ಚಿಕ್ಕಬಳ್ಳಾಪುರ: ಸಿನಿಮೀಯ ಶೈಲಿಯಲ್ಲಿ ಉತ್ತರಪ್ರದೇಶದಿಂದ ಬೆಂಗಳೂರಿಗೆ ರವಾನೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಬರೋಬ್ಬರಿ 5140 ಮೊಬೈಲ್ ಗಳನ್ನ (Mobile) ಕಳವು ಮಾಡಿದ್ದ ಖತರ್ನಾಕ್ ಕಳ್ಳರನ್ನ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂದಹಾಗೆ ನವೆಂಬರ್ 23 ರಂದು ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ರೆಡ್ಡಿಗೊಲ್ಲವಾರಹಳ್ಳಿ ಬಳಿ ಡಾಬಾ ವೊಂದರ ಬಳಿ ನಿಲ್ಲಿಸಿದ್ದ ಟ್ರಕ್ ಗೆ ಚಾಲಕನ ಕ್ಯಾಬಿನ್ ನಿಂದಲೇ ಕನ್ನ ಕೊರೆದು ಮೊಬೈಲ್ ಗಳನ್ನ ಮತ್ತೊಂದು ಟ್ರಕ್ ಗೆ ತುಂಬಿಕೊಂಡು ಹೋಗಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೇರೇಸಂದ್ರ ಹಾಗೂ ಸೆನ್ ಪೊಲೀಸರು ಹರಿಯಾಣ, ರಾಜಸ್ತಾನ, ಸೇರಿದಂತೆ ಪಶ್ಚಿಮಬಂಗಾಳ ಮೂರು ಕಡೆ ಕಾರ್ಯಾಚರಣೆ ಮಾಡಿ 7 ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಟ್ರಕ್ ಚಾಲಕ ರಾಹುಲ್, ಇಮ್ರಾನ್, ಮಹಮದ್ ಮುಸ್ತಾಫಾ, ಅನೂಪ್ ರಾಯ್, ಅಭಿಜಿತ್ ಪೌಲ್, ಸಕೃಲ್ಲಾ, ಹಾಗೂ ಯೂಸುಫ್ ಖಾನ್ ನನ್ನ ಬಂಧಿಸಿದ್ದಾರೆ.
ಬಂಧಿತರಿಂದ ಮೊಬೈಲ್ ಸಾಗಾಟ ಮಾಡಲು ಬಳಸಿದ್ದ ಟ್ರಕ್ ಸೇರಿದಂತೆ ಕಳವು ಮಾಡಿದ್ದ 5140 ಮೊಬೈಲ್ ಗಳ ಪೈಕಿ 56 ಮೊಬೈಲ್ ಗಳನ್ನ ಸೀಝ್ ಮಾಡಿಕೊಳ್ಳಲಾಗಿದೆ.
ಇನ್ನೂ ಕಳ್ಳರು ಕಳವು ಮಾಡಿದ ಎಲ್ಲಾ ಮೊಬೈಲ್ ಗಳನ್ನ ದೆಹಲಿಯಲ್ಲಿ ಮಾರಾಟ ಮಾಡಿದ್ದು ಅಲ್ಲಿಂದ ಮೊಬೈಲ್ ಗಳು ದೇಶದ ನಾನಾ ರಾಜ್ಯಗಳಿಗೆ ಸಪ್ಲೈ ಆಗಿವೆ. ಇನ್ನೂ ಸರಿಸುಮಾರು 4 ಕೋಟಿ ಮೌಲ್ಯದ ಮೊಬೈಲ್ ಗಳನ್ನ ಕಳ್ಳರು ಕೇವಲ 90 ಲಕ್ಷ ರೂಪಾಯಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಾರೆ.
ಈ ಸಂಬಂಧ ಆರೋಪಿಗಳ ಖಾತೆಯಲ್ಲಿದ್ದ 20 ಲಕ್ಷ ಹಣ ಸಹ ಸೀಝ್ ಮಾಡಿಕೊಳ್ಳಲಾಗಿದೆ..
ಇನ್ನೂ ಬಂಧನದ ವೇಳೆ ಹರಿಯಾಣದ ಪಲ್ವಾಲಾ ಜಿಲ್ಲೆಯ ಆಲಿಮಿಯೋ ಗ್ರಾಮದವರಾಗಿರೋ ಕಳ್ಳರು ಪೊಲೀಸರ ಮೇಲೆಯೇ ಆಟ್ಯಾಕ್ ಮಾಡಿದ್ರೂ ಸಾಕಷ್ಟು ಹರಸಹಾಸ ಪಟ್ಟು ಕಳ್ಳರನ್ನ ಬಂಧಿಸಿ ಕರೆತರುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.