Jagajyoti Basaveshwara

ಪ್ರಧಾನಿ ಮೋದಿ ಆಧುನಿಕ ಪ್ರಪಂಚದ ಬಸವಣ್ಣ: ಕೇಂದ್ರ ಸಚಿವ ವಿ.ಸೋಮಣ್ಣ ಬಣ್ಣನೆ

ನವದೆಹಲಿ: ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ (Jagajyoti Basavanna )894ನೇ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮುಖೇನ ಆಯೋಜಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ.

ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ಆಹ್ವಾನಿಸಿದ್ದರು.

ಕಾರ್ಯಕ್ರಮದ ಆಯೋಜನೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾರವರು ಅನುಮತಿ ನೀಡಿ ಬಸವೇಶ್ವರರ ಪುತ್ಥಳಿಗೆ ಅಪಾರ ಗೌರವ ಸಲ್ಲಿಸಲು ಕಾರಣಿಕರ್ತರಾಗಿದ್ದಾರೆಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣನವರು, ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಶ್ರೀ ಬಸವೇಶ್ವರರು ಎಂದಿದ್ದಾರೆ.

ಬಸವಣ್ಣನವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಸಾಮಾನ್ಯ ಬದುಕಿನ ಎಲ್ಲಾ ಸ್ಥರಗಳು ಆ ಚಳುವಳಿಯ ಒಂದು ಭಾಗವಾದ್ದದ್ದು ಶರಣರ ಪೂರ್ಣ ದೃಷ್ಟಿಯ ಸಂಕೇತ ಎಂದು ಮಾದ್ಯಮಕ್ಕೆ ತಿಳಿಸಿದ್ದಾರೆ.

ಬಸವಣ್ಣನವರು ವಿದ್ಯೆಯೆಂಬ ಆಯುಧವನ್ನು ಸಮಾಜದ ಎಲ್ಲಾ ವರ್ಗದ ಹಿಂದುಳಿದವರ, ಶೋಷಿತ ವರ್ಗದ ಹಾಗೂ ಮಹಿಳೆಯರ ಉದ್ಧಾರಕ್ಕಾಗಿ ತೊಡಗಿಸಿಕೊಂಡಿದ್ದರು. ಜೀವನದ ಸತ್ಯತೆಗಳನ್ನು ಸಾಮಾನ್ಯರಿಗೆ ತಲುಪಿಸುವಲ್ಲಿ ಬಸವಣ್ಣನವರ ವಚನಗಳು ಬಹು ಮುಖ್ಯ ಪಾತ್ರ ವಹಿಸಿದೆ ಎಂದು ಸೋಮಣ್ಣ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಇಂದು ಮಾತನಾಡಿದ್ದಾರೆ.

ಬಸವಣ್ಣನವರ ಅನುಭವ ಮಂಟಪ ಸಮಾಜದ ಎಲ್ಲಾ ವರ್ಗಗಳ ಪ್ರತಿನಿಧಿತ್ವದೊಂದಿಗೆ ಲಿಂಗಬೇದ ರಹಿತ ಸಮಾನತೆಯೊಂದಿಗೆ ಅಭಿವ್ಯಕ್ತಿ ಸ್ವಾತಂತ್ಯದ ವೇದಿಕೆಯಾಗಿತ್ತು. ಅನುಭವ ಮಂಟಪದ ಆ ವೇದಿಕೆಯೆ ಇಂದಿನ ನಮ್ಮ ಮುಂದಿರುವ ಸಂಸತ್ತು ಎಂದು ವಿ. ಸೋಮಣ್ಣ ಪುನರುಚ್ಚರಿಸಿದ್ದಾರೆ.

ಇಂಗ್ಲೆಡ್‌ನಲ್ಲಿ ಮ್ಯಾಗ್ನಾ ಕಾರ್ಟರ ಪರಿಕಲ್ಪನೆಯ ಸಂಸತ್ತು ಜಾರಿಗೆ ಬರುವ ಮೊದಲೇ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಬಸವಣ್ಣನವರು ಸಂಸತ್ತಿನ ಪರಿಕಲ್ಪನೆ ಸೃಷ್ಟಿಸಿದ್ದು – ಅನುಭವ ಮಂಟಪ ರೂವಾರಿಯಾಗಿದ್ದರು ಎಂದು ಅನುಭವ ಮಂಟಪದ ಹಿರಿಮೆ ಗರಿಮೆಯನ್ನು ಇಂದು ಸೋಮಣ್ಣ ಸಂಸತ್ತಿನಲ್ಲಿ ಆವರಣದಲ್ಲಿ ಕೊಂಡಾಡಿದ್ದಾರೆ.

ಬಸವಣ್ಣನವರ ಕಾಯಕ ತತ್ವದ ಪ್ರತಿಪಾದನೆಯಲ್ಲಿಯೇ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಈ ದೇಶವನ್ನು ಮುನ್ನೆಡಿಸುತ್ತಿದ್ದಾರೆ.

ಬಸವಣ್ಣನವರು 12ನೇ ಶತಮಾನದಲ್ಲಿ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ – ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ನಿಮ್ಮ ಮನೆಯ ಮಗನೆಂದೆನಿಸಯ್ಯಾ ಎಂಬ ಸೂತ್ರವನ್ನು ಜಗಜ್ಯೋತಿ ಬಸವಣ್ಣನವರು ಜಗತ್ತಿಗೆ ಪರಿಚಯಿಸಿದ್ರು.

ಇಂದು 21ನೇ ಶತಮಾನದಲ್ಲಿ ಇದೇ ತತ್ವದಡಿಯಲ್ಲಿ ಕಾಯಕ ಮಾಡುತ್ತಿದ್ದಾರೆ ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಪ್ರಬಲ ರಾಷ್ಟçವಾಗಬೇಕೆಂಬ ಹಂಬಲದಿAದ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್, ಎಂಬ ಧ್ಯೇಯ ಮಂತ್ರದೊಂದಿಗೆ ಪ್ರಧಾನಿ ಮೋದಿಯವರು ಈ ದೇಶವನ್ನು ಮುನ್ನೇಡುಸುತ್ತಿದ್ದಾರೆ ಮೋದಿಯವರು ಆಧುನಿಕ ಭಾರತದ “ಕಾಯಕಯೋಗಿ ಬಸವಣ್ಣ” ಎಂದರೆ ತಪ್ಪಾಗಲಾರದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ನವದೆಹಲಿಯಲ್ಲಿ ಬಸವಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಜಗಜ್ಯೋತಿ ಬಸವಣ್ಣನವರ 894ನೇ ಜಯಂತಿಯನ್ನು ಸಂಸತ್ತಿನ ಆವರಣದಲ್ಲಿ ಅಚರಿಸಲು ಸನ್ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮತ್ತು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು ಅನುಮತಿಯನ್ನು ನೀಡಿದ್ದಾರೆ.
ಬಸವಮೂರ್ತಿ ಸಂಸತ್ತಿನ ಆವರಣದಲ್ಲಿ ಸ್ಥಾಪನೆಯಾಗಿ ಸುಮಾರು 22 ವರ್ಷಗಳ ನಂತರ ಇಂತಹ ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸಿಲು ಅವಕಾಶ ಸಿಕ್ಕಿದೆ. ಇದು ಕನ್ನಡ ನಾಡಿನ ಸಮಸ್ತ ಜನತೆಗೆ ಸಂಸತ್ತಿನ ಮುಖೇನ ಭಾರತ ಸರ್ಕಾರ ನೀಡಿದ ಮಹಾ ಗೌರವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ರಾಜಕೀಯ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್ ಗಾಂಧಿ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್

ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತೇನೆ, ಮೋದಿ ಮೇಲೆ ಟ್ರಂಪ್ ಒತ್ತಡವಿದ್ದು, ಇವರು ಒಪ್ಪಂದವನ್ನು ರದ್ದು ಮಾಡಲು ಸಾಧ್ಯವಿಲ್ಲ. ಎಫ್ಸ್ಟೀನ್ ಫೈಲ್ ದಮ್ಕಿ ಮಾಡುತ್ತಿದ್ದಾರೆ. ಅಲ್ಲದೆ ಅದಾನಿಯ ಕ್ರಿಮಿನಲ್ ಕೇಸ್ ಇವರ ತಲೆಯ ಮೇಲೆ ಕುಳಿತಿದೆ: ರಾಹುಲ್

[ccc_my_favorite_select_button post_id="119731"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!