DCM DK Shivakumar appeals to the Center to provide necessary assistance and cooperation

ನಿತಿನ್ ಗಡ್ಕರಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್..!

ನವದೆಹಲಿ: ಬೆಂಗಳೂರು- ಕನಕಪುರ ನಡುವಣ ರಸ್ತೆ ಆರು ಪಥಕ್ಕೆ ಉನ್ನತೀಕರಣ, ನೆನೆಗುದಿಗೆ ಬಿದ್ದಿರುವ ಕಗ್ಗಲಿಪುರ ಟೋಲ್ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು, ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಬಿಡುಗಡೆ, ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಅಭಿವೃದ್ಧಿ ಸಚಿವರಾದ ನಿತಿನ್ ಗಡ್ಕರಿ (Nitin Gadkari) ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದರು.

ಹೆದ್ದಾರಿ 209ರ ಉನ್ನತೀಕರಣ

ಹಾಲಿ ನಾಲ್ಕು ಪಥ ಇರುವ ಹೆದ್ದಾರಿ 209 (ಬೆಂಗಳೂರು-ಕನಕಪುರ) ಅನ್ನು ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ಜತೆಗೆ ಆರು ಪಥಗಳಿಗೆ ಉನ್ನತೀಕರಣಗೊಳಿಸಬೇಕು. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಈ ಪ್ರದೇಶದ ಅಭಿವೃದ್ಧಿಯಿಂದ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಗಣನೀಯ ಏರಿಕೆ ಕಂಡಿದೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು, ಸಂಚಾರಿ ಸುರಕ್ಷತೆ, ಕೈಗಾರಿಕಾ ಪ್ರದೇಶದ ವಾಹನಗಳ ಸುಗಮ ಸಂಚಾರಕ್ಕೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕಗ್ಗಲಿಪುರ ಟೋಲ್ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರವಿಶಂಕರ ಗುರೂಜಿ ಆಶ್ರಮದಿಂದ ಕಗ್ಗಲಿಪುರ ಟೋಲ್ ವರೆಗಿನ 7 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದೆ. ಈ ಯೋಜನೆಗೆ ಅಗತ್ಯ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಾಗಿದ್ದು, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಆಕ್ಷೇಪದಿಂದ ಈ ಯೋಜನೆ ಕಾಮಗಾರಿ ನಿಂತಿದೆ.

ಈ ಹೆದ್ದಾರಿಯಲ್ಲಿ ಈ ಭಾಗ ಬಾಟಲ್ ನೆಕ್ ನಂತಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶದಿಂದ ವಾಹನ ಸಂಚಾರ ಹೆಚ್ಚಾಗಿದ್ದು, ಈ ಭಾಗದಲ್ಲಿ ಸುಗಮ ಸಂಚಾರಕ್ಕೆ ಈ ಕಾಮಗಾರಿ ಪೂರ್ಣಗೊಳಿಸುವುದು ಅಗತ್ಯವಾಗಿದೆ. ಈ ಕಾಮಗಾರಿಗೆ ಎದುರಾಗಿರುವ ಅಡಚಣೆಯನ್ನು ನಿವಾರಿಸಿ, ಆದಷ್ಟು ಬೇಗ ಯೋಜನೆ ಪೂರ್ಣಗೊಳಿಸಲು ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಪರಿಹಾರ ನಿಧಿ ಬಿಡುಗಡೆ

ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆ (NH 948A) ಡಾಬಸ್ ಪೇಟೆ, ಮಾಗಡಿ, ರಾಮನಗರ, ಹಾರೋಹಳ್ಳಿ ನಡುವೆ ಸಂಪರ್ಕ ವೃದ್ಧಿಸಲು ಹಾಗೂ ಮೂಲಸೌಕರ್ಯ ಒದಗಿಸಲು ಈ ಯೋಜನೆ ಮಹತ್ವದ್ದಾಗಿದೆ.

ಈ ಯೋಜನೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ಶೀಘ್ರವೇ ಪರಿಹಾರ ಮೊತ್ತ ಬಿಡುಗಡೆ ಮಾಡಬೇಕು. ಈ ಯೋಜನೆ 2019ರಲ್ಲಿ ಆರಂಭವಾಯಿತಾದರೂ ಪರಿಹಾರ ಬಿಡುಗಡೆ ತಡವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಯೋಜನೆ ಪ್ರಗತಿ ಕುಂಠಿತವಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಹೆಬ್ಬಾಳದಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ

ಹೆಬ್ಬಾಳ ಜಂಕ್ಷನ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಣ 35 ಕಿ.ಮೀ ಉದ್ದದ ಪ್ರದೇಶದಲ್ಲಿ ಅಪಾರವಾದ ಅಭಿವೃದ್ಧಿಯಾಗಿದ್ದು, ಅನೇಕ ಕೈಗಾರಿಕೆ ಹಾಗೂ ವಾಣಿಜ್ಯ ಸಂಕೀರ್ಣಗಳು ಸ್ಥಾಪನೆಯಾಗಿವೆ. ಹೀಗಾಗಿ ಈ ಭಾಗದಲ್ಲಿ ಸಂಚಾರ ದಟ್ಟಣೆ ತೀವ್ರವಾಗಿದೆ.

ಈಗಿರುವ ಎಲಿವೆಟೆಡ್ ಕಾರಿಡಾರ್ ನಡುವೆ ಟ್ರಾಫಿಕ್ ಸಿಗ್ನಲ್, ಪಾದಚಾರಿಗಳ ರಸ್ತೆ ದಾಟುವಿಕೆಯಿಂದ ಇಲ್ಲಿನ ಪ್ರಯಾಣಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಈ ಮಧ್ಯೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತಿ ವೇಗವಾಗಿ ಬೆಳೆಯುತ್ತಿದ್ದು, ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಹೆಬ್ಬಾಳ ಜಂಕ್ಷನ್ ನಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಮಾಡಬೇಕು. ಇದರಿಂದ ವಿಮಾನ ನಿಲ್ದಾಣ ಪ್ರಯಾಣಿಕರು, ಸ್ಥಳೀಯ ವಾಹನಗಳು, ಕೈಗಾರಿಕಾ ವಲಯದ ದೊಡ್ಡ ವಾಹನಗಳ ಸಂಚಾರ ಸುಗಮವಾಗಲಿದೆ ಎಂದು ಮನವಿ ಮಾಡಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!