Teachers are social ambassadors who shape society through children.

ಶಿಕ್ಷಕರು ಅಂದರೆ ಮಕ್ಕಳ ಮೂಲಕ ಸಮಾಜವನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್

ಬೆಂಗಳೂರು: ಶಿಕ್ಷಕರು (Teachers) ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ‌ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ (KV Prabhakar) ನುಡಿದರು.

ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು (Teachers) ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ ತಿದ್ದಿ ಬೆಳೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ವಂಧಿಸುವ ಮೂಲಕ ತಮ್ಮ ಸಂಸ್ಕಾರವನ್ನು ತೋರಿಸುತ್ತಿದ್ದಾರೆ.

ರೈತರು-ಶಿಕ್ಷಕರು-ಸೈನಿಕರು ಆರೋಗ್ಯಕರ ಮತ್ತು ನೆಮ್ಮದಿಯ ಸಮಾಜದ ಸೇನಾನಿಗಳು ಎಂದು ನಮ್ಮ ಮುಖ್ಯಮಂತ್ರಿಗಳು ಯಾವಾಗಲೂ ಹೇಳ್ತಾ ಇರ್ತಾರೆ. ಇದು ಅಕ್ಷರಶಃ ನಿಜ. ಇದಕ್ಕೆ ಸರ್ವಾಧಿಕಾರಿ ಹಿಟ್ಲರ್ ನ ಒಂದು ಪ್ರಸಂಗ ನೆನಪಿಸುತ್ತೇನೆ.

ಯುದ್ಧದಾಹಿಯಾಗಿದ್ದ ಹಿಟ್ಲರ್ ಯಾವುದೇ ಪ್ರದೇಶವನ್ನು, ದೇಶವನ್ನು ವಶಪಡಿಸಿಕೊಂಡಾಗ ಮೊದಲಿಗೆ ಆ ಪ್ರದೇಶದಲ್ಲಿರುವ ಶಿಕ್ಷಕರನ್ನು ಬಂಧಿಸಲು ತನ್ನ ಸೈನಕ್ಕೆ ಸೂಚಿಸುತ್ತಿದ್ದ. ಏಕೆಂದರೆ, ಶಿಕ್ಷಕರು ಮಕ್ಕಳು ಮತ್ತು ಸಮಾಜವನ್ನು ಬೇಗ ಪ್ರಭಾವಿಸುತ್ತಾರೆ, ತಮ್ಮ ಪ್ರಭಾವದಿಂದ ಹೋರಾಟಗಳನ್ನು ರೂಪಿಸುತ್ತಾರೆ ಎನ್ನುವ ತಿಳಿವಳಿಕೆ ಮತ್ತು ಭಯ ಎರಡೂ ಹಿಟ್ಲರ್ ಗೆ ಇತ್ತು.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಮಹಾತ್ಮಗಾಂಧಿಯವರ ವಿಚಾರಗಳಿಗೆ ಮೊದಲು ಪ್ರಭಾವಿತರಾಗಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ದುಮುಕಿದವರು ಶಾಲಾ ಶಿಕ್ಷಕರೇ. ಇದಕ್ಕೆ ಮತ್ತೊಂದು ಉದಾಹರಣೆ ಹೇಳ್ತೇನೆ.

ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡರು ತಮ್ಮ ಚಿಂತನೆಗಳನ್ನು, ಹೋರಾಟದ ವಿಷಯಗಳನ್ನು ಜನರಿಗೆ ಹೇಳುವ ಮೊದಲು ಶಾಲೆಗಳಿಗೆ ಹೋಗಿ ಶಿಕ್ಷಕರು (Teachers) ಮತ್ತು ಮಕ್ಕಳಿಗೆ ಹೇಳುತ್ತಿದ್ದರು. ಶಿಕ್ಷಕರು ಮತ್ತು ಮಕ್ಕಳು ಒಟ್ಟಾಗಿ ಪೋಷಕರಿಗೆ ವಿಷಯ ಮುಟ್ಟಿಸುತ್ತಿದ್ದರು.

ಹೀಗಾಗಿ ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂದರು.

ಈಗ ತಂತ್ರಜ್ಞಾನದ ಕಾರಣಕ್ಕೆ ಸಮಾಜ ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಬದಲಾಗುತ್ತಾ ಶಿಕ್ಷಣದ ಅಗತ್ಯ ಮತ್ತು ಮಹತ್ವ ಕೂಡ ಬದಲಾಗುತ್ತಿದೆ. ಕಾರ್ಪೋರೇಟ್ ಜಗತ್ತಿನ ಮಾರುಕಟ್ಟೆಗೆ ಬೇಕಾದ “ಮಾಲು” ಗಳನ್ನು ಮಾತ್ರ ಸೃಷ್ಟಿಸುವ ಒತ್ತಡವನ್ನು ಹೇರಲಾಗುತ್ತಿದೆ. ಈ ಸವಾಲನ್ನು ನಾವೆಲ್ಲರೂ ಅತ್ಯಂತ ಸಮನ್ವಯದಿಂದ ಎದುರಿಸಬೇಕಿದೆ.

ರಾಜಕೀಯ ಮಾರುಕಟ್ಟೆ, ಕಾರ್ಪೋರೇಟ್ ಮಾರುಕಟ್ಟೆಯ ಒತ್ತಡಗಳಿಗೆ ಮಣಿಯಬಾರದು.

ಸರ್ಕಾರಿ ಶಾಲೆಗಳ, ಸರ್ಕಸರಿ ಶಿಕ್ಷಕರ ವಿಚಾರದಲ್ಲಿ ಎರಡು ಮುಖ್ಯ ಸಂಗತಿಗಳನ್ನು ಮುಂದಿಟ್ಟು ಮಾತು ಮುಗಿಸುತ್ತೇನೆ. ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ‌ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿ ಆಗುತ್ತಿವೆ. ಆದರೆ, ಒಂದು ಸಮೀಕ್ಷೆಯ ಪ್ರಕಾರ ಸರ್ಕಾರಿಗಳಲ್ಲಿ ಇಂಥಾ ದೌರ್ಜನ್ಯ ಪ್ರಕರಣಗಳು ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಇದೆ. ಹೀಗಾಗಿ ಮಕ್ಕಳಲ್ಲಿ ಲಿಂಗ ಸೂಕ್ಷ್ಮತೆ, ಸಹಬಾಳ್ವೆ, ಸಹಿಷ್ಣತೆಯನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರು ಬಹಳ ಮುಂದಿದ್ದಾರೆ.

ಅದಕ್ಕೇ ಹೇಳೋದು, ಖಾಸಗಿ ಶಾಲೆಗಳ ಕಟ್ಟಡದ ಗುಣಮಟ್ಟ, ಸರ್ಕಾರಿ ಶಾಲೆಗಳ ಶಿಕ್ಷಕರ ಗುಣಮಟ್ಟ ಉನ್ನತ ಮಟ್ಟದ್ದಾಗಿರುತ್ತದೆ.

ಈಗ ನಮ್ಮ ಸರ್ಕಾರ ಒಂದು ಹೊಸ ಕಾರ್ಯಕ್ರಮ‌ ರೂಪಿಸಿದೆ. “ನನ್ನ‌ ಶಾಲೆ ನನ್ನ ಜವಾಬ್ದಾರಿ” ಎನ್ನುವ ಕಾರ್ಯಕ್ರಮ. ಸರ್ಕಾರಿ ಶಾಲೆಗಳಲ್ಲಿ‌ ಓದಿದ ಲಕ್ಷಾಂತರ ಮಂದಿ ತಾವು ಓದಿದ ಶಾಲೆಗಳಿಗೆ ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಹಲವರು ತಾವು ಓದಿದ ಶಾಲೆಗಳನ್ನು ದತ್ತು ಕೂಡ ಪಡೆದಿದ್ದಾರೆ. ಕೆಲವರು ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಇಂಥಾ ಕಾಳಜಿಗಳು ಹೆಚ್ಚೆಚ್ವು ವ್ಯಕ್ತ ಆಗುವುದು ಸರ್ಕಾರಿ ಶಾಲೆಗಳಲ್ಲಿ‌ ಓದಿದವರಿಂದಲೇ. ನಾನು ಕೂಡ ಕೋಲಾರದಲ್ಲಿ ಓದಿದ್ದು‌ ಸರ್ಕಾರಿ ಶಾಲೆಯಲ್ಲೇ. ಈಗ ಆ ಶಾಲೆಗೆ ಅಪಾರ ನೆರವು ಒದಗಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತಾವು ಓದಿದ ಶಾಲೆಗೆ ನೆರವು ನೀಡಿದ್ದಾರೆ. ಇದೀಗ ತಣ್ಣಗಿನ‌ ಚಳಚಳಿಯ ರೂಪ ಪಡೆದುಕೊಂಡಿದೆ.

ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಮೂಲಕ ನನ್ನ‌ ಶಾಲೆ ಮತ್ತು ಶಿಕ್ಷಕರುಗಳನ್ನು ಸ್ಮರಿಸಲು, ವಂಧಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮೀಡಿಯಾ ಕನೆಕ್ಟ್ ನ ದಿವ್ಯಾ ರಂಗೇನಹಳ್ಳಿ ಮತ್ತು ಪುಣ್ಯ ಫೌಂಡೇಷನ್ ಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ್ ಮಹಾಸ್ವಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಸಚಿವರ ಮಾಧ್ಯಮ ಸಂಯೋಜನ ಲಕ್ಷ್ಮೀನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!