ಬೆಂಗಳೂರು: ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ (RCB) ಜಯಭೇರಿ ಬಾರಿಸಿದೆ. ಈ ಗೆಲುವಿನ ಸಂಭ್ರಮಾಚರಣೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿಯಾಗಿ ನಡೆಯುತ್ತಿದೆ.
ಈ ಪಂದ್ಯ ವೀಕ್ಷಿಸಲು ಬಿಗ್ಬಾಸ್ ಸೀಸನ್ 11ರ ವಿನ್ನರ್ ಹನುಮಂತ (Hanu mantha) ಲುಂಗಿಯಲ್ಲಿಯೇ RCB ಜರ್ಸಿ ತೊಟ್ಟು ಧನರಾಜ್ ಆಚಾರ್ಯ (Dhanraj Acharya) ಅವರೊಂದಿಗೆ ತೆರಳಿರುವುದು ಬೆಳಕಿಗೆ ಬಂದಿದೆ.
ಈ ಕುರಿತಂತೆ ಧನರಾಜ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಕಣಕಣದಲ್ಲೂ RCB.. ಜೈ RCB ಅಂತ ಬರೆದುಕೊಂಡಿದ್ದಾರೆ.
ನಿನ್ನೆ ನಡೆದ ಪಂದ್ಯದಲ್ಲಿ ಕೇವಲ 2 ರನ್ಗಳಿಂದ RCB ಪಡೆ ಗೆಲುವು ಸಾಧಿಸಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 16 ಅಂಕಗಳಿಂದ ಅಗ್ರಸ್ಥಾನವನ್ನು ಪಡೆದುಕೊಂಡಿದೆ.
ಇದೇ ಖುಷಿಯಲ್ಲಿ RCB ಅಭಿಮಾನಿಗಳು ತೇಲುತ್ತಿದ್ದಾರೆ.