ದೊಡ್ಡಬಳ್ಳಾಪುರ: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ (Accident) ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೂಗೋನಹಳ್ಳಿ ಕಾಲೋನಿ ಬಳಿ ಸಂಭವಿಸಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಚುಂಚೇಗೌಡನ ಹೊಸಹಳ್ಳಿ ನಿವಾಸಿ ಮುನಿರಾಜು (45 ವರ್ಷ) ಎನ್ನುವವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ.
ಮೃತ ಮುನಿರಾಜು ಇಂದು ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ದೊಡ್ಡಬೆಳವಂಗಲಕ್ಕೆ ಬಂದು ಹಿಂತಿರುಗಿ ಚುಂಚೇಗೌಡನ ಹೊಸಹಳ್ಳಿಗೆ ತೆರಳುವ ವೇಳೆ, ಕೂಗೋನಹಳ್ಳಿ ಕಾಲೋನಿ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.