ದೊಡ್ಡಬಳ್ಳಾಪುರದ ESI ಆಸ್ಪತ್ರೆಗಿಲ್ಲ ಉದ್ಘಾಟನೆ ಭಾಗ್ಯ: ಫೀಲ್ಡಿಗಿಳಿದ ಕಜಾವೇ..!

ESI Hospital in Doddaballapur does not have the privilege of inauguration

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನಿರ್ಮಾಣವಾಗಿ ಉದ್ಘಾಟನೆ ಭಾಗ್ಯ ಕಾಣದೆ ಇರುವ ಇಎಸ್‌ಐ (ESI) ಆಸ್ಪತ್ರೆ ಶೀಘ್ರವಾಗಿ ಆರಂಭಿಸಬೇಕೆಂದು ಕನ್ನಡ ಜಾಗೃತಿ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತಂತೆ ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್ ಎಂ. ದೊಡ್ಡಬಳ್ಳಾಪುರದಲ್ಲಿನ ನೂತನ ESI ಹಾಸ್ಪಿಟಲ್ ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಗಳು ಕಳೆದರೂ ಸಹ ಈ ಭಾಗದ ಕಾರ್ಮಿಕರಿಗೆ ಸೇವೆ ಸಿಗುತ್ತಿಲ್ಲ.

ಇಲ್ಲಿಯ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ESI ಹಾಸ್ಪಿಟಲ್‌ಗಾಗಿ ದೂರದ ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕಾರ್ಖಾನೆಗಳಿವೆ, ಮತ್ತು ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ನಮ್ಮ ದೊಡ್ಡಬಳ್ಳಾಪುರ ಇಂಡಸ್ಟ್ರಿಯ ಏರಿಯಾ ಏಷ್ಯಾದಲ್ಲಿ ಎರಡನೇ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ವಿಷಯ.

ಆದರೆ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಕೇಳುವವರು ಯಾರು ಇಲ್ಲ, ಇಲ್ಲಿನ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವವರು ಯಾರು ಇಲ್ಲದಂತಾಗಿದೆ.. ಅಲ್ಲದೆ ಈ ಭಾಗದಲ್ಲಿ ಅತಿ ಹೆಚ್ಚು ತೆರಿಗೆ ಸಂದಾಯ ಆಗುತ್ತದೆ ಎಂದು ತಿಳಿಸಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಶಿಧರ್ ಸಿ, ESI ಹಾಸ್ಪಿಟಲ್ ಸೇವೆ ಪ್ರತಿಯೊಬ್ಬ ಕಾರ್ಮಿಕರಿಗೂ ಅತಿ ಮುಖ್ಯವಾಗಿದೆ. ಏಕೆಂದರೆ ಈ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಜನ ವಾಸಿಸುತ್ತಾರೆ. ಇವರ ಮಕ್ಕಳು ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಚಿಕಿತ್ಸೆ ಸೌಲಭ್ಯ ಸಿಗುತ್ತಿಲ್ಲ.

ಅಧಿಕಾರಿಗಳು ಹೆಚ್ಚೆತ್ತೆಮು ತಕ್ಷಣ ಇಎಸ್ಐ ಆಸ್ಪತ್ರೆಯನ್ನು ಆರಂಭವಾಗಬೇಕು.. ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಈ ವೇಳೆ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಸುರೇಶ್ ಸಿಂಗಂ, ತಾಲೂಕು ಉಪಾಧ್ಯಕ್ಷ ಮಹದೇವ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಶಿವಕುಮಾರ ಸ್ವಾಮಿ, ಮಂಜುನಾಥ್ ನಿಜಗಲ್ ಇದ್ದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!