ಪ್ರಧಾನಿ ಮೋದಿ ಆಧುನಿಕ ಪ್ರಪಂಚದ ಬಸವಣ್ಣ: ಕೇಂದ್ರ ಸಚಿವ ವಿ.ಸೋಮಣ್ಣ ಬಣ್ಣನೆ

Jagajyoti Basaveshwara

ನವದೆಹಲಿ: ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ (Jagajyoti Basavanna )894ನೇ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮುಖೇನ ಆಯೋಜಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ.

ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ಆಹ್ವಾನಿಸಿದ್ದರು.

ಕಾರ್ಯಕ್ರಮದ ಆಯೋಜನೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾರವರು ಅನುಮತಿ ನೀಡಿ ಬಸವೇಶ್ವರರ ಪುತ್ಥಳಿಗೆ ಅಪಾರ ಗೌರವ ಸಲ್ಲಿಸಲು ಕಾರಣಿಕರ್ತರಾಗಿದ್ದಾರೆಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣನವರು, ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಶ್ರೀ ಬಸವೇಶ್ವರರು ಎಂದಿದ್ದಾರೆ.

ಬಸವಣ್ಣನವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಸಾಮಾನ್ಯ ಬದುಕಿನ ಎಲ್ಲಾ ಸ್ಥರಗಳು ಆ ಚಳುವಳಿಯ ಒಂದು ಭಾಗವಾದ್ದದ್ದು ಶರಣರ ಪೂರ್ಣ ದೃಷ್ಟಿಯ ಸಂಕೇತ ಎಂದು ಮಾದ್ಯಮಕ್ಕೆ ತಿಳಿಸಿದ್ದಾರೆ.

ಬಸವಣ್ಣನವರು ವಿದ್ಯೆಯೆಂಬ ಆಯುಧವನ್ನು ಸಮಾಜದ ಎಲ್ಲಾ ವರ್ಗದ ಹಿಂದುಳಿದವರ, ಶೋಷಿತ ವರ್ಗದ ಹಾಗೂ ಮಹಿಳೆಯರ ಉದ್ಧಾರಕ್ಕಾಗಿ ತೊಡಗಿಸಿಕೊಂಡಿದ್ದರು. ಜೀವನದ ಸತ್ಯತೆಗಳನ್ನು ಸಾಮಾನ್ಯರಿಗೆ ತಲುಪಿಸುವಲ್ಲಿ ಬಸವಣ್ಣನವರ ವಚನಗಳು ಬಹು ಮುಖ್ಯ ಪಾತ್ರ ವಹಿಸಿದೆ ಎಂದು ಸೋಮಣ್ಣ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಇಂದು ಮಾತನಾಡಿದ್ದಾರೆ.

ಬಸವಣ್ಣನವರ ಅನುಭವ ಮಂಟಪ ಸಮಾಜದ ಎಲ್ಲಾ ವರ್ಗಗಳ ಪ್ರತಿನಿಧಿತ್ವದೊಂದಿಗೆ ಲಿಂಗಬೇದ ರಹಿತ ಸಮಾನತೆಯೊಂದಿಗೆ ಅಭಿವ್ಯಕ್ತಿ ಸ್ವಾತಂತ್ಯದ ವೇದಿಕೆಯಾಗಿತ್ತು. ಅನುಭವ ಮಂಟಪದ ಆ ವೇದಿಕೆಯೆ ಇಂದಿನ ನಮ್ಮ ಮುಂದಿರುವ ಸಂಸತ್ತು ಎಂದು ವಿ. ಸೋಮಣ್ಣ ಪುನರುಚ್ಚರಿಸಿದ್ದಾರೆ.

ಇಂಗ್ಲೆಡ್‌ನಲ್ಲಿ ಮ್ಯಾಗ್ನಾ ಕಾರ್ಟರ ಪರಿಕಲ್ಪನೆಯ ಸಂಸತ್ತು ಜಾರಿಗೆ ಬರುವ ಮೊದಲೇ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಬಸವಣ್ಣನವರು ಸಂಸತ್ತಿನ ಪರಿಕಲ್ಪನೆ ಸೃಷ್ಟಿಸಿದ್ದು – ಅನುಭವ ಮಂಟಪ ರೂವಾರಿಯಾಗಿದ್ದರು ಎಂದು ಅನುಭವ ಮಂಟಪದ ಹಿರಿಮೆ ಗರಿಮೆಯನ್ನು ಇಂದು ಸೋಮಣ್ಣ ಸಂಸತ್ತಿನಲ್ಲಿ ಆವರಣದಲ್ಲಿ ಕೊಂಡಾಡಿದ್ದಾರೆ.

ಬಸವಣ್ಣನವರ ಕಾಯಕ ತತ್ವದ ಪ್ರತಿಪಾದನೆಯಲ್ಲಿಯೇ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಈ ದೇಶವನ್ನು ಮುನ್ನೆಡಿಸುತ್ತಿದ್ದಾರೆ.

ಬಸವಣ್ಣನವರು 12ನೇ ಶತಮಾನದಲ್ಲಿ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ – ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ನಿಮ್ಮ ಮನೆಯ ಮಗನೆಂದೆನಿಸಯ್ಯಾ ಎಂಬ ಸೂತ್ರವನ್ನು ಜಗಜ್ಯೋತಿ ಬಸವಣ್ಣನವರು ಜಗತ್ತಿಗೆ ಪರಿಚಯಿಸಿದ್ರು.

ಇಂದು 21ನೇ ಶತಮಾನದಲ್ಲಿ ಇದೇ ತತ್ವದಡಿಯಲ್ಲಿ ಕಾಯಕ ಮಾಡುತ್ತಿದ್ದಾರೆ ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಪ್ರಬಲ ರಾಷ್ಟçವಾಗಬೇಕೆಂಬ ಹಂಬಲದಿAದ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್, ಎಂಬ ಧ್ಯೇಯ ಮಂತ್ರದೊಂದಿಗೆ ಪ್ರಧಾನಿ ಮೋದಿಯವರು ಈ ದೇಶವನ್ನು ಮುನ್ನೇಡುಸುತ್ತಿದ್ದಾರೆ ಮೋದಿಯವರು ಆಧುನಿಕ ಭಾರತದ “ಕಾಯಕಯೋಗಿ ಬಸವಣ್ಣ” ಎಂದರೆ ತಪ್ಪಾಗಲಾರದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ನವದೆಹಲಿಯಲ್ಲಿ ಬಸವಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಜಗಜ್ಯೋತಿ ಬಸವಣ್ಣನವರ 894ನೇ ಜಯಂತಿಯನ್ನು ಸಂಸತ್ತಿನ ಆವರಣದಲ್ಲಿ ಅಚರಿಸಲು ಸನ್ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮತ್ತು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು ಅನುಮತಿಯನ್ನು ನೀಡಿದ್ದಾರೆ.
ಬಸವಮೂರ್ತಿ ಸಂಸತ್ತಿನ ಆವರಣದಲ್ಲಿ ಸ್ಥಾಪನೆಯಾಗಿ ಸುಮಾರು 22 ವರ್ಷಗಳ ನಂತರ ಇಂತಹ ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸಿಲು ಅವಕಾಶ ಸಿಕ್ಕಿದೆ. ಇದು ಕನ್ನಡ ನಾಡಿನ ಸಮಸ್ತ ಜನತೆಗೆ ಸಂಸತ್ತಿನ ಮುಖೇನ ಭಾರತ ಸರ್ಕಾರ ನೀಡಿದ ಮಹಾ ಗೌರವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!