ್, ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟೀದಾರ್ ಅವರ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.

ಕೃಣಾಲ್-ಕೊಹ್ಲಿ ಜತೆಯಾಟ: ಆರ್‌ಸಿಬಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಕೃಣಾಲ್ ಪಾಂಡ್ಯ ಅತ್ಯಂತ ಜವಾಬ್ದಾರಿಯುತ ಆಟವನ್ನು ಆಡಿ, ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 51 ರನ್ ತಂಡದ ಗೆಲುವಿನ ಸಮಯದಲ್ಲಿ ವಿಕೆಟ್ ಒಪ್ಪಿಸಿದರು.

ಕುಸಿದ ಡೆಲ್ಲಿ ಕ್ಯಾಪಿಟಲ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿಬರಲಿಲ್ಲ. ಭುವನೇಶ್ವರ್ ಕುಮಾರ್ ಹಾಗೂ ಜಾಶ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನಲುಗಿದ ಡೆಲ್ಲಿ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಮಾತ್ರ ಕಲೆ ಹಾಕಿತ್ತು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್‌ ಸ್ಟಬ್ 34, ಅಭಿಷೇಕ್ ಪೊರೆಲ್ 28 ರನ್ ಗಳಿಸಿದರು.

ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಪೋಟಕ ಆಟಕ್ಕೆ ಯತ್ನಿಸಿ 11 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 28 ರನ್ ಗಳಿಸಿ ಪವರ್ ಪ್ಲೇನಲ್ಲೇ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 26 ಎಸೆತಗಳಲ್ಲಿ ಕೇವಲ 2 ಬೌಂಡರಿ ಸಹಿತ 22 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆದರು.

ಕರುಣ್ ನಾಯರ್ ಕೇವಲ 4 ರನ್ ಗಳಿಸಿ ದಯಾಳ್ ಬೌಲಿಂಗ್‌ನಲ್ಲಿ ಭುವನೇಶ್ವರ್‌ಗೆ ಕ್ಯಾಚ್ ನೀಡಿದರು ಕೆಎಲ್ ರಾಹುಲ್ ಕೂಡ ರನ್‌ಗಳಿಸಲು ಪರದಾಡಿದರು. 39 ಎಸೆತಗಳಲ್ಲಿ 3 ಬೌಂಡರಿ ಸಹಿತ 41 ರನ್ ಗಳಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ನಾಯಕ ಅಕ್ಷರ್ ಪಟೇಲ್ ಆಟ ಕೇವಲ 15ಕ್ಕೆ ಅಂತ್ಯ ವಾಯಿತು. ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟಾನ್‌ ಸಬ್ ಸ್ಥಬ್ 18 1 ಎಸೆತಗ ಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 34 ರನ್‌ಗಳಿಸಿದರು. ಅಶು ತೋಷ್ ಶರ್ಮಾ 2 ರನ್, ವಿಪ್ರಜ್ ನಿಗಂ 12 ರನ್ ಗಳಿಸಿದರು.

ರಾಜಕೀಯ

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿಕೊಂಡು ದೊಡ್ಡಬಳ್ಳಾಪುರ (Doddaballapura) ನಗರದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="118224"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!