Making money is not the purpose of the legal profession: Cmsiddaramaiah

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಮಂಗಳವಾರ ಸಂಜೆ ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ವಾರ್ಷಿಕ ದಿನಾಚರಣೆ ಉದ್ಘಾಟಿಸಿ ಹಾಗೂ ವಕೀಲರ ವೇದಿಕೆ ಯ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೂಡಿಸಬೇಕು. ಯಾವುದೇ ಕಾರಣಕ್ಕೂ ಅನ್ಯಾಯದ ಪರ ನಿಲ್ಲಬಾರದು. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಕೀಲರು ಪ್ರಯತ್ನ ಮಾಡಬೇಕು ಎಂದರು.

ವಕೀಲರಿಗೆ ರಕ್ಷಣಾ ಕಾಯ್ದೆ: ಶಾಸಕಾಂಗದ ಪ್ರಯತ್ನ

‘ವಕೀಲರ ರಕ್ಷಣಾ ಕಾಯ್ದೆ ಬಹು ದಿನಗಳಿಂದ ಬೇಡಿಕೆಯಲ್ಲಿ ಇದ್ದಂತ
ವಿಚಾರ. ವಕೀಲರಿಗೆ ರಕ್ಷಣೆ ಅಗತ್ಯವಿದ್ದು, ಅದಕ್ಕೊಂದು ಕಾನೂನಿನ ಚೌಕಟ್ಟನ್ನು ಒದಗಿಸಿಕೊಡಲು ಶಾಸಕಾಂಗ ಪ್ರಯತ್ನ ಮಾಡಿದ್ದು, ಅದರ ಫಲಶ್ರುತಿಯಾಗಿಯೇ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬಂದಿದೆ ಎಂದರು.

ಹಿಂದೆ ವಕೀಲರಿಗೆ ಭರವಸೆ ನೀಡಿದ್ದಂತೆ ಕಾಯ್ದೆ ರೂಪಿಸಿದ್ದೇವೆ. ಇಂದಿನ ದಿನಗಳಲ್ಲಿ ವಕೀಲರು ಬೆದರಿಕೆ, ಕಿರುಕುಳ, ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುವಂತಹ ಅನೇಕ ಆತಂಕಗಳನ್ನು ಎದುರಿಸುತ್ತಿದ್ದಾರೆ ‌. ಇದಕ್ಕೆಲ್ಲ ಕಡಿವಾಣ ಹಾಕಲು ಒಂದು ಕಾಯ್ದೆಯ ಅವಶ್ಯಕತೆ ಇದೆ.ಆ ಕಾಯ್ದೆ ಅತ್ಯಂತ ಅವಶ್ಯ ಎಂದು ಮನಗಂಡು ವಿಧಾನಸಭೆ, ಪರಿಷತ್ ಎರಡೂ ಕಡೆ ಮಂಡಿಸಿ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತ ಪಡೆದು ಈಗ ಕಾಯ್ದೆಯಾಗಿದೆ. ಈ ಕಾಯ್ದೆ ಯಿಂದಾಗಿ ವಕೀಲರಿಗೆ ರಕ್ಷಣೆ ಸಿಕ್ಕಿದೆ. ಕಾಯ್ದೆಯಿಂದ
ಕೇವಲ ನಿಮ್ಮ ರಕ್ಷಣೆ ಆದರೆ ಸಾಲದು ನಾಡಿನ ಜನರ, ನ್ಯಾಯ ಕೇಳಿ ಬರುವವರ ರಕ್ಷಣೆ ಆಗಬೇಕು ಎಂದರು.

ಸಂವಿಧಾನ ಓದಿ, ಪಾಲಿಸಿ

ಕೇವಲ ಸಂವಿಧಾನ ಪರಿಣಿತರೇ ಸಂವಿಧಾನವನ್ನು ಓದಬೇಕೆಂದೇನೂ ಇಲ್ಲ. ಆ ಭಾವನೆ ಬಿಟ್ಟು ವಕೀಲ ವೃತ್ತಿಯಲ್ಲಿ ಇರುವ ಎಲ್ಲರೂ, ಪ್ರತಿಯೊಬ್ಬರೂ ಸಂವಿಧಾನದ ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಪಾಲಿಸಬೇಕು. ನಮ್ಮದು ಅತ್ಯಂತ ಶ್ರೇಷ್ಠ ಸಂವಿಧಾನ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ, ನಮ್ಮ ಸಮಾಜಕ್ಕೆ ಅನುಗುಣವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ ಎಂದರು.

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ ನ್ಯಾಯ ಕೊಡಿಸುವುದು ಉದ್ದೇಶವಾಗಬೇಕು.

ತ್ವರಿತವಾಗಿ ನ್ಯಾಯ ಸಿಗುವ ರೀತಿ ಮಾಡಬೇಕು. ನ್ಯಾಯ ವಿಳಂಬವಾದರೆ, ನ್ಯಾಯವನ್ನು ನಿರಾಕರಿಸಿದಂತೆ ಎಂಬ ಮಾತನ್ನು ನೆನಪಿಡಬೇಕು. ಇದು ವಕೀಲರ ದಿನನಿತ್ಯದ ಮಂತ್ರವಾಗಬೇಕು. ವಕೀಲರು ಮನಸ್ಸು ಮಾಡಿದರೆ ವಿಳಂಬವಾಗುವುದನ್ನು ತಪ್ಪಿಸಬಹುದು ಎಂದರು.

ಪ್ರಕರಣಗಳನ್ನು ವರ್ಷಾನುಗಟ್ಟಲೆ ಎಳೆಯಬಾರದು

ಸತ್ಯ, ಸತ್ವ, ಸಾಕ್ಷ್ಯಾಧಾರಗಳಿಲ್ಲದ ಪ್ರಕರಣಗಳನ್ನು ವರ್ಷಾನುಗಟ್ಟಲೆ ಎಳೆಯಬಾರದು ಎಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಅಶಕ್ತರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಬೇಕು. ಕಕ್ಷಿದಾರರ ಆರ್ಥಿಕ, ಸಾಮಾಜಿಕ ಪರಿಸ್ಥಿತಿ ನೋಡಿಕೊಂಡು ಶುಲ್ಕ ಪಡೆಯಬೇಕೆಂದರು. ನ್ಯಾಯ ಕೊಡಿಸುವ ಕೆಲಸವನ್ನು ಮಾಡಲೇಬೇಕು ಎಂದರು.

ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು

ಸರ್ಕಾರಿ ವಕೀಲರು ಹೆಚ್ಚು ಮಾತನಾಡುವುದಿಲ್ಲ ಎಂಬ ಆರೋಪವಿದೆ. ಪ್ರಕರಣವನ್ನು ಚೆನ್ನಾಗಿ ಓದಿ, ಸರಿಯಾದ ರೀತಿಯಲ್ಲಿ ನ್ಯಾಯಾಧೀಶರ ಮುಂದೆ ವಿಷಯ ಮಂಡಿಸಬೇಕು ಹಾಗು ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು ಎಂದರು.

ಬೆಂಗಳೂರಿನ ವಕೀಲರ ಸಂಘ ಏಷ್ಯಾ ಖಂಡದಲ್ಲೇ ಅತ್ಯಂತ ದೊಡ್ಡ ಸಂಘವಾಗಿದ್ದು 25 ಸಾವಿರ ಸದಸ್ಯರನ್ನು ಹೊಂದಿರುವುದು ಸಣ್ಣ ಸಂಗತಿಯೇನಲ್ಲ ಎಂದರು.

ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ

ವಕೀಲ ಸಂಘದವರು ಸಲ್ಲಿಸಿರುವ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ನಿಧಿಗೆ ಅನುದಾನವನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು ಸರ್ವೋಚ್ಚ ನ್ಯಾಯಾಲಯ ಪೀಠದ ಬಗ್ಗೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಬೇಸಿಗೆ ರಜೆಗೆ ಹಾರೈಕೆ

ಪ್ರತಿನಿತ್ಯ ಕೋರ್ಟ್ ಕಲಾಪಗಳಲ್ಲೇ ತೊಡಗಿರುವ ವಕೀಲರಿಗೆ ಬೇಸಿಗೆ ರಜೆ ಸಂಜೀವಿನಿಯಂತೆ‌. ಮೇ 2ರಿಂದ ಶುರುವಾಗುವ ಬೇಸಿಗೆ ರಜೆ ಕುಟುಂಬದೊಡನೆ ಸುಖಕರವಾಗಿ ಕಳೆಯಿರಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!