Cmsiddaramaiah to visit Bengaluru Rural district on April 28

ಜಾತಿಗಣತಿಗೆ ಮುಂದಾದ ಕೇಂದ್ರ; Cmsiddaramaiah ಆಗ್ರಹವೇನು.?

ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಆಗ್ರಹಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು.

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ.

ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ.

ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು Cmsiddaramaiah ಹೇಳಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು ನೀಡಿದ್ದೇವೆ: ಆರ್‌.ಅಶೋಕ

ಕಾಂಗ್ರೆಸ್‌ ರಾಜ್ಯ ಸರ್ಕಾರದ ಆಡಳಿತಕ್ಕೆ ದಿವಾಳಿ ಆಫ್‌ ಮಾಡಲ್‌ ಕರ್ನಾಟಕ ಎಂಬ ಬಿರುದು

ಕಾಂಗ್ರೆಸ್‌ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಕ್ರೋಶ ವ್ಯಕ್ತಪಡಿಸಿದರು.

[ccc_my_favorite_select_button post_id="107616"]
ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ ಆಕ್ಷೇಪ

ಬೆಂಗಳೂರಲ್ಲಿ ಮಳೆ‌ ನೀರಿನಿಂದ ಅವಾಂತರ: ರಾಜ್ಯ ಸರಕಾರದ ಮೋಜು ಎಂದು ಬಿವೈ ವಿಜಯೇಂದ್ರ

ರಾಜ್ಯ ಸರಕಾರವು ಬೆಂಗಳೂರಿನಲ್ಲಿ ಮಳೆಗಾಲಕ್ಕೆ ಸಂಬಂಧಿಸಿದ ಪೂರ್ವಭಾವಿ ಕೆಲಸ ಮಾಡಿಸುವುದನ್ನು ಬಿಟ್ಟು ಮೋಜು ಮಾಡುತ್ತಿದೆ: ಬಿ.ವೈ.ವಿಜಯೇಂದ್ರ (BY Vijayendra)

[ccc_my_favorite_select_button post_id="107498"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಸುಳ್ಳು ಸುದ್ದಿ ಪ್ರಸಾರದ ಆರೋಪ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ FIR..!

ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ಹರಡಲು, ದುರುದ್ದೇಶಪೂರಿತ ಕ್ರಿಮಿನಲ್ ಪಿತೂರಿಯ ಆರೋದಡಿಯಲ್ಲಿ ಪತ್ರಕರ್ತ ಅರ್ನಾಬ್ (Arnab Goswami) ಗೋಸ್ವಾಮಿ ವಿರುದ್ಧ

[ccc_my_favorite_select_button post_id="107623"]
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. 6 ಮಂದಿ ದುರ್ಮರಣ

ಇಂದು (ಮೇ.21) ಬೆಳ್ಳಂಬೆಳಗ್ಗೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಜವರಾಯ ಅಟ್ಟಹಾಸ ಮೆರೆದಿದ್ದಾನೆ.

[ccc_my_favorite_select_button post_id="107558"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!