Basava Jayanti celebrated with enthusiasm in Tubagere

ತೂಬಗೆರೆಯಲ್ಲಿ ಸಂಭ್ರಮದ ಬಸವ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹೋಬಳಿ ಘಟಕದ ವತಿಯಿಂದ ಬಸವ (Basavanna) ಜಯಂತಿ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಶ್ವಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಬಸವ ಜಯಂತಿಯನ್ನು ಆಚರಿಸಿದರು.  

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಾಸಭಾ ಜಿಲ್ಲಾ ಯುವ ಘಟಕದ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ, 12 ನೇ ಯ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು. 

ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ ಬಸವಣ್ಣನವರು.
ಭಾರತ ಸಂವಿಧಾನವು ಬಸವಣ್ಣನವರ ಆಶಯಗಳಿಗೆ ಪೂರಕವಾಗಿದೆ ಆದ್ದರಿಂದ ಬಸವಣ್ಣನನ್ನು ಸರ್ಕಾರ ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ.

ಈ ಮೇರು ವ್ಯಕ್ತಿಯ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಹಾಗೂ ಇಂದು ದೇಶದ ಸಂಸತ್ ಭವನದಲ್ಲಿ ಪ್ರಥಮಬಾರಿಗೆ ಬಸವ ಜಯಂತಿ ಆಚರಣೆ ನಡೆಯುತ್ತಿರುವುದು ಇಡೀ ರಾಜ್ಯದ ಗೌರವ ಎಂದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್ ಮಾತಾನಾಡಿ, ಬಸವ ಜಯಂತಿಯನ್ನು ನಮ್ಮ ಭಾಗದ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡಿ ಆಚರಿಸುತ್ತಾರೆ ಎಂದರು.

ವಾದ್ಯ -ಮೇಳದೊಂದಿಗೆ ಆರತಿ ಗಳನ್ನು ಹಿಡಿದ ಹೆಂಗಸರು, ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸವೇಶ್ವರಗೆ ಸ್ವಾಮಿ ಅರ್ಪಿಸಿದರು.

ನೂರಾರು ಭಕ್ತರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬಸವ ಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜಿಸಿ ಭಕ್ತಿಭಾವ ಮೆರೆದರು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ ನಡೆಯಿತು.

ವಿಶೇಷ ಪೂಜಾ ಕಾರ್ಯಕ್ರಮಗಳು ನಂತರ  ಸಂಜೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಯಿತು ವೀರಗಾಸೆ ಸೇರಿದಂತೆ ಅನೇಕ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ, ಕೆಪಿಸಿಸಿ ಸದಸ್ಯ ಎಸ್ ಆರ್ ಮುನಿರಾಜು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ವಕೀಲರಾದ ಪ್ರತಾಪ್, ಮುಖಂಡರಾದ ವೆಂಕಟೇಶ್, ಜಗನ್ನಾಥ, ಕನಕದಾಸ, ನಾರಾಯಣಪ್ಪ, ಮುರುಳಿ, ರವಿಸಿದ್ದಪ್ಪ, ಕಸಾಪ ಅಧ್ಯಕ್ಷ ಕುಮಾರ್, ನಿವೃತ್ತ ಯೋಧ ಗೋಪಾಲ್, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಜಗದೀಶ್ ಮತ್ತಿತರರು ಹಾಜರಿದ್ದರು.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!