ಎಎಸ್‌ಪಿ ಮೇಲೆ ಕೈ ಎತ್ತಿದ ಸಿಎಂ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದು ಹೀಗೆ

Law to regulate YouTube channels: Dr. G. Parameshwar

ಬೆಂಗಳೂರು: ಬೆಳಗಾವಿಯಲ್ಲಿ ನಿನ್ನೆ ನಡೆದ ಘಟನೆ ಬಗ್ಗೆ ಪೂರ್ಣ ಮಾಹಿತಿ ತೆಗೆದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ (Dr.G.Parameshwar) ಅವರು ಹೇಳಿದರು‌.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಎಸ್‌ಪಿ ಮೇಲೆ ಮುಖ್ಯಮಂತ್ರಿಗಳು ಕೈ ಮಾಡಲು ಹೋಗಿರುವುದು ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗುತ್ತಿರುವ ಕುರಿತು‌ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

ನನಗೆ ಸಂಪೂರ್ಣವಾದಂತ ಮಾಹಿತಿ ಇಲ್ಲ. ನಡೆದಿರುವ ಘಟನೆ ಏನು? ಯಾತಕ್ಕೆ ಕೋಪಗೊಂಡರು ಎಂಬುದು ಸರಿಯಾದ ಮಾಹಿತಿ ತೆಗೆದುಕೊಂಡಿಲ್ಲ. ಪೂರ್ಣ ಮಾಹಿತಿ ತೆಗೆದುಕೊಂಡ ಬಳಿಕ ನಾನು ಪ್ರತಿಕ್ರಿಯೆ ಮಾಡುತ್ತೇನೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು. ನಂತರ ಅವರು ಎಲ್ಲರು ಮಾತಾಡುವಾಗ ಏನು ಮಾಡಿಲ್ಲ. ಮುಖ್ಯಮಂತ್ರಿಯವರು ಮಾತಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ಲೋಪ ಇಲಾಖೆಯಿಂದ ಆಗಿದೆಯಾ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು ಯಾಕೆ ಹಾಕಿಕೊಂಡು ಬಂದರು. ಬಿಜೆಪಿ ಶಾಲು ಹಾಕಿಕೊಂಡು ಬರಬಹುದಿತ್ತಲ್ಲವೇ? ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ವೈಫಲ್ಯವೇ ಅಥವಾ ಏನು ಎಂಬುದು ಗೊತ್ತಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಬರುವುದಕ್ಕೆ ಇವರಿಗೆ ಏನು ನೈತಿಕತೆ ಇತ್ತೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

ಯುದ್ಧ ಬೇಡ ಹೇಳಿಕೆಗೆ ಸಿಎಂ ಕ್ಷಮೆಯಾಚಿಸಬೇಕು ಎಂಬ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿ,
ಯಾವ ಉದ್ದೇಶಕ್ಕಾಗಿ ಆ ರೀತಿ ಹೇಳಿದ್ದೇನೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ. ಅಗತ್ಯ ಬಿದ್ದಾಗ ಯುದ್ಧ ಮಾಡಲು ಹಿಂದೆ ನೋಡಬಾರದು ಎಂಬುದನ್ನು ಹೇಳಿದ್ದಾರೆ ಎಂದರು.

ಪಹಲ್ಗಾಮ್ ಘಟನೆ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ತೋರುತ್ತಿದ್ದಾರೆ ಎಂಬುದರ ಕುರಿತ ಮಾಧ್ಯದಮವರ ಪ್ರಶ್ನೆಗೆ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಪಕ್ಷ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ.‌ ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ? ಎಂದರು.

ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಹೆಚ್ಚಿನಂಶ ಯಾರು ಅಧಿಕಾರದಲ್ಲಿರುತ್ತಾರೆ, ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶವಿರುತ್ತದೆ. ನಮಗೆಲ್ಲರಿಗೂ ಕೂಡ ಜವಾಬ್ಧಾರಿ ಇರಬೇಕಾಗುತ್ತದೆ. ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷರು, ನಮ್ಮ ಪಕ್ಷದ ಪ್ರತಿನಿಧಿಗಳು ಕೂಡ ಘಟನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಪಹಲ್ಗಾಮ್ ಘಟನೆಯ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಾನೊಂದು ಹೇಳುವುದು, ಇನ್ನೊಬ್ಬರೊಂದು ಹೇಳುವುದು ಬಾಯಿಗೆ ಬಂದಂತೆ ಹೇಳುತ್ತ ಹೋದರೆ ಮಹತ್ವ ಹೋಗುತ್ತದೆ. ನಾವು ಯಾರು ಕೂಡ ಹೆಚ್ಚು ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ ಎಂದರು.

ಈ ಬಗ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿರುವ ವಿಚಾರ ಗೊತ್ತಿಲ್ಲ. ಇದು ದೇಶದ ಭದ್ರತೆ ವಿಚಾರ. ಪಕ್ಷಾತೀತವಾಗಿ ಈ ಘಟನೆಯನ್ನು ನೋಡಬೇಕು. ಪಕ್ಷಾತೀತವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹಿಂದೆಯೇ ಹೇಳಿದ್ದೇನೆ. ದೇಶದ ಭದ್ರತೆಗೆ ಕೇಂದ್ರ ಸರ್ಕಾರ ಏನೇ ತೀರ್ಮಾನ ತೆಗೆದುಕೊಂಡರು ನಮ್ಮ ಸಹಕಾರ ಇದೆ. ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರಲಿದೆ ಎಂಬುದನ್ನು ಎಐಸಿಸಿ ಅಧಿಕೃತವಾಗಿ ಹೇಳಿದೆ ಎಂದು Dr.G.Parameshwar ಸ್ಪಷ್ಟಪಡಿಸಿದರು.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]