ದೊಡ್ಡಬಳ್ಳಾಪುರ: ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD Bank) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಇಂದು ನಡೆದಿದೆ.
ಚುನಾವಣೆ ಅಧಿಕಾರಿ ನಾಗಮಣಿ ಅವರ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರಾಜಘಟ್ಟ ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇನ್ನೂ ಉಪಾಧ್ಯಕ್ಷರಾಗಿ ಜೆಡಿಎಸ್ನ ಎಲ್.ಕೆ.ರಾಮಚಂದ್ರ ಬಾಬು (ಮಿಲ್ಕ್ ಬಾಬು)ಅವರು ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತಕ್ಕೆ ಫೆಬ್ರವರಿ 16 ರಿಂದ ಮುಂದಿನ 05 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆಸಲಾಗಿದೆ.
ತಲಾ 20 ತಿಂಗಳ ಅಧಿಕಾರ ಹಂಚಿಕೆ
ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಮೂರು ಪಕ್ಷಗಳು ಮೈತ್ರಿ ಸಾಧಿಸಿ, ತಲಾ 20 ತಿಂಗಳ ಅಧಿಕಾರ ಹಂಚಿಕೆ ಮಾಡಿಕೊಂಡಿವೆ.
ಮೊದಲ ಅವಧಿಗೆ ಜೆಡಿಎಸ್, ಎರಡನೇ ಅವಧಿಗೆ ಬಿಜೆಪಿ ಹಾಗೂ ಮೂರನೇ ಅವಧಿಗೆ ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಜಿ ಲಕ್ಷ್ಮೀಪತಯ್ಯ, ಹಿರಿಯು ಮುಖಂಡರಾದ ಎ.ನರಸಿಂಹಯ್ಯ ಹರೀಶ್ ಗೌಡ, ಹುಸ್ಕೂರು ಆನಂದ್, ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ತೆಂಗು ನಾರು ಮಂಡಳಿಯ ರಾಜ್ಯಾಧ್ಯಕ್ಷ ಗಂಟಿಗಾನಹಳ್ಳಿ ಬಾಬು, ಜೆಡಿಎಸ್ ಮುಖಂಡ BS ಹರೀಶ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.