Center's Caste Census: Itishree for Caste Poison Seed Ploy - BYVijayendra

ಕೇಂದ್ರದ ಜಾತಿ ಜನಗಣತಿ: ಜಾತಿ ವಿಷಬೀಜ ಬಿತ್ತುವ ಕುತಂತ್ರಕ್ಕೆ ಇತಿಶ್ರೀ – ಬಿ.ವೈ.ವಿಜಯೇಂದ್ರ

ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದರು. ಕೇಂದ್ರ ಸರಕಾರ ಜಾತಿ ಜನಗಣತಿ (Caste census) ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರವು ಬಹಳ ಉತ್ತಮ ನಿರ್ಧಾರ ಕೈಗೊಂಡಿದೆ. ನಿನ್ನೆಯ ಸಂಪುಟ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿ ಜನಗಣತಿ ಮಾಡುವ ಪ್ರಮುಖ ನಿರ್ಧಾರ ಮಾಡಿದ್ದು ಸ್ವಾಗತಾರ್ಹ ಎಂದರು.

ಭಾರತದಲ್ಲಿ 1931ರ ನಂತರ ಯಾವತ್ತೂ ಜಾತಿ ಜನಗಣತಿ ಆಗಿರಲಿಲ್ಲ; ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಬೇಕು; ಎಲ್ಲ ಸಮುದಾಯಗಳಿಗೂ ಸವಲತ್ತು ಸಿಗಬೇಕೆಂಬುದೇ ನರೇಂದ್ರ ಮೋದಿಜೀ ಅವರ ಇಚ್ಛೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಧ್ಯೇಯೋದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿಜೀ ಅವರು ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ಜನಗಣತಿ ಜೊತೆ ಜಾತಿ ಗಣತಿ ಮಾಡುವ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷವು ಜಾತಿ- ಜಾತಿಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಅವರಿಗೂ ಆಶ್ಚರ್ಯವಾಗಿದೆ. ಕೇಂದ್ರದಲ್ಲಿ ಸ್ವಾತಂತ್ರ್ಯಾನಂತರ ಇಷ್ಟು ವರ್ಷ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷವು ಜಾತಿ ಜನಗಣತಿ ಕಾರ್ಯಕ್ಕೆ ಕೈ ಹಾಕಿರಲಿಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಜಾತಿಗಣತಿ ಕುರಿತಂತೆ ಮುಖ್ಯಮಂತ್ರಿಗಳೇ ಒಂದು ನಿರ್ಧಾರ ಕೈಗೊಂಡಿಲ್ಲ. ಹಿಂದಿನ ಅವಧಿಯಲ್ಲೇ ಹಿಂದುಳಿದ ಸಮುದಾಯಗಳ ಸಮೀಕ್ಷೆ ಕೈಗೊಂಡಿದ್ದು, ಈಗ ಜಾತಿ ಜನಗಣತಿ ಎಂದು ಅವರೇ ಹೇಳುತ್ತಿದ್ದಾರೆ. ರಾಜ್ಯ ಸರಕಾರಕ್ಕೆ ಜಾತಿ ಜನಗಣತಿ ಮಾಡುವ ಅವಕಾಶ ಇಲ್ಲ; ಕೇಂದ್ರ ಸರಕಾರಕ್ಕೆ ಮಾತ್ರ ಈ ಅಧಿಕಾರ ಇದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಇದೆಲ್ಲ ಗೊತ್ತಿದ್ದು ಕೂಡ ಜಾತಿ ವಿಷಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿತ್ತು ಎಂದು ಆಕ್ಷೇಪಿಸಿದರು.

ರಾಜ್ಯದಲ್ಲಿ ಜಾತಿ ಜನಗಣತಿ ಮಾಡಿ 10 ವರ್ಷ ಕಳೆದಿದ್ದು, ಅವಧಿ ಮೀರಿದೆ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ವೀರಪ್ಪ ಮೊಯಿಲಿ ಅವರೇ ಹೇಳಿದ್ದರು. ಸರಕಾರದ ಬಳಿ ಕಾಂತರಾಜು ಅವರು ನೀಡಿದ್ದ ವರದಿಯೇ ಇಲ್ಲ; ವರದಿ ಇಲ್ಲದೇ ಇದ್ದರೂ ಸಮಾಜಗಳ ನಡುವೆ ಗೊಂದಲ ಸೃಷ್ಟಿಸಲು ಹಾಗೂ ಕಂದಕ ಸೃಷ್ಟಿ ಮಾಡುವ ಕೆಲಸವನ್ನು ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿತ್ತು ಎಂದು ಟೀಕಿಸಿದರು. ಈಗಲಾದರೂ ಇದಕ್ಕೆ ಇತಿಶ್ರೀ ಹಾಡುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಎಲ್ಲ ಹಿಂದುಳಿದ ಸಮುದಾಯಗಳಿಗೂ ನ್ಯಾಯ ಕೊಡಬೇಕು

ಆ ದೃಷ್ಟಿಕೋನದಿಂದಲೇ ಪ್ರಧಾನಿಯವರು ನಿರ್ಧಾರ ಮಾಡಿದ್ದಾರೆ. ಅದನ್ನು ಸಿದ್ದರಾಮಯ್ಯರಿಂದ ಕಲಿಯುವ ಅವಶ್ಯಕತೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯದಲ್ಲಿ ಜಾತಿಗಣತಿ ಕುರಿತು ಬೊಬ್ಬೆ ಹೊಡೆಯುತ್ತಿರುವ ಕಾಂಗ್ರೆಸ್ಸಿನವರ ಬಳಿ ಯಾವುದೇ ವರದಿ ಇಲ್ಲ ಎಂದರು.

ಕಾಂತರಾಜು ವರದಿಯ ಪ್ರತಿಯೇ ಇಲ್ಲ

ಜಯಪ್ರಕಾಶ್ ಹೆಗ್ಡೆ ಅವರು ಯಾವ ವರದಿ ಆಧಾರದ ಮೇಲೆ ವರದಿ ನೀಡಿದ್ದಾರೆ ಎಂದು ಪ್ರಶ್ನಿಸಿದರು. ಜಯಪ್ರಕಾಶ್ ಹೆಗ್ಡೆ ಅವರೇ ಸರಕಾರಕ್ಕೆ ಪತ್ರ ಬರೆದು ಮೂಲ ವರದಿ ಇಲ್ಲದೇ ಯಾವ ಆಧಾರದಲ್ಲಿ ವರದಿ ಕೊಡಬೇಕೆಂದು ಪ್ರಶ್ನಿಸಿದ್ದರು. ಸರ್ವೇಗೆ ಎಷ್ಟು ಕೋಟಿ ಖರ್ಚಾಗಿದೆ ಎಂದು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯನವರ ಸರಕಾರಕ್ಕೆ ಸದುದ್ದೇಶ ಇಲ್ಲ

ಸಮಾಜಗಳ ನಡುವೆ ಒಡಕನ್ನು ಸೃಷ್ಟಿಸುವ ದುರುದ್ದೇಶ ಬಿಟ್ಟಲ್ಲಿ ಯಾವುದೇ ಒಳ್ಳೆಯ ಉದ್ದೇಶ ಇಲ್ಲ ಎಂದು ನುಡಿದರು.

ಪೆಹಲ್ಗಾಂ ಭಯೋತ್ಪಾದಕರ ದಾಳಿ ವಿಷಯದಲ್ಲಿ ಪ್ರಚಾರದ ಹುಚ್ಚಿಗಾಗಿ ಕೆಲವರು ಹೇಳಿಕೆ ಕೊಡುತ್ತಿದ್ದಾರೆ. ಅದೆಲ್ಲಕ್ಕೂ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಪೆಹಲ್ಗಾಂ ದುರ್ಘಟನೆ ವಿಷಯದಲ್ಲಿ ಪ್ರತಿಯೊಬ್ಬ ಭಾರತೀಯರೂ ಒಂದಾಗಿದ್ದಾರೆ.

ಭಯೋತ್ಪಾದಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂಬ ಅಪೇಕ್ಷೆ ದೇಶದ ಜನತೆಯಲ್ಲಿದೆ ಎಂದು ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!