ಕಾಸರಗೋಡು: ಹಲಸಿನ ಹಣ್ಣು (Jackfruit) ಕತ್ತರಿಸುವಾಗ ಆಕಸ್ಮಿಕವಾಗಿ ಬಾಲಕನ ಕತ್ತಿ ತಲೆಗೆ ಬಡಿದು ಸಾವನ್ನಪ್ಪಿರುವ ಘಟನೆ ಕಾಸರಗೋಡುನಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತನನ್ನು ಕಾಸರಗೋಡಿನ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ನಿವಾಸಿ 8 ವರ್ಷದ ಹುಸೈನ್ ಶಹಬಾಸ್ ಎಂದು ಗುರುತಿಸಲಾಗಿದೆ.
ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ ಮನೆಗೆ ಹುಸೈನ್ ಬಂದಿದ್ದನು. ತಾಯಿ ಅಡುಗೆ ಕೋಣೆ ಹೊರಗಡೆ ಮುಟ್ಟು ಕತ್ತಿಯಲ್ಲಿ ಹಲಸಿನ ಹಣ್ಣು (Jackfruit) ತುಂಡರಿಸುತ್ತಿದ್ದರು. ಈ ವೇಳೆ ಹೊರಗಡೆಯಿಂದ ಆಟವಾಡುತ್ತಿದ್ದ ಹುಸೈನ್ ಓಡಿ ಕೊಂಡುಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ಕತ್ತಿಯ ಮೇಲೆ ಬಿದ್ದಿದ್ದಾನೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಪೆಟ್ಟುl Accident
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದರೂ ಸಹ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
ಈ ಕುರಿತಂತೆ ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.