Victory against Delhi... RCB tops the table

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ದೆಹಲಿ: ಕೃಣಾಲ್ ಪಾಂಡ್ಯ (73) ಹಾಗೂ ವಿರಾಟ್ ಕೊಹ್ಲಿ (51) ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆರ್‌ಸಿಬಿಯು ಡೆಲ್ಲಿ ಎದುರು ಉದ್ಯಾನ ನಗರಿಯಲ್ಲಿ ಎದುರಾಗಿದ್ದ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು. ಅಲ್ಲದೆ ಈ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ RCB ತಂಡವು ಅಗ್ರ ಸ್ಥಾನವನ್ನು ಅಲಂಕರಿಸಿತು.

ಆರ್‌ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿಸಿ, ಈ ಆವೃತ್ತಿಯಲ್ಲಿ ತವರಿನ ಹೊರಗೆ ಸತತ ಏಳನೇ ಪಂದ್ಯವನ್ನು ಗೆದ್ದು ಬೀಗಿತು. ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ.

ಆರ್‌ಸಿಬಿ ಆರಂಭಿಕ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 163 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿಗೆ ಉತ್ತಮ ಆರಂಭಸಿಗಲಿಲ್ಲ. ತಂಡದ ಮೊತ್ತ 26 ರನ್ ಇರುವಾಗಲೇ ಜಾಕೋಬ್ ಭೆಥೆಲ್, ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟೀದಾರ್ ಅವರ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.

ಕೃಣಾಲ್-ಕೊಹ್ಲಿ ಜತೆಯಾಟ: ಆರ್‌ಸಿಬಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಕೃಣಾಲ್ ಪಾಂಡ್ಯ ಅತ್ಯಂತ ಜವಾಬ್ದಾರಿಯುತ ಆಟವನ್ನು ಆಡಿ, ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 51 ರನ್ ತಂಡದ ಗೆಲುವಿನ ಸಮಯದಲ್ಲಿ ವಿಕೆಟ್ ಒಪ್ಪಿಸಿದರು.

ಕುಸಿದ ಡೆಲ್ಲಿ ಕ್ಯಾಪಿಟಲ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿಬರಲಿಲ್ಲ. ಭುವನೇಶ್ವರ್ ಕುಮಾರ್ ಹಾಗೂ ಜಾಶ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನಲುಗಿದ ಡೆಲ್ಲಿ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಮಾತ್ರ ಕಲೆ ಹಾಕಿತ್ತು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್‌ ಸ್ಟಬ್ 34, ಅಭಿಷೇಕ್ ಪೊರೆಲ್ 28 ರನ್ ಗಳಿಸಿದರು.

ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಪೋಟಕ ಆಟಕ್ಕೆ ಯತ್ನಿಸಿ 11 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 28 ರನ್ ಗಳಿಸಿ ಪವರ್ ಪ್ಲೇನಲ್ಲೇ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 26 ಎಸೆತಗಳಲ್ಲಿ ಕೇವಲ 2 ಬೌಂಡರಿ ಸಹಿತ 22 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆದರು.

ಕರುಣ್ ನಾಯರ್ ಕೇವಲ 4 ರನ್ ಗಳಿಸಿ ದಯಾಳ್ ಬೌಲಿಂಗ್‌ನಲ್ಲಿ ಭುವನೇಶ್ವರ್‌ಗೆ ಕ್ಯಾಚ್ ನೀಡಿದರು ಕೆಎಲ್ ರಾಹುಲ್ ಕೂಡ ರನ್‌ಗಳಿಸಲು ಪರದಾಡಿದರು. 39 ಎಸೆತಗಳಲ್ಲಿ 3 ಬೌಂಡರಿ ಸಹಿತ 41 ರನ್ ಗಳಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ನಾಯಕ ಅಕ್ಷರ್ ಪಟೇಲ್ ಆಟ ಕೇವಲ 15ಕ್ಕೆ ಅಂತ್ಯ ವಾಯಿತು. ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟಾನ್‌ ಸಬ್ ಸ್ಥಬ್ 18 1 ಎಸೆತಗ ಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 34 ರನ್‌ಗಳಿಸಿದರು. ಅಶು ತೋಷ್ ಶರ್ಮಾ 2 ರನ್, ವಿಪ್ರಜ್ ನಿಗಂ 12 ರನ್ ಗಳಿಸಿದರು.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!