Forces that commit violence in the name of religion have arisen: Basavaraja Bommai is upset

ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ: ಬಸವರಾಜ ಬೊಮ್ಮಾಯಿ ಬೇಸರ

ಬೆಂಗಳೂರು: ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಅಂತ ಒಂದೇ ಪದದಲ್ಲಿ ಹೇಳಿದ್ದಾರೆ. ಆದರೆ, ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ. ಬಸವಣ್ಣನ ತತ್ವ ಪಾಲಿಸಿದರೆ ನಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ಬಸವ ವೇದಿಕೆ ಬೆಂಗಳೂರು ಏರ್ಪಡಿಸಿದ್ದ ಬಸವ ಜಯಂತಿ ಹಾಗೂ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಸವಣ್ಣ ಒಬ್ಬ ವಿಸ್ಮಯ ವ್ಯಕ್ತಿ. ಯಾರಾದರು ಬಸವಣ್ಣನನ್ನು ಪರಿಪೂರ್ಣ ವಾಗಿ ಅರ್ಥ ಮಾಡಿಕೊಂಡಿದ್ದೇನೆ ಎಂದರೆ ಆ ವ್ಯಕ್ತಿಗೆ ಇನ್ನೂ ಪರಿಪೂರ್ಣತೆ ಬಂದಿಲ್ಲ ಎಂದರ್ಥ. ಬಸವಣ್ಣ ಅಂದಿಗೂ ಪ್ರಸ್ತುತ ಇಂದಿಗೂ ಪ್ರಸ್ತುತ. ಒಂದು ಆಯಾಮದಲ್ಲಿ ಅವನು ಆಗಿನ ವಾಸ್ತವದ ಬಗ್ಗೆ ಮಾತನಾಡಿದ್ದರು.

ಇನ್ನೊಂದು ಆಯಾಮದಲ್ಲಿ ಬಸವಣ್ಣ ಅಸಮಾನತೆ, ತಾರತಮ್ಯದ ವಿರುದ್ದ ಮಾತನಾಡಿದ್ದರು. ಅವು ಇಂದಿಗೂ ಜೀವಂತವಾಗಿವೆ ಎಂದರೆ ಸಂತೋಷ ಪಡುವ ವಿಷಯವಲ್ಲ. ಇವತ್ತು ನಮ್ಮ ಸಮಾಜದಲ್ಲಿ ನಡೆಯುತ್ತಿರುವದನ್ನು ನೋಡಿದಾಗ ಬಸವಣ್ಣನವರ ಚಿಂತನೆಗೆ ನಾವು ಎಷ್ಟು ಗೌರವ ಕೊಟ್ಟಿದ್ದೇವೆ ಎನ್ನುವುದು ಅರಿವಿಗೆ ಬರುತ್ತದೆ ಎಂದರು.

ಸಮಾಜದಲ್ಲಿ ಮೂರು ಥರದ ವ್ಯಕ್ತಿಗಳು ಇರುತ್ತಾರೆ. ಕೆಲವರು ಭೂತಕಾಲದ ಬಗ್ಗೆ ಮಾತನಾಡುತ್ತಾರೆ. ಅವರು ವಾಸ್ತವದ ಬಗ್ಗೆ ಮಾತನಾಡುವುದೇ ಇಲ್ಲ. ಎರಡನೇಯವರು ಕ್ರಾಂತಿಕಾರಿಗಳಾಗಿರುತ್ತಾರೆ. ಶರಣರ ಕ್ರಾಂತಿ, ಸ್ವಾತಂತ್ರ್ಯ ಹೋರಾಟ, ರಷ್ಯನ್‌ಕ್ರಾಂತಿ ಯಾಕೆ ಬಹಳ ದಿನ ಉಳಿಯಲಿಲ್ಲ. ಆ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಲು ನಾವು ವಿಫಲರಾಗಿದ್ದೇವೆ. ಬಸವಣ್ಣ ಕ್ರಾಂತಿ ಕಾರಿ ಅಂತ ಹೇಳುತ್ತೇವೆ. ಆದರೆ, ಆತ ಮಾಡಿದ‌ ಕ್ರಾಂತಿ ಏನಾಯಿತು ಎಂದು ನೋಡಬೇಕು ಎಂದರು.

ಇನ್ನೊಬ್ಬರು ರಿಫಾರ್ಮರ್ಸ್ ಇದರಲ್ಲಿ ಬುದ್ದ, ಬಸವ, ಮಹಾವೀರ ಅವರು ಕಾಲ ಮೀರಿ ಬದುಕುತ್ತಾರೆ. ಅಂತಹ ಶ್ರೇಷ್ಠ ವ್ಯಕ್ತತ್ವ ಹೊಂದಿರುವ ಇತಿಹಾಸಕ್ಕೆ ನಾವು ಸೇರಿದ್ದೇವೆ. ಅದರ ಅರಿವಿಲ್ಲದೆ ನಾವು ತಾತ್ಕಾಲಿಕ ಲೋಕದಲ್ಲಿದ್ದರೆ ನಮಗೆ ಮೂಲ ಆಳದ ಬಗ್ಗೆ ಅರಿವು ಇರುವುದಿಲ್ಲ ಎಂದರು.

ಒಂದು ಬಾವಿ ಪಕ್ಕದಲ್ಲಿ ಹಳ್ಳ ಇತ್ತು. ಅದು ಬಾವಿಗೆ‌ ನೀನು ನಿಂತಲ್ಲೆ ನಿಂತಿದ್ದೀಯಾ, ನಾನು ಹರಿದು ಎಲ್ಲರಿಗೂ ನೀರು ಕೊಡುತ್ತೇನೆ ನಾನೇ ಶ್ರೇಷ್ಠ ಎಂದು ಹೆಳುತ್ತದೆ. ಅದಕ್ಕೆ ಬಾವಿ ನಾನು ಆಳವಾಗಿ ಒಂದೇ ಕಡೆ ಇದ್ದು ಜನರ ಸಂಕಷ್ಟಕ್ಕೆ ಆಗುತ್ತೇನೆ ಎಂದು ಹೇಳುತ್ತದೆ. ಅದೆ ರೀತಿ ವಚನ ಸಾಹಿತ್ಯ, ಯಾವುದೇ ವೇದ ಪುರಾಣಕ್ಕೂ ಕಡಿಮೆ ಇಲ್ಲದ ಸಾಮಾನ್ಯ ಜನರಿಗೂ ಅರ್ಥವಾಗುವ ರೀತಿಯಲ್ಲಿ ಇದೆ ಎಂದರು.

ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಅಂತ ಒಂದೆ ಪದದಲ್ಲಿ ಹೇಳಿದ್ದಾರೆ. ಆದರೆ, ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ. ಇಷ್ಟೆಲ್ಲ ನಮ್ಮ ಸುತ್ತಲೂ ನಡೆಯುತ್ತಿದ್ದರೂ ನಾವು ಏನೂ ಮಾಡಲು ಆಗುತ್ತಿಲ್ಲ ಎಂದು ಅಸಹಾಯಕತೆ ಮೂಡುತ್ತಿದೆ. ಅದು ಮೂಡಬಾರದು.

ಬಸವ ಸಾಹಿತ್ಯ ಓದಬೇಕು, ಅದನ್ನು ಪ್ರಚಾರ ಮಾಡುವ ಮೂಲಕ ಶಾಂತಿ ಸ್ಥಾಪಿಸಬೇಕು. ರೇಣುಕಾಚಾರ್ಯ ಮಾನವ ದರ್ಮಕ್ಕೆ ಜಯವಾಗಲಿ ಎಂದರು. ನಾವು ಮೂಲ ಮರೆತಿದ್ದೇವೆ. ಬಸವಣ್ಣನನ್ನು ಹಿಡಿದುಕೊಂಡರೆ ನಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಹೇಳಿದರು.

ಯಾವಾಗ ಬಸವ ಜಯಂತಿ ನಾಡಿನ ಪ್ರತಿಯೊಂದು ಹರಿಜನಕೇರಿಯಲ್ಲಿ ಆಗುತ್ತದೊ ಆಗ ರಾಜ್ಯ ಉದ್ದಾರವಾಗುತ್ತದೆ. ಈ ಜಗತ್ತಿನ ಮೂಲಭೂತ ಬದಲಾವಣೆ ಮಾಡಿರುವುದು ಸರ್ಕಾರಗಳು, ದೊಡ್ಡ ಶಕ್ತಿಗಳಲ್ಲಾ, ವ್ಯಕ್ರಿಗಳು, ಐನ್ ಸ್ಟಿನ್, ಬುದ್ದ, ಮಹಮದ್ ಪೈಗಂಬರ್, ಬಸವಣ್ಣ. ಎಲ್ಲರೂ ದೊಡ್ಡ ವ್ಯಕ್ತಿಗಳು. ಬದುಕಿನಲ್ಲಿ ಕೇವಲ ತ್ಯಾಗ‌ಮಾಡಿದರೆ ಸಾಲದು ನಿಮ್ಮ ಮನದಾಳದ ಮಾತು ಹಂಚಿಕೊಂಡಾಗ ಮಾತ್ರ ಸಾಕ್ಷಾತ್ಕಾರ ಬರುತ್ತದೆ.

ಸ್ವಾಮಿ ವಿವೇಕಾನಂದರು ತಮಗೆ ಜ್ಞಾನೋದಯ ಆಗಿದೆ ಎಂದು ಹೇಳಿದಾಗ ಅವರಿಗೆ ರಾಮಕೃಷ್ಣ ಪರಮಹಂಸರು ನಿನ್ನ ಜ್ಞಾನ ಜಗತ್ತಿಗೆ ತಿಳಿದಾಗ ನಿನಗೆ‌ ಜ್ಞಾನೋದಯ ಆಗುತ್ತದೆ ಎಂದು ಹೇಳಿದ್ದರು. ಅವರ ಮಾತಿನಂತೆ ವಿವೇಕಾನಂದರು ನಡೆದುಕೊಂಡು ಜ್ಞಾನ ಹಂಚಿದರು ಎಂದು ಹೇಳಿದರು.

ನಾಡೋಜ ಗೋ.ರು.ಚನ್ನಬಸಪ್ಪ ಅವರ ಸಾಹಿತ್ಯ ದೊಡ್ಡ ಆಸ್ತಿ, ಅವರ ಜ್ಞಾನ, ಶಕ್ತಿಯನ್ನು ಬಳಸಿಕೊಳ್ಳಬೇಕು ಎಂದರು.

ಉಜ್ವಲ ಭವಿಷ್ಯ

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲರಿಗೆ ಉಜ್ವಲ ಭವಿಷ್ಯ ಇದೆ. ಅವರ ಭವಿಷ್ಯದೊಂದಿಗೆ ರಾಜ್ಯದ ಉಜ್ವಲ ಭವಿಷ್ಯ ಸೇರಬೇಕು. ನೀವು ಫ.ಗು.ಹಳಕಟ್ಟಿ ಅವರ ಸೇವೆ ಮಾಡುತ್ತಿದ್ದೀರಾ. ಒಬ್ಬ ರಾಜಕಾರಣಿ ಮುಂದಿನ ಚುನಾವಣೆಯ ಬಗ್ಗೆ ಯೋಚನೆ ಮಾಡುತ್ತಾನೆ, ಆದರೆ, ಒಬ್ಬ ಮುತ್ಸದ್ದಿ ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾನೆ. ನೀವು ಮುತ್ಸದ್ದಿಗಳಾಗಿ ಮುಂದಿನ ಜನಾಂಗಕ್ಕೆ ಅನುಕೂಲ ಮಾಡುತ್ತಿದ್ದೀರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಬಸವ ವೇದಿಕೆ ಅಧ್ಯಕ್ಷ ಡಾ. ಸಿ. ಸೋಮಶೇಖರ, ಉಪಾಧ್ಯಕ್ಷ ಷಡಕ್ಷರಿ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ ಅವರಿಗೆ ಬಸವಶ್ರೀ ಪ್ರಶಸ್ತಿ, ಎಂ.ಡಿ. ಪಲ್ಲವಿ ಹಾಗೂ ಬಿಎಲ್ ಡಿಇ ಸಂಸ್ಥೆಯ ವಚನ ಪಿತಾಮಹ ಫ.ಗು ಹಳಕಟ್ಟಿ ಸಂಶೋಧನಾ ಸಂಸ್ಥೆಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!