Victory against Delhi... RCB tops the table

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ದೆಹಲಿ: ಕೃಣಾಲ್ ಪಾಂಡ್ಯ (73) ಹಾಗೂ ವಿರಾಟ್ ಕೊಹ್ಲಿ (51) ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆರ್‌ಸಿಬಿಯು ಡೆಲ್ಲಿ ಎದುರು ಉದ್ಯಾನ ನಗರಿಯಲ್ಲಿ ಎದುರಾಗಿದ್ದ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು. ಅಲ್ಲದೆ ಈ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ RCB ತಂಡವು ಅಗ್ರ ಸ್ಥಾನವನ್ನು ಅಲಂಕರಿಸಿತು.

ಆರ್‌ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿಸಿ, ಈ ಆವೃತ್ತಿಯಲ್ಲಿ ತವರಿನ ಹೊರಗೆ ಸತತ ಏಳನೇ ಪಂದ್ಯವನ್ನು ಗೆದ್ದು ಬೀಗಿತು. ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ.

ಆರ್‌ಸಿಬಿ ಆರಂಭಿಕ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 163 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿಗೆ ಉತ್ತಮ ಆರಂಭಸಿಗಲಿಲ್ಲ. ತಂಡದ ಮೊತ್ತ 26 ರನ್ ಇರುವಾಗಲೇ ಜಾಕೋಬ್ ಭೆಥೆಲ್, ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟೀದಾರ್ ಅವರ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.

ಕೃಣಾಲ್-ಕೊಹ್ಲಿ ಜತೆಯಾಟ: ಆರ್‌ಸಿಬಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಕೃಣಾಲ್ ಪಾಂಡ್ಯ ಅತ್ಯಂತ ಜವಾಬ್ದಾರಿಯುತ ಆಟವನ್ನು ಆಡಿ, ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 51 ರನ್ ತಂಡದ ಗೆಲುವಿನ ಸಮಯದಲ್ಲಿ ವಿಕೆಟ್ ಒಪ್ಪಿಸಿದರು.

ಕುಸಿದ ಡೆಲ್ಲಿ ಕ್ಯಾಪಿಟಲ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿಬರಲಿಲ್ಲ. ಭುವನೇಶ್ವರ್ ಕುಮಾರ್ ಹಾಗೂ ಜಾಶ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನಲುಗಿದ ಡೆಲ್ಲಿ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಮಾತ್ರ ಕಲೆ ಹಾಕಿತ್ತು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್‌ ಸ್ಟಬ್ 34, ಅಭಿಷೇಕ್ ಪೊರೆಲ್ 28 ರನ್ ಗಳಿಸಿದರು.

ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಪೋಟಕ ಆಟಕ್ಕೆ ಯತ್ನಿಸಿ 11 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 28 ರನ್ ಗಳಿಸಿ ಪವರ್ ಪ್ಲೇನಲ್ಲೇ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 26 ಎಸೆತಗಳಲ್ಲಿ ಕೇವಲ 2 ಬೌಂಡರಿ ಸಹಿತ 22 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆದರು.

ಕರುಣ್ ನಾಯರ್ ಕೇವಲ 4 ರನ್ ಗಳಿಸಿ ದಯಾಳ್ ಬೌಲಿಂಗ್‌ನಲ್ಲಿ ಭುವನೇಶ್ವರ್‌ಗೆ ಕ್ಯಾಚ್ ನೀಡಿದರು ಕೆಎಲ್ ರಾಹುಲ್ ಕೂಡ ರನ್‌ಗಳಿಸಲು ಪರದಾಡಿದರು. 39 ಎಸೆತಗಳಲ್ಲಿ 3 ಬೌಂಡರಿ ಸಹಿತ 41 ರನ್ ಗಳಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ನಾಯಕ ಅಕ್ಷರ್ ಪಟೇಲ್ ಆಟ ಕೇವಲ 15ಕ್ಕೆ ಅಂತ್ಯ ವಾಯಿತು. ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟಾನ್‌ ಸಬ್ ಸ್ಥಬ್ 18 1 ಎಸೆತಗ ಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 34 ರನ್‌ಗಳಿಸಿದರು. ಅಶು ತೋಷ್ ಶರ್ಮಾ 2 ರನ್, ವಿಪ್ರಜ್ ನಿಗಂ 12 ರನ್ ಗಳಿಸಿದರು.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!