DCM DK Shivakumar appeals to the Center to provide necessary assistance and cooperation

ನಿತಿನ್ ಗಡ್ಕರಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್..!

ನವದೆಹಲಿ: ಬೆಂಗಳೂರು- ಕನಕಪುರ ನಡುವಣ ರಸ್ತೆ ಆರು ಪಥಕ್ಕೆ ಉನ್ನತೀಕರಣ, ನೆನೆಗುದಿಗೆ ಬಿದ್ದಿರುವ ಕಗ್ಗಲಿಪುರ ಟೋಲ್ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು, ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಬಿಡುಗಡೆ, ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಅಭಿವೃದ್ಧಿ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದರು.

ಹೆದ್ದಾರಿ 209ರ ಉನ್ನತೀಕರಣ

ಹಾಲಿ ನಾಲ್ಕು ಪಥ ಇರುವ ಹೆದ್ದಾರಿ 209 (ಬೆಂಗಳೂರು-ಕನಕಪುರ) ಅನ್ನು ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ಜತೆಗೆ ಆರು ಪಥಗಳಿಗೆ ಉನ್ನತೀಕರಣಗೊಳಿಸಬೇಕು. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಈ ಪ್ರದೇಶದ ಅಭಿವೃದ್ಧಿಯಿಂದ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಗಣನೀಯ ಏರಿಕೆ ಕಂಡಿದೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು, ಸಂಚಾರಿ ಸುರಕ್ಷತೆ, ಕೈಗಾರಿಕಾ ಪ್ರದೇಶದ ವಾಹನಗಳ ಸುಗಮ ಸಂಚಾರಕ್ಕೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕಗ್ಗಲಿಪುರ ಟೋಲ್ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರವಿಶಂಕರ ಗುರೂಜಿ ಆಶ್ರಮದಿಂದ ಕಗ್ಗಲಿಪುರ ಟೋಲ್ ವರೆಗಿನ 7 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಅಗತ್ಯ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಾಗಿದ್ದು, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಆಕ್ಷೇಪದಿಂದ ಈ ಯೋಜನೆ ಕಾಮಗಾರಿ ನಿಂತಿದೆ.

ಈ ಹೆದ್ದಾರಿಯಲ್ಲಿ ಈ ಭಾಗ ಬಾಟಲ್ ನೆಕ್ ನಂತಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶದಿಂದ ವಾಹನ ಸಂಚಾರ ಹೆಚ್ಚಾಗಿದ್ದು, ಈ ಭಾಗದಲ್ಲಿ ಸುಗಮ ಸಂಚಾರಕ್ಕೆ ಈ ಕಾಮಗಾರಿ ಪೂರ್ಣಗೊಳಿಸುವುದು ಅಗತ್ಯವಾಗಿದೆ. ಈ ಕಾಮಗಾರಿಗೆ ಎದುರಾಗಿರುವ ಅಡಚಣೆಯನ್ನು ನಿವಾರಿಸಿ, ಆದಷ್ಟು ಬೇಗ ಯೋಜನೆ ಪೂರ್ಣಗೊಳಿಸಲು ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಪರಿಹಾರ ನಿಧಿ ಬಿಡುಗಡೆ

ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆ (NH 948A) ಡಾಬಸ್ ಪೇಟೆ, ಮಾಗಡಿ, ರಾಮನಗರ, ಹಾರೋಹಳ್ಳಿ ನಡುವೆ ಸಂಪರ್ಕ ವೃದ್ಧಿಸಲು ಹಾಗೂ ಮೂಲಸೌಕರ್ಯ ಒದಗಿಸಲು ಈ ಯೋಜನೆ ಮಹತ್ವದ್ದಾಗಿದೆ.

ಈ ಯೋಜನೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ಬಿಡುಗಡೆ ಮಾಡಬೇಕು. ಈ ಯೋಜನೆ 2019ರಲ್ಲಿ ಆರಂಭವಾಯಿತಾದರೂ ಪರಿಹಾರ ಬಿಡುಗಡೆ ತಡವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಯೋಜನೆ ಪ್ರಗತಿ ಕುಂಠಿತವಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಹೆಬ್ಬಾಳದಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ

ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಣ 35 ಕಿ.ಮೀ ಉದ್ದದ ಪ್ರದೇಶದಲ್ಲಿ ಅಪಾರವಾದ ಅಭಿವೃದ್ಧಿಯಾಗಿದ್ದು, ಅನೇಕ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳು ಸ್ಥಾಪನೆಯಾಗಿವೆ. ಹೀಗಾಗಿ ಈ ಭಾಗದಲ್ಲಿ ಸಂಚಾರ ದಟ್ಟಣೆ ತೀವ್ರವಾಗಿದೆ.

ಈಗಿರುವ ಎಲಿವೆಟೆಡ್ ಕಾರಿಡಾರ್ ನಡುವೆ ಟ್ರಾಫಿಕ್ ಸಿಗ್ನಲ್, ಪಾದಚಾರಿಗಳ ರಸ್ತೆ ದಾಟುವಿಕೆಯಿಂದ ಇಲ್ಲಿನ ಪ್ರಯಾಣಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಈ ಮಧ್ಯೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತಿ ವೇಗವಾಗಿ ಬೆಳೆಯುತ್ತಿದ್ದು, ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಹೆಬ್ಬಾಳ ಜಂಕ್ಷನ್ ನಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಮಾಡಬೇಕು. ಇದರಿಂದ ವಿಮಾನ ನಿಲ್ದಾಣ ಪ್ರಯಾಣಿಕರು, ಸ್ಥಳೀಯ ವಾಹನಗಳು, ಕೈಗಾರಿಕಾ ವಲಯದ ದೊಡ್ಡ ವಾಹನಗಳ ಸಂಚಾರ ಸುಗಮವಾಗಲಿದೆ ಎಂದು ಮನವಿ ಮಾಡಲಾಗಿದೆ.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!