Counterfeit medicine.. Minister Dinesh Gundurao's important promise

ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು BJP ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಇಂದಿನ ಸಂಸದ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.? ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.

ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು BJP ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಇಂದಿನ ಸಂಸದ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?

ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?

ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.

ದ.ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ ಎಂದು ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!