Teachers are social ambassadors who shape society through children.

ಶಿಕ್ಷಕರು ಅಂದರೆ ಮಕ್ಕಳ ಮೂಲಕ ಸಮಾಜವನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್

ಬೆಂಗಳೂರು: ಶಿಕ್ಷಕರು (Teachers) ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ‌ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ (KV Prabhakar) ನುಡಿದರು.

ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು (Teachers) ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ ತಿದ್ದಿ ಬೆಳೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ವಂಧಿಸುವ ಮೂಲಕ ತಮ್ಮ ಸಂಸ್ಕಾರವನ್ನು ತೋರಿಸುತ್ತಿದ್ದಾರೆ.

ರೈತರು-ಶಿಕ್ಷಕರು-ಸೈನಿಕರು ಆರೋಗ್ಯಕರ ಮತ್ತು ನೆಮ್ಮದಿಯ ಸಮಾಜದ ಸೇನಾನಿಗಳು ಎಂದು ನಮ್ಮ ಮುಖ್ಯಮಂತ್ರಿಗಳು ಯಾವಾಗಲೂ ಹೇಳ್ತಾ ಇರ್ತಾರೆ. ಇದು ಅಕ್ಷರಶಃ ನಿಜ. ಇದಕ್ಕೆ ಸರ್ವಾಧಿಕಾರಿ ಹಿಟ್ಲರ್ ನ ಒಂದು ಪ್ರಸಂಗ ನೆನಪಿಸುತ್ತೇನೆ.

ಯುದ್ಧದಾಹಿಯಾಗಿದ್ದ ಹಿಟ್ಲರ್ ಯಾವುದೇ ಪ್ರದೇಶವನ್ನು, ದೇಶವನ್ನು ವಶಪಡಿಸಿಕೊಂಡಾಗ ಮೊದಲಿಗೆ ಆ ಪ್ರದೇಶದಲ್ಲಿರುವ ಶಿಕ್ಷಕರನ್ನು ಬಂಧಿಸಲು ತನ್ನ ಸೈನಕ್ಕೆ ಸೂಚಿಸುತ್ತಿದ್ದ. ಏಕೆಂದರೆ, ಶಿಕ್ಷಕರು ಮಕ್ಕಳು ಮತ್ತು ಸಮಾಜವನ್ನು ಬೇಗ ಪ್ರಭಾವಿಸುತ್ತಾರೆ, ತಮ್ಮ ಪ್ರಭಾವದಿಂದ ಹೋರಾಟಗಳನ್ನು ರೂಪಿಸುತ್ತಾರೆ ಎನ್ನುವ ತಿಳಿವಳಿಕೆ ಮತ್ತು ಭಯ ಎರಡೂ ಹಿಟ್ಲರ್ ಗೆ ಇತ್ತು.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಮಹಾತ್ಮಗಾಂಧಿಯವರ ವಿಚಾರಗಳಿಗೆ ಮೊದಲು ಪ್ರಭಾವಿತರಾಗಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ದುಮುಕಿದವರು ಶಾಲಾ ಶಿಕ್ಷಕರೇ. ಇದಕ್ಕೆ ಮತ್ತೊಂದು ಉದಾಹರಣೆ ಹೇಳ್ತೇನೆ.

ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡರು ತಮ್ಮ ಚಿಂತನೆಗಳನ್ನು, ಹೋರಾಟದ ವಿಷಯಗಳನ್ನು ಜನರಿಗೆ ಹೇಳುವ ಮೊದಲು ಶಾಲೆಗಳಿಗೆ ಹೋಗಿ ಶಿಕ್ಷಕರು (Teachers) ಮತ್ತು ಮಕ್ಕಳಿಗೆ ಹೇಳುತ್ತಿದ್ದರು. ಶಿಕ್ಷಕರು ಮತ್ತು ಮಕ್ಕಳು ಒಟ್ಟಾಗಿ ಪೋಷಕರಿಗೆ ವಿಷಯ ಮುಟ್ಟಿಸುತ್ತಿದ್ದರು.

ಹೀಗಾಗಿ ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂದರು.

ಈಗ ತಂತ್ರಜ್ಞಾನದ ಕಾರಣಕ್ಕೆ ಸಮಾಜ ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಬದಲಾಗುತ್ತಾ ಶಿಕ್ಷಣದ ಅಗತ್ಯ ಮತ್ತು ಮಹತ್ವ ಕೂಡ ಬದಲಾಗುತ್ತಿದೆ. ಕಾರ್ಪೋರೇಟ್ ಜಗತ್ತಿನ ಮಾರುಕಟ್ಟೆಗೆ ಬೇಕಾದ “ಮಾಲು” ಗಳನ್ನು ಮಾತ್ರ ಸೃಷ್ಟಿಸುವ ಒತ್ತಡವನ್ನು ಹೇರಲಾಗುತ್ತಿದೆ. ಈ ಸವಾಲನ್ನು ನಾವೆಲ್ಲರೂ ಅತ್ಯಂತ ಸಮನ್ವಯದಿಂದ ಎದುರಿಸಬೇಕಿದೆ.

ರಾಜಕೀಯ ಮಾರುಕಟ್ಟೆ, ಕಾರ್ಪೋರೇಟ್ ಮಾರುಕಟ್ಟೆಯ ಒತ್ತಡಗಳಿಗೆ ಮಣಿಯಬಾರದು.

ಸರ್ಕಾರಿ ಶಾಲೆಗಳ, ಸರ್ಕಸರಿ ಶಿಕ್ಷಕರ ವಿಚಾರದಲ್ಲಿ ಎರಡು ಮುಖ್ಯ ಸಂಗತಿಗಳನ್ನು ಮುಂದಿಟ್ಟು ಮಾತು ಮುಗಿಸುತ್ತೇನೆ. ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ‌ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿ ಆಗುತ್ತಿವೆ. ಆದರೆ, ಒಂದು ಸಮೀಕ್ಷೆಯ ಪ್ರಕಾರ ಸರ್ಕಾರಿಗಳಲ್ಲಿ ಇಂಥಾ ದೌರ್ಜನ್ಯ ಪ್ರಕರಣಗಳು ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಇದೆ. ಹೀಗಾಗಿ ಮಕ್ಕಳಲ್ಲಿ ಲಿಂಗ ಸೂಕ್ಷ್ಮತೆ, ಸಹಬಾಳ್ವೆ, ಸಹಿಷ್ಣತೆಯನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರು ಬಹಳ ಮುಂದಿದ್ದಾರೆ.

ಅದಕ್ಕೇ ಹೇಳೋದು, ಖಾಸಗಿ ಶಾಲೆಗಳ ಕಟ್ಟಡದ ಗುಣಮಟ್ಟ, ಸರ್ಕಾರಿ ಶಾಲೆಗಳ ಶಿಕ್ಷಕರ ಗುಣಮಟ್ಟ ಉನ್ನತ ಮಟ್ಟದ್ದಾಗಿರುತ್ತದೆ.

ಈಗ ನಮ್ಮ ಸರ್ಕಾರ ಒಂದು ಹೊಸ ಕಾರ್ಯಕ್ರಮ‌ ರೂಪಿಸಿದೆ. “ನನ್ನ‌ ಶಾಲೆ ನನ್ನ ಜವಾಬ್ದಾರಿ” ಎನ್ನುವ ಕಾರ್ಯಕ್ರಮ. ಸರ್ಕಾರಿ ಶಾಲೆಗಳಲ್ಲಿ‌ ಓದಿದ ಲಕ್ಷಾಂತರ ಮಂದಿ ತಾವು ಓದಿದ ಶಾಲೆಗಳಿಗೆ ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಹಲವರು ತಾವು ಓದಿದ ಶಾಲೆಗಳನ್ನು ದತ್ತು ಕೂಡ ಪಡೆದಿದ್ದಾರೆ. ಕೆಲವರು ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಇಂಥಾ ಕಾಳಜಿಗಳು ಹೆಚ್ಚೆಚ್ವು ವ್ಯಕ್ತ ಆಗುವುದು ಸರ್ಕಾರಿ ಶಾಲೆಗಳಲ್ಲಿ‌ ಓದಿದವರಿಂದಲೇ. ನಾನು ಕೂಡ ಕೋಲಾರದಲ್ಲಿ ಓದಿದ್ದು‌ ಸರ್ಕಾರಿ ಶಾಲೆಯಲ್ಲೇ. ಈಗ ಆ ಶಾಲೆಗೆ ಅಪಾರ ನೆರವು ಒದಗಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತಾವು ಓದಿದ ಶಾಲೆಗೆ ನೆರವು ನೀಡಿದ್ದಾರೆ. ಇದೀಗ ತಣ್ಣಗಿನ‌ ಚಳಚಳಿಯ ರೂಪ ಪಡೆದುಕೊಂಡಿದೆ.

ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಮೂಲಕ ನನ್ನ‌ ಶಾಲೆ ಮತ್ತು ಶಿಕ್ಷಕರುಗಳನ್ನು ಸ್ಮರಿಸಲು, ವಂಧಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮೀಡಿಯಾ ಕನೆಕ್ಟ್ ನ ದಿವ್ಯಾ ರಂಗೇನಹಳ್ಳಿ ಮತ್ತು ಪುಣ್ಯ ಫೌಂಡೇಷನ್ ಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ್ ಮಹಾಸ್ವಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಸಚಿವರ ಮಾಧ್ಯಮ ಸಂಯೋಜನ ಲಕ್ಷ್ಮೀನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]