ESI Hospital in Doddaballapur does not have the privilege of inauguration

ದೊಡ್ಡಬಳ್ಳಾಪುರದ ESI ಆಸ್ಪತ್ರೆಗಿಲ್ಲ ಉದ್ಘಾಟನೆ ಭಾಗ್ಯ: ಫೀಲ್ಡಿಗಿಳಿದ ಕಜಾವೇ..!

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನಿರ್ಮಾಣವಾಗಿ ಉದ್ಘಾಟನೆ ಭಾಗ್ಯ ಕಾಣದೆ ಇರುವ ಇಎಸ್‌ಐ (ESI) ಆಸ್ಪತ್ರೆ ಶೀಘ್ರವಾಗಿ ಆರಂಭಿಸಬೇಕೆಂದು ಕನ್ನಡ ಜಾಗೃತಿ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತಂತೆ ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್ ಎಂ. ದೊಡ್ಡಬಳ್ಳಾಪುರದಲ್ಲಿನ ನೂತನ ESI ಹಾಸ್ಪಿಟಲ್ ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಗಳು ಕಳೆದರೂ ಸಹ ಈ ಭಾಗದ ಕಾರ್ಮಿಕರಿಗೆ ಸೇವೆ ಸಿಗುತ್ತಿಲ್ಲ.

ಇಲ್ಲಿಯ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ESI ಹಾಸ್ಪಿಟಲ್‌ಗಾಗಿ ದೂರದ ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕಾರ್ಖಾನೆಗಳಿವೆ, ಮತ್ತು ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ನಮ್ಮ ದೊಡ್ಡಬಳ್ಳಾಪುರ ಇಂಡಸ್ಟ್ರಿಯ ಏರಿಯಾ ಏಷ್ಯಾದಲ್ಲಿ ಎರಡನೇ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ವಿಷಯ.

ಆದರೆ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಕೇಳುವವರು ಯಾರು ಇಲ್ಲ, ಇಲ್ಲಿನ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವವರು ಯಾರು ಇಲ್ಲದಂತಾಗಿದೆ.. ಅಲ್ಲದೆ ಈ ಭಾಗದಲ್ಲಿ ಅತಿ ಹೆಚ್ಚು ತೆರಿಗೆ ಸಂದಾಯ ಆಗುತ್ತದೆ ಎಂದು ತಿಳಿಸಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಶಿಧರ್ ಸಿ, ESI ಹಾಸ್ಪಿಟಲ್ ಸೇವೆ ಪ್ರತಿಯೊಬ್ಬ ಕಾರ್ಮಿಕರಿಗೂ ಅತಿ ಮುಖ್ಯವಾಗಿದೆ. ಏಕೆಂದರೆ ಈ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಜನ ವಾಸಿಸುತ್ತಾರೆ. ಇವರ ಮಕ್ಕಳು ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಚಿಕಿತ್ಸೆ ಸೌಲಭ್ಯ ಸಿಗುತ್ತಿಲ್ಲ.

ಅಧಿಕಾರಿಗಳು ಹೆಚ್ಚೆತ್ತೆಮು ತಕ್ಷಣ ಇಎಸ್ಐ ಆಸ್ಪತ್ರೆಯನ್ನು ಆರಂಭವಾಗಬೇಕು.. ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಈ ವೇಳೆ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಸುರೇಶ್ ಸಿಂಗಂ, ತಾಲೂಕು ಉಪಾಧ್ಯಕ್ಷ ಮಹದೇವ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಶಿವಕುಮಾರ ಸ್ವಾಮಿ, ಮಂಜುನಾಥ್ ನಿಜಗಲ್ ಇದ್ದರು.

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.

[ccc_my_favorite_select_button post_id="117905"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!