International cricket stadium in Tumkur..!

ಗುಡ್ಮಾರ್ನಿಂಗ್ ನ್ಯೂಸ್: RCBಗೆ ಕಾಡಿದ ಚಿನ್ನಸ್ವಾಮಿ.. ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಚನ್ನಪಟ್ಟಣದಲ್ಲೂ ಸ್ಟೇಡಿಯಂ..!

ಬೆಂಗಳೂರು: ತುಮಕೂರಿನ (Tumkur) ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (M.B.Patil) ಸೋಮವಾರ ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ಈ ಮನವಿಯ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ತುಮಕೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಬರಬೇಕಾದ ಅಗತ್ಯವಿದೆ ಎಂದರು.

ಬೆಂಗಳೂರಿಗೆ ತಾಗಿಕೊಂಡಿರುವ ತುಮಕೂರು ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅಲ್ಲಿ ಒಂದು ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ ಕೂಡ ಹೇಳುತ್ತಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ನಗರದ ಮಧ್ಯಭಾಗದಲ್ಲಿದೆ. ಹೀಗಾಗಿ ಇಲ್ಲಿ ಪಾರ್ಕಿಂಗ್, ಸಂಚಾರ ದಟ್ಟಣೆ ಇತ್ಯಾದಿ ಸಮಸ್ಯೆಗಳಿವೆ. ತುಮಕೂರಿನಲ್ಲೂ ಒಂದು ಕ್ರೀಡಾಂಗಣ ಬಂದರೆ ಅಲ್ಲಿನ ಪ್ರತಿಭೆಗಳಿಗೆ ಉಜ್ವಲ ಅವಕಾಶಗಳು ಸಿಗಲಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವಿಜಯಪುರದಲ್ಲೂ ಇಂಥದ್ದೊಂದು ಕ್ರೀಡಾಂಗಣ ಬರಬೇಕು ಎನ್ನುವುದು ತಮ್ಮ ಕನಸಾಗಿದೆ. ಇಂತಹ ಮೈದಾನದಲ್ಲಿ ಪಂಚತಾರಾ ಹೋಟೆಲ್ ಸೇರಿ ಅನೇಕ ಅನುಕೂಲಗಳು ಬರಲಿವೆ ಎಂದು ಪಾಟೀಲ ನುಡಿದಿದ್ದಾರೆ.

ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ ರೂ.15 ಲಕ್ಷದಂತೆ ನೀಡಲಾಗಿದೆ ಎಂದು ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಚನ್ನಪಟ್ಟಣ ಸ್ಟೇಡಿಯಂ ನಿರ್ಮಾಣಕ್ಕೆ ಡಿಸಿಎಂ ಪ್ರಸ್ತಾವನೆ.

ಗುಡ್ಮಾರ್ನಿಂಗ್ ನ್ಯೂಸ್: RCBಗೆ ಕಾಡಿದ ಚಿನ್ನಸ್ವಾಮಿ.. ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಚನ್ನಪಟ್ಟಣದಲ್ಲೂ ಸ್ಟೇಡಿಯಂ..!

“ಚನ್ನಪಟ್ಟಣದಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಭರವಸೆ ನೀಡಿದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿದ್ದರಾಮಯ್ಯ ಅವರು ಸೋಮವಾರ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲೂಕು ಕಚೇರಿ ಸಭಾಂಗಣದಲ್ಲಿ, ವಿಧಾನಸಭೆ ಕ್ಷೇತ್ರದ ವಿಶೇಷ ಅನುದಾನ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತಿದ್ದ ಡಿಸಿಎಂ ಅವರು ಜೂಮ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚನ್ನಪಟ್ಟಣ ಸ್ಟೇಡಿಯಂ ನಿರ್ಮಾಣ ಪ್ರಸ್ತಾಪ ಮಾಡಿದರು. ನೆರವು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಸಿಎಂ ಅವರು “ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು” ಎಂದರು.

ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ತಟ್ಟೆಕೆರೆಯ ಬಳಿ ಕ್ರೀಡಾಂಗಣಕ್ಕೆ ಶಿವಕುಮಾರ್ ಅವರು ಗುದ್ದಲಿ ಪೂಜೆ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!