ED shocks Home Minister Dr.G.Parameshwar.. Siddhartha College attacked

ಎಎಸ್‌ಪಿ ಮೇಲೆ ಕೈ ಎತ್ತಿದ ಸಿಎಂ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದು ಹೀಗೆ

ಬೆಂಗಳೂರು: ಬೆಳಗಾವಿಯಲ್ಲಿ ನಿನ್ನೆ ನಡೆದ ಘಟನೆ ಬಗ್ಗೆ ಪೂರ್ಣ ಮಾಹಿತಿ ತೆಗೆದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ (Dr.G.Parameshwar) ಅವರು ಹೇಳಿದರು‌.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಎಸ್‌ಪಿ ಮೇಲೆ ಮುಖ್ಯಮಂತ್ರಿಗಳು ಕೈ ಮಾಡಲು ಹೋಗಿರುವುದು ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗುತ್ತಿರುವ ಕುರಿತು‌ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

ನನಗೆ ಸಂಪೂರ್ಣವಾದಂತ ಮಾಹಿತಿ ಇಲ್ಲ. ನಡೆದಿರುವ ಘಟನೆ ಏನು? ಯಾತಕ್ಕೆ ಕೋಪಗೊಂಡರು ಎಂಬುದು ಸರಿಯಾದ ಮಾಹಿತಿ ತೆಗೆದುಕೊಂಡಿಲ್ಲ. ಪೂರ್ಣ ಮಾಹಿತಿ ತೆಗೆದುಕೊಂಡ ಬಳಿಕ ನಾನು ಪ್ರತಿಕ್ರಿಯೆ ಮಾಡುತ್ತೇನೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು. ನಂತರ ಅವರು ಎಲ್ಲರು ಮಾತಾಡುವಾಗ ಏನು ಮಾಡಿಲ್ಲ. ಮುಖ್ಯಮಂತ್ರಿಯವರು ಮಾತಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ಲೋಪ ಇಲಾಖೆಯಿಂದ ಆಗಿದೆಯಾ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು ಯಾಕೆ ಹಾಕಿಕೊಂಡು ಬಂದರು. ಬಿಜೆಪಿ ಶಾಲು ಹಾಕಿಕೊಂಡು ಬರಬಹುದಿತ್ತಲ್ಲವೇ? ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ವೈಫಲ್ಯವೇ ಅಥವಾ ಏನು ಎಂಬುದು ಗೊತ್ತಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಬರುವುದಕ್ಕೆ ಇವರಿಗೆ ಏನು ನೈತಿಕತೆ ಇತ್ತೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

ಯುದ್ಧ ಬೇಡ ಹೇಳಿಕೆಗೆ ಸಿಎಂ ಕ್ಷಮೆಯಾಚಿಸಬೇಕು ಎಂಬ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿ,
ಯಾವ ಉದ್ದೇಶಕ್ಕಾಗಿ ಆ ರೀತಿ ಹೇಳಿದ್ದೇನೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ. ಅಗತ್ಯ ಬಿದ್ದಾಗ ಯುದ್ಧ ಮಾಡಲು ಹಿಂದೆ ನೋಡಬಾರದು ಎಂಬುದನ್ನು ಹೇಳಿದ್ದಾರೆ ಎಂದರು.

ಪಹಲ್ಗಾಮ್ ಘಟನೆ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ತೋರುತ್ತಿದ್ದಾರೆ ಎಂಬುದರ ಕುರಿತ ಮಾಧ್ಯದಮವರ ಪ್ರಶ್ನೆಗೆ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಪಕ್ಷ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ.‌ ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ? ಎಂದರು.

ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಹೆಚ್ಚಿನಂಶ ಯಾರು ಅಧಿಕಾರದಲ್ಲಿರುತ್ತಾರೆ, ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶವಿರುತ್ತದೆ. ನಮಗೆಲ್ಲರಿಗೂ ಕೂಡ ಜವಾಬ್ಧಾರಿ ಇರಬೇಕಾಗುತ್ತದೆ. ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷರು, ನಮ್ಮ ಪಕ್ಷದ ಪ್ರತಿನಿಧಿಗಳು ಕೂಡ ಘಟನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಪಹಲ್ಗಾಮ್ ಘಟನೆಯ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಾನೊಂದು ಹೇಳುವುದು, ಇನ್ನೊಬ್ಬರೊಂದು ಹೇಳುವುದು ಬಾಯಿಗೆ ಬಂದಂತೆ ಹೇಳುತ್ತ ಹೋದರೆ ಮಹತ್ವ ಹೋಗುತ್ತದೆ. ನಾವು ಯಾರು ಕೂಡ ಹೆಚ್ಚು ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ ಎಂದರು.

ಈ ಬಗ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿರುವ ವಿಚಾರ ಗೊತ್ತಿಲ್ಲ. ಇದು ದೇಶದ ಭದ್ರತೆ ವಿಚಾರ. ಪಕ್ಷಾತೀತವಾಗಿ ಈ ಘಟನೆಯನ್ನು ನೋಡಬೇಕು. ಪಕ್ಷಾತೀತವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹಿಂದೆಯೇ ಹೇಳಿದ್ದೇನೆ. ದೇಶದ ಭದ್ರತೆಗೆ ಕೇಂದ್ರ ಸರ್ಕಾರ ಏನೇ ತೀರ್ಮಾನ ತೆಗೆದುಕೊಂಡರು ನಮ್ಮ ಸಹಕಾರ ಇದೆ. ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರಲಿದೆ ಎಂಬುದನ್ನು ಎಐಸಿಸಿ ಅಧಿಕೃತವಾಗಿ ಹೇಳಿದೆ ಎಂದು Dr.G.Parameshwar ಸ್ಪಷ್ಟಪಡಿಸಿದರು.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!