ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

Making money is not the purpose of the legal profession: Cmsiddaramaiah

ಬೆಂಗಳೂರು: ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಮಂಗಳವಾರ ಸಂಜೆ ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ವಾರ್ಷಿಕ ದಿನಾಚರಣೆ ಉದ್ಘಾಟಿಸಿ ಹಾಗೂ ವಕೀಲರ ವೇದಿಕೆ ಯ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೂಡಿಸಬೇಕು. ಯಾವುದೇ ಕಾರಣಕ್ಕೂ ಅನ್ಯಾಯದ ಪರ ನಿಲ್ಲಬಾರದು. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಕೀಲರು ಪ್ರಯತ್ನ ಮಾಡಬೇಕು ಎಂದರು.

ವಕೀಲರಿಗೆ ರಕ್ಷಣಾ ಕಾಯ್ದೆ: ಶಾಸಕಾಂಗದ ಪ್ರಯತ್ನ

‘ವಕೀಲರ ರಕ್ಷಣಾ ಕಾಯ್ದೆ ಬಹು ದಿನಗಳಿಂದ ಬೇಡಿಕೆಯಲ್ಲಿ ಇದ್ದಂತ
ವಿಚಾರ. ವಕೀಲರಿಗೆ ರಕ್ಷಣೆ ಅಗತ್ಯವಿದ್ದು, ಅದಕ್ಕೊಂದು ಕಾನೂನಿನ ಚೌಕಟ್ಟನ್ನು ಒದಗಿಸಿಕೊಡಲು ಶಾಸಕಾಂಗ ಪ್ರಯತ್ನ ಮಾಡಿದ್ದು, ಅದರ ಫಲಶ್ರುತಿಯಾಗಿಯೇ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬಂದಿದೆ ಎಂದರು.

ಹಿಂದೆ ವಕೀಲರಿಗೆ ಭರವಸೆ ನೀಡಿದ್ದಂತೆ ಕಾಯ್ದೆ ರೂಪಿಸಿದ್ದೇವೆ. ಇಂದಿನ ದಿನಗಳಲ್ಲಿ ವಕೀಲರು ಬೆದರಿಕೆ, ಕಿರುಕುಳ, ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುವಂತಹ ಅನೇಕ ಆತಂಕಗಳನ್ನು ಎದುರಿಸುತ್ತಿದ್ದಾರೆ ‌. ಇದಕ್ಕೆಲ್ಲ ಕಡಿವಾಣ ಹಾಕಲು ಒಂದು ಕಾಯ್ದೆಯ ಅವಶ್ಯಕತೆ ಇದೆ.ಆ ಕಾಯ್ದೆ ಅತ್ಯಂತ ಅವಶ್ಯ ಎಂದು ಮನಗಂಡು ವಿಧಾನಸಭೆ, ಪರಿಷತ್ ಎರಡೂ ಕಡೆ ಮಂಡಿಸಿ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತ ಪಡೆದು ಈಗ ಕಾಯ್ದೆಯಾಗಿದೆ. ಈ ಕಾಯ್ದೆ ಯಿಂದಾಗಿ ವಕೀಲರಿಗೆ ರಕ್ಷಣೆ ಸಿಕ್ಕಿದೆ. ಕಾಯ್ದೆಯಿಂದ
ಕೇವಲ ನಿಮ್ಮ ರಕ್ಷಣೆ ಆದರೆ ಸಾಲದು ನಾಡಿನ ಜನರ, ನ್ಯಾಯ ಕೇಳಿ ಬರುವವರ ರಕ್ಷಣೆ ಆಗಬೇಕು ಎಂದರು.

ಸಂವಿಧಾನ ಓದಿ, ಪಾಲಿಸಿ

ಕೇವಲ ಸಂವಿಧಾನ ಪರಿಣಿತರೇ ಸಂವಿಧಾನವನ್ನು ಓದಬೇಕೆಂದೇನೂ ಇಲ್ಲ. ಆ ಭಾವನೆ ಬಿಟ್ಟು ವಕೀಲ ವೃತ್ತಿಯಲ್ಲಿ ಇರುವ ಎಲ್ಲರೂ, ಪ್ರತಿಯೊಬ್ಬರೂ ಸಂವಿಧಾನದ ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಪಾಲಿಸಬೇಕು. ನಮ್ಮದು ಅತ್ಯಂತ ಶ್ರೇಷ್ಠ ಸಂವಿಧಾನ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ, ನಮ್ಮ ಸಮಾಜಕ್ಕೆ ಅನುಗುಣವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ ಎಂದರು.

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ ನ್ಯಾಯ ಕೊಡಿಸುವುದು ಉದ್ದೇಶವಾಗಬೇಕು.

ತ್ವರಿತವಾಗಿ ನ್ಯಾಯ ಸಿಗುವ ರೀತಿ ಮಾಡಬೇಕು. ನ್ಯಾಯ ವಿಳಂಬವಾದರೆ, ನ್ಯಾಯವನ್ನು ನಿರಾಕರಿಸಿದಂತೆ ಎಂಬ ಮಾತನ್ನು ನೆನಪಿಡಬೇಕು. ಇದು ವಕೀಲರ ದಿನನಿತ್ಯದ ಮಂತ್ರವಾಗಬೇಕು. ವಕೀಲರು ಮನಸ್ಸು ಮಾಡಿದರೆ ವಿಳಂಬವಾಗುವುದನ್ನು ತಪ್ಪಿಸಬಹುದು ಎಂದರು.

ಪ್ರಕರಣಗಳನ್ನು ವರ್ಷಾನುಗಟ್ಟಲೆ ಎಳೆಯಬಾರದು

ಸತ್ಯ, ಸತ್ವ, ಸಾಕ್ಷ್ಯಾಧಾರಗಳಿಲ್ಲದ ಪ್ರಕರಣಗಳನ್ನು ವರ್ಷಾನುಗಟ್ಟಲೆ ಎಳೆಯಬಾರದು ಎಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಅಶಕ್ತರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಬೇಕು. ಕಕ್ಷಿದಾರರ ಆರ್ಥಿಕ, ಸಾಮಾಜಿಕ ಪರಿಸ್ಥಿತಿ ನೋಡಿಕೊಂಡು ಶುಲ್ಕ ಪಡೆಯಬೇಕೆಂದರು. ನ್ಯಾಯ ಕೊಡಿಸುವ ಕೆಲಸವನ್ನು ಮಾಡಲೇಬೇಕು ಎಂದರು.

ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು

ಸರ್ಕಾರಿ ವಕೀಲರು ಹೆಚ್ಚು ಮಾತನಾಡುವುದಿಲ್ಲ ಎಂಬ ಆರೋಪವಿದೆ. ಪ್ರಕರಣವನ್ನು ಚೆನ್ನಾಗಿ ಓದಿ, ಸರಿಯಾದ ರೀತಿಯಲ್ಲಿ ನ್ಯಾಯಾಧೀಶರ ಮುಂದೆ ವಿಷಯ ಮಂಡಿಸಬೇಕು ಹಾಗು ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು ಎಂದರು.

ಬೆಂಗಳೂರಿನ ವಕೀಲರ ಸಂಘ ಏಷ್ಯಾ ಖಂಡದಲ್ಲೇ ಅತ್ಯಂತ ದೊಡ್ಡ ಸಂಘವಾಗಿದ್ದು 25 ಸಾವಿರ ಸದಸ್ಯರನ್ನು ಹೊಂದಿರುವುದು ಸಣ್ಣ ಸಂಗತಿಯೇನಲ್ಲ ಎಂದರು.

ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ

ವಕೀಲ ಸಂಘದವರು ಸಲ್ಲಿಸಿರುವ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ನಿಧಿಗೆ ಅನುದಾನವನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು ಸರ್ವೋಚ್ಚ ನ್ಯಾಯಾಲಯ ಪೀಠದ ಬಗ್ಗೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಬೇಸಿಗೆ ರಜೆಗೆ ಹಾರೈಕೆ

ಪ್ರತಿನಿತ್ಯ ಕೋರ್ಟ್ ಕಲಾಪಗಳಲ್ಲೇ ತೊಡಗಿರುವ ವಕೀಲರಿಗೆ ಬೇಸಿಗೆ ರಜೆ ಸಂಜೀವಿನಿಯಂತೆ‌. ಮೇ 2ರಿಂದ ಶುರುವಾಗುವ ಬೇಸಿಗೆ ರಜೆ ಕುಟುಂಬದೊಡನೆ ಸುಖಕರವಾಗಿ ಕಳೆಯಿರಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]