Two arrested for rape

ಪೊಲೀಸ್‌ ವಾಹನದಿಂದ ಜಿಗಿದು ಆರೋಪಿ ಸಾವು..!

ನವದೆಹಲಿ: ಕಳ್ಳತನ ಮತ್ತು ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕರೆದುಕೊಂಡು ಹೋಗುವಾಗ ಪರಾರಿಯಾಗುವ ಭರದಲ್ಲಿ ವಾಹನದಿಂದ ಜಿಗಿದು ಒಬ್ಬ ಸಾವನ್ನಪ್ಪಿರುವ (Dies) ಘಟನೆ ನೈಋತ್ಯ ದೆಹಲಿಯ ವಸಂತ್‌ ಕುಂಜ್ ಪ್ರದೇಶದಲ್ಲಿ ನಡೆದಿದೆ.

ಪೊಲೀಸ್ ವಾಹನದಿಂದ ಜಿಗಿದ ಕಾರಣ ಬಂಧನದಲ್ಲಿದ್ದ 19 ವರ್ಷದ ಯುವಕ ಸಾವನ್ನಪ್ಪಿದ್ದಾನೆ ಮತ್ತು ಇನ್ನೊಬ್ಬ ಗಾಯಗೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಟುಂಬ ಸದಸ್ಯರು ಕಸ್ಟಡಿ ಸಾವು ಎಂದು ಆರೋಪಿಸಿ ಸಮಲ್ಟಾ-ಕಪಶೇರಾ ರಸ್ತೆ ತಡೆದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಈ ನಡುವೆ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಯುತ್ತಿದೆ.

ಹೆಡ್ ಕಾನ್‌ಸ್ಟೆಬಲ್‌ ಬಲ್ಬರ್ ಸಿಂಗ್‌ ಮತ್ತು ಕಾನ್‌ಸ್ಟೆಬಲ್ ನಿತೇಶ್ ಅವರು ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಿತ್ಯ ಮೋಟಾ‌ರ್ ಸೈಕಲ್‌ನಲ್ಲಿ ಗಸ್ತಿನಲ್ಲಿದ್ದಾಗ, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಈ ಇಬ್ಬರು ಅನುಮಾನಾಸ್ಪದವಾಗಿ ವರ್ತಿಸಿದ್ದರು ನಂತರ ನಿಲ್ಲಿಸುವಂತೆ ಸೂಚಿಸಿದಾಗ, ಇಬ್ಬರು ಪರಾರಿಯಾಗಲು ಪ್ರಯತ್ನಿಸಿದರು. ತಕ್ಷಣ ಬೆನ್ನಟ್ಟಿ ಅವರಿಬ್ಬರನ್ನು ಬಂಧಿಸಲಾಯಿತು ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಸುರೇಂದ್ರ ಚೌಧರಿ ಹೇಳಿದರು.

ಬಂಧಿತ ವ್ಯಕ್ತಿಗಳನ್ನು ವಿಕಾಸ್ ಅಲಿಯಾಸ್ ಮಜ್ಜು (28) ಮತ್ತು ರವಿ ಸಾಕ್ಷಿ ಅಲಿಯಾಸ್ ರವಿ ಕಾಲಿಯಾ (19) ಎಂದು ಗುರುತಿಸಲಾಗಿದೆ. ಇಬ್ಬರೂ ದೆಹಲಿಯ ಸಮಲ್ಕಾ ನಿವಾಸಿಗಳು. ವಿಕಾಸ್‌ನಿಂದ ಕಂಟ್ರಿಮೇಡ್ ಪಿಸ್ತೂಲ್ ಮತ್ತು ಜೀವಂತ ಕಾಟ್ರಿಡ್ಜ್ ವಶಪಡಿಸಿಕೊಳ್ಳಲಾಗಿದೆ.

ಅವರು ಓಡಿಸುತ್ತಿದ್ದ ದ್ವಿಚಕ್ರ ವಾಹನವನ್ನು ಪಾಲಂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳ್ಳತನ ಮಾಡಿರುವುದು ಕಂಡುಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕಪಶೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಬ್ಬರನ್ನೂ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು, ಸರ್ಕಾರಿ ವಾಹನದಲ್ಲಿ ವಸಂತ್ ಕುಂಜ್‌ನ ಲಾಕಪ್‌ಗೆ ಕರೆದೊಯ್ಯುತ್ತಿದ್ದಾಗ, ವಾಹನವು ಪೊಲೀಸ್ ಠಾಣೆ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಇಬ್ಬರೂ ನಿಧಾನವಾಗಿ ಚಲಿಸುತ್ತಿದ್ದ ವ್ಯಾನ್‌ನಿಂದ ಜಿಗಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು.

ಜಿಗಿತದ ಕಾರಣದಿಂದಾಗಿ ಇಬ್ಬರಿಗೂ ಗಾಯಗಳಾಗಿವೆ. ಆದರೆ ರವಿ ಸಾಕ್ಷಿ ಅವರನ್ನು ಐಜಿಐ ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಸಣ್ಣಪುಟ್ಟ ಗಾಯಗೊಂಡಿರುವ ವಿಕಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ.

ರಾಜಕೀಯ

ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಕ್ಲಾಸ್-1 ಹುದ್ದೆ ನೀಡಿ; ಬಿ.ವೈ. ವಿಜಯೇಂದ್ರ ಪತ್ರ

ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಕ್ಲಾಸ್-1 ಹುದ್ದೆ ನೀಡಿ; ಬಿ.ವೈ. ವಿಜಯೇಂದ್ರ ಪತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಕ್ಲಾಸ್-1 ಹುದ್ದೆ

[ccc_my_favorite_select_button post_id="116777"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರ ರಂಗಪ ಸರ್ಕಲ್ ಬಳಿಯ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ (Shirdi Sai Baba temple) ಬುಧವಾರ ರಾತ್ರಿ ಹುಂಡಿ ಕಳ್ಳತನವಾಗಿದೆ.

[ccc_my_favorite_select_button post_id="116765"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!