Don't be fooled if someone other than your family gives you a saree: Nikhil Kumaraswamy

ಮನೆಯವರ ಬಿಟ್ಟು ಇನ್ಯಾರೋ ಮೂರನೇ ವ್ಯಕ್ತಿ ಸೀರೆ ಕೊಡ್ತೀನಿ ಅಂದ್ರೆ ಮರುಳಾಗಬೇಡಿ: ಮಹಿಳೆಯರಿಗೆ ನಿಖಿಲ್ ಕುಮಾರಸ್ವಾಮಿ ಮನವಿ

ರಾಮನಗರ: ಆಪರೇಷನ್ ಸಿಂಧೂರ (Operation Sindoora) ಯಶಸ್ವಿ ಕಾರ್ಯಾಚರಣೆಗೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು ಆಪರೇಷನ್ ಸಿಂಧೂರ ಕೈಗೊಂಡಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಮೆಚ್ಚಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಹೇಳಿದರು.

ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಭಾರತೀಯ ಕುಟುಂಬಗಳು ಅಂದು ಯಾವ ಪರಿಸ್ಥಿತಿ ಎದುರಿಸಿದ್ದರು ಎಲ್ಲರಿಗೂ ನೋವಿತ್ತು. ಪೆಹಲ್ಗಾಮ್ ದುರ್ಘಟನೆಯಲ್ಲಿ ಹೆಣ್ಣುಮಕ್ಕಳು ಕುಂಕುಮವನ್ನು ಕಳೆದುಕೊಂಡಿದ್ದರು. ಅದಕ್ಕೆ ಪ್ರತ್ಯುತ್ತರವಾಗಿ ಉಗ್ರರ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ ಎಂದು ಅವರು ತಿಳಿಸಿದರು.

ಸಿಂಧೂ ನದಿಯ ಬಗ್ಗೆ ಕೂಡ ಪ್ರಧಾನ ಮಂತ್ರಿಗಳು ಚರ್ಚೆ ಮಾಡಿದ್ದಾರೆ. ಭಾರತದ ಮೂಲಕ ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿದು ಹೋಗುತ್ತದೆ. ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿಯುವುದನ್ನು ಕೂಡ ತಪ್ಪಿಸುತ್ತೇವೆ ಅಂತಾ ಪ್ರಧಾನಿ ಹೇಳಿದ್ದಾರೆ. ಇದು ಸ್ವಾಗತಾರ್ಹ ಎಂದರು ಅವರು.

ಬಾಂಬ್ ಕಟ್ಕೊಂಡು ಹೋಗೋ ಮನಸ್ಥಿತಿ ಎಲ್ಲಿಂದ ಬಂತು?

ಕಾಂಗ್ರೆಸ್ ಪಕ್ಷದಿಂದ ಶಾಂತಿ ಜಪ ಎಂಬ ಟ್ವೀಟ್ ವಿಚಾರಕ್ಕೆ ಮಾತನಾಡಿದ ಅವರು; ಅವರ ಪೋಸ್ಟ್ ನಿಂದಾಗಿ ಕಾಂಗ್ರೆಸ್ ಮನಸ್ಥಿತಿಯನ್ನು ನಾವು ಅಳೆಯಬಹುದು. ಕಾಂಗ್ರೆಸ್ ನವರಿಗೆ ಏನ್ ಶಾಂತಿ ಬೇಕಂತೆ? ಇನ್ನೆಷ್ಟು ದಿನ ಭಾರತೀಯರು ಶಾಂತಿಯಿಂದ ಇರಬೇಕು. ಪ್ರತಿಯೊಬ್ಬ ಭಾರತೀಯರು ಕೂಡ ಪ್ರಧಾನಿಯ ಕಾರ್ಯವನ್ನು ಮೆಚ್ಚಿದ್ದಾರೆ ಎಂದರು.

ಪ್ರತಿಯೊಬ್ಬರ ಮನಸ್ಸಿನಲ್ಲೂ ಆಕ್ರೋಶ ಇದೆ, ಒಳಗಡೆ ನೋವಿದೆ. ಅದಕ್ಕೆ ಪ್ರಧಾನಮಂತ್ರಿಗಳು ಉತ್ತರ ಕೊಡಬೇಕು ಅಂತಾ ಕೇಳಿದ್ವಿ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಆಪರೇಷನ್ ಸಿಂಧೂರದ ಜವಾಬ್ದಾರಿಯನ್ನು ಇಬ್ಬರು ವೀರ ಮಹಿಳೆಯ ಹೊತ್ತಿದ್ದಾರೆ ಎಂದರು.

ಕಾಂಗ್ರೆಸ್ ನ ಮನಸ್ಥಿತಿ ಇದರಿಂದ ಸ್ಪಷ್ಟವಾಗಿ ಗೊತ್ತಾಗಿದೆ.

ಮೊನ್ನೆ ಕಾಂಗ್ರೆಸ್ ನ ಸಚಿವರೊಬ್ಬರು ಬಾಂಬ್ ಕಟ್ಟಿಕೊಂಡು ಹೋಗ್ತೀನಿ ಅಂದ್ರು. ಬಾಂಬ್ ಕಟ್ಟಿಕೊಂಡು ಹೋಗ್ತೀನಿ ಎನ್ನುವ ಮನಸ್ಥಿತಿ ಎಲ್ಲಿಂದ ಬಂತು. ಮಾತೆತ್ತಿದರೆ ಬಾಂಬ್ ಬಾಂಬ್ ಅಂತಾರೆ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಇಕ್ಬಾಲ್ ಹುಸೇನ್ ಗೆ ಟಾಂಗ್ ಕೊಟ್ಟ ನಿಖಿಲ್

ಪೆಹಲ್ಗಾಮ್ ದಾಳಿಯಿಂದ ಅಂದು ದೇಶಾದ್ಯಂತ ನೋವಿನ ಪರಿಸ್ಥಿತಿ, ಶೋಕಾಚರಣೆ ಇತ್ತು. ಆದ್ರೆ ಈ ಜಿಲ್ಲೆಯ ಶಾಸಕರೊಬ್ಬರು ಸೀರಿ ಹಂಚಿ ಸಂಭ್ರಮದ ಕಾರ್ಯಕ್ರಮ ಮಾಡಿದ್ದಾರೆ.

ಮಹಿಳೆಯರಿಗೆ ಸೀರೆಯನ್ನ ಕೊಡುವ ಅಧಿಕಾರ ಇರುವುದು ನಿಮ್ಮ ಮನೆಯವರಿಗೆ ಮಾತ್ರ, ಇನ್ಯಾರೋ ಮೂರನೇ ವ್ಯಕ್ತಿ ಸೀರೆ ಕೊಡ್ತೀನಿ ಅಂದ್ರೆ ಮರುಳಾಗಿ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ಮಹಿಳೆಯರಿಗೆ ಅವರು ಮನವಿ ಮಾಡಿದರು.

ಸಿಎಂಗೆ ಭಗವಂತನ ಮೇಲೆ ಭಕ್ತಿ ಬಂದಿದೆ

ಸಿದ್ದರಾಮಯ್ಯ ಹಣೆಗೆ ಸಿಂಧೂರ ಇಟ್ಟುಕೊಂಡ ವಿಚಾರಕ್ಕೆ ಮಾತನಾಡಿದ ಅವರು. ಸಿಎಂ ಸಿದ್ದರಾಮಯ್ಯ ಅವರಿಗೆ ಈಗಲಾದರೂ ಮನಸ್ಸಿನಲ್ಲಿ ಭಗವಂತನ ಮೇಲೆ ಭಕ್ತಿ ಬಂದಿದೆ ಅಷ್ಟೇ ಸಾಕು ಎಂದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!