Pahalgam terrorist attack; MP Basavaraj Bommai objects to Congress leaders' allegations

ಪಹಲ್ಗಾಮ್ ಉಗ್ರರ ದಾಳಿ; ಕಾಂಗ್ರೆಸ್ ನಾಯಕರ ಆರೋಪಗಳಿಗೆ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ನಮ್ಮ ದೇಶದ ಮೇಲೆ ಭಯೋತ್ಪಾದನೆಯ ದಾಳಿ ನಡೆದ ಸಂದರ್ಭದಲ್ಲಿ ಭಾರತ ಪಾಕ್ ನಡುವೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ನ ಹಿರಿಯ ನಾಯಕರ ಹೇಳಿಕೆ ನೋಡಿದಾಗ ಇವರು ಈ ದೇಶವನ್ನು 55 ವರ್ಷ ಆಳಿದ್ದಾರೊ ಇಲ್ಲವೊ ಎಂಬ ಸಂಶಯ ಮೂಡುತ್ತದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟ ವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಚೀನಾ ಯುದ್ದದಲ್ಲಿ ಭಾರತಕ್ಕೆ ಸೋಲುಂಟಾಗಿರುವುದು ಮತ್ತು ಭಾರತದಲ್ಲಿ ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಾರು ಕಡೆ ಭಯೋತ್ಪಾದಕ ದಾಳಿಗಳು ನಡೆದಾಗ ಕ್ರಮ ತೆಗೆದುಕೊಳ್ಳದಿರುವುದು, ಮುಂಬೈ ಮೇಲೆ 2008 ರಲ್ಲಿ ನಡೆದ 26/11 ದಾಳಿಯಲ್ಲಿ 130 ಅಮಾಯಕರ ಸಾವುಂಟಾದಾಗ ಘಟನೆ ಪೂರ್ವದಲ್ಲಿ ಇಂಟಲಿಜೆನ್ಸ್ ವೈಫಲ್ಯ ಆಗಿದ್ದು, ಘಟನೆ ನಂತರ ಉಗ್ರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ತೀರ್ಮಾನ ತೆಗೆದುಡಿದ್ದನ್ನು ಕಾಂಗ್ರೆಸ್ ನಾಯಕರು ಮರೆತಂತಿದೆ.

ಕನಿಷ್ಠ ಅವರ ಪ್ರಧಾನಮಂತ್ರಿ ಇಂದಿರಾ ಗಾಂಧಿ ಯುದ್ದ ಮಾಡುವಾಗ ಅಂದಿನ ಸೇನೆಯ ಮುಖ್ಯಸ್ಥ ಮಾಣಿಕ್ ಷಾ ಅವರ ಮಾತು ಹೇಗೆ ಕೇಳಿದರೊ ಆ ಸಂದರ್ಭದಲ್ಲಿ ಎಲ್ಲ ವಿರೋದ ಪಕ್ಷಗಳು ಸರ್ಕಾರದ ಪರವಾಗಿ ನಿಂತಿರುವುದು ನೆನಪಿನಲ್ಲಿ ಇಷ್ಟುಕೊಳ್ಳದೆ ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಾಗಿ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟವಾಗಿದೆ.

ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಬರುವ ದಿನಗಳಲ್ಲಿ ಜನರಿಗೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ಆಯಾಮಗಳನ್ನು ಮನಗಂಡು ಯುದ್ದಕ್ಕೆ ಬೇಕಾಗಿರುವ ತಯಾರಿ ಮಾಡಿ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಣಯ ತೆಗೆದುಕೊಳ್ಳಲು ಈಗಾಗಲೇ ಮೂರು ಸೇನಾಪಡೆಗಳಿಗೆ ಅಧಿಕಾರ ಕೊಟ್ಡಿರುವುದು ನಾವೆಲ್ಲ ನೋಡಿದ್ದೇವೆ.

ಇಡೀ ರಾಷ್ಟ್ರ ಒಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲುವುದು ಕರ್ತವ್ಯ. ಕಾಂಗ್ರೆಸ್ ಕನಿಷ್ಠ ಜವಾಬ್ದಾರಿಯನ್ನಾದರೂ ಅರ್ಥಮಾಡಿಕೊಳ್ಳಲಿ. ಅವರ ಪ್ರತಿಯೊಂದು ಹೇಳಿಕೆಗಳಿಂದ ಪಾಕಿಸ್ತಾನಕ್ಕೆ ಪುಷ್ಠಿ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!