ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

Counterfeit medicine.. Minister Dinesh Gundurao's important promise

ಬೆಂಗಳೂರು: ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು BJP ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಇಂದಿನ ಸಂಸದ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.? ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.

ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು BJP ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಇಂದಿನ ಸಂಸದ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?

ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?

ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.

ದ.ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ ಎಂದು ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!