ಧಾರವಾಡ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಆಗಿದ್ದು, ಈ ಭೀಕರ ಅಪಘಾತದಲ್ಲಿ (Accident) ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಧಾರವಾಡದ ಕಿರೇಸೂರು ಕ್ರಾಸ್ ಬಳಿ ಮಂಗಳವಾರ ಸಂಭವಿಸಿದೆ
ವೇಗದಿಂದ ಬರುತ್ತಿದ್ದ ಲಾರಿಗೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಐದು ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರದ ನಿವಾಸಿಗಳಾದ ಶ್ವೇತಾ(29 ವರ್ಷ), ಅಂಜಲಿ (26 ವರ್ಷ), ಸಂದೀಪ್ (26 ವರ್ಷ), ವಿಠ್ಠಲ್ (55 ವರ್ಷ) ಮತ್ತು ಶಶಿಕಲಾ (40 ವರ್ಷ) ಎಂದು ಗುರುತಿಸಲಾಗಿದೆ.
ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಲಾರಿ ಡ್ರೈವರ್ ಪರಾರಿಯಾಗಿದ್ದು, ಆತನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.