ಮನೆಯವರ ಬಿಟ್ಟು ಇನ್ಯಾರೋ ಮೂರನೇ ವ್ಯಕ್ತಿ ಸೀರೆ ಕೊಡ್ತೀನಿ ಅಂದ್ರೆ ಮರುಳಾಗಬೇಡಿ: ಮಹಿಳೆಯರಿಗೆ ನಿಖಿಲ್ ಕುಮಾರಸ್ವಾಮಿ ಮನವಿ

Don't be fooled if someone other than your family gives you a saree: Nikhil Kumaraswamy

ರಾಮನಗರ: ಆಪರೇಷನ್ ಸಿಂಧೂರ (Operation Sindoora) ಯಶಸ್ವಿ ಕಾರ್ಯಾಚರಣೆಗೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು ಆಪರೇಷನ್ ಸಿಂಧೂರ ಕೈಗೊಂಡಿದ್ದಾರೆ. ಇದನ್ನು ಎಲ್ಲಾ ಭಾರತೀಯರು ಮೆಚ್ಚಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಹೇಳಿದರು.

ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಭಾರತೀಯ ಕುಟುಂಬಗಳು ಅಂದು ಯಾವ ಪರಿಸ್ಥಿತಿ ಎದುರಿಸಿದ್ದರು ಎಲ್ಲರಿಗೂ ನೋವಿತ್ತು. ಪೆಹಲ್ಗಾಮ್ ದುರ್ಘಟನೆಯಲ್ಲಿ ಹೆಣ್ಣುಮಕ್ಕಳು ಕುಂಕುಮವನ್ನು ಕಳೆದುಕೊಂಡಿದ್ದರು. ಅದಕ್ಕೆ ಪ್ರತ್ಯುತ್ತರವಾಗಿ ಉಗ್ರರ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ ಎಂದು ಅವರು ತಿಳಿಸಿದರು.

ಸಿಂಧೂ ನದಿಯ ಬಗ್ಗೆ ಕೂಡ ಪ್ರಧಾನ ಮಂತ್ರಿಗಳು ಚರ್ಚೆ ಮಾಡಿದ್ದಾರೆ. ಭಾರತದ ಮೂಲಕ ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿದು ಹೋಗುತ್ತದೆ. ಪಾಕಿಸ್ತಾನಕ್ಕೆ ಸಿಂಧೂ ನದಿ ಹರಿಯುವುದನ್ನು ಕೂಡ ತಪ್ಪಿಸುತ್ತೇವೆ ಅಂತಾ ಪ್ರಧಾನಿ ಹೇಳಿದ್ದಾರೆ. ಇದು ಸ್ವಾಗತಾರ್ಹ ಎಂದರು ಅವರು.

ಬಾಂಬ್ ಕಟ್ಕೊಂಡು ಹೋಗೋ ಮನಸ್ಥಿತಿ ಎಲ್ಲಿಂದ ಬಂತು?

ಕಾಂಗ್ರೆಸ್ ಪಕ್ಷದಿಂದ ಶಾಂತಿ ಜಪ ಎಂಬ ಟ್ವೀಟ್ ವಿಚಾರಕ್ಕೆ ಮಾತನಾಡಿದ ಅವರು; ಅವರ ಪೋಸ್ಟ್ ನಿಂದಾಗಿ ಕಾಂಗ್ರೆಸ್ ಮನಸ್ಥಿತಿಯನ್ನು ನಾವು ಅಳೆಯಬಹುದು. ಕಾಂಗ್ರೆಸ್ ನವರಿಗೆ ಏನ್ ಶಾಂತಿ ಬೇಕಂತೆ? ಇನ್ನೆಷ್ಟು ದಿನ ಭಾರತೀಯರು ಶಾಂತಿಯಿಂದ ಇರಬೇಕು. ಪ್ರತಿಯೊಬ್ಬ ಭಾರತೀಯರು ಕೂಡ ಪ್ರಧಾನಿಯ ಕಾರ್ಯವನ್ನು ಮೆಚ್ಚಿದ್ದಾರೆ ಎಂದರು.

ಪ್ರತಿಯೊಬ್ಬರ ಮನಸ್ಸಿನಲ್ಲೂ ಆಕ್ರೋಶ ಇದೆ, ಒಳಗಡೆ ನೋವಿದೆ. ಅದಕ್ಕೆ ಪ್ರಧಾನಮಂತ್ರಿಗಳು ಉತ್ತರ ಕೊಡಬೇಕು ಅಂತಾ ಕೇಳಿದ್ವಿ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಆಪರೇಷನ್ ಸಿಂಧೂರದ ಜವಾಬ್ದಾರಿಯನ್ನು ಇಬ್ಬರು ವೀರ ಮಹಿಳೆಯ ಹೊತ್ತಿದ್ದಾರೆ ಎಂದರು.

ಕಾಂಗ್ರೆಸ್ ನ ಮನಸ್ಥಿತಿ ಇದರಿಂದ ಸ್ಪಷ್ಟವಾಗಿ ಗೊತ್ತಾಗಿದೆ.

ಮೊನ್ನೆ ಕಾಂಗ್ರೆಸ್ ನ ಸಚಿವರೊಬ್ಬರು ಬಾಂಬ್ ಕಟ್ಟಿಕೊಂಡು ಹೋಗ್ತೀನಿ ಅಂದ್ರು. ಬಾಂಬ್ ಕಟ್ಟಿಕೊಂಡು ಹೋಗ್ತೀನಿ ಎನ್ನುವ ಮನಸ್ಥಿತಿ ಎಲ್ಲಿಂದ ಬಂತು. ಮಾತೆತ್ತಿದರೆ ಬಾಂಬ್ ಬಾಂಬ್ ಅಂತಾರೆ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಇಕ್ಬಾಲ್ ಹುಸೇನ್ ಗೆ ಟಾಂಗ್ ಕೊಟ್ಟ ನಿಖಿಲ್

ಪೆಹಲ್ಗಾಮ್ ದಾಳಿಯಿಂದ ಅಂದು ದೇಶಾದ್ಯಂತ ನೋವಿನ ಪರಿಸ್ಥಿತಿ, ಶೋಕಾಚರಣೆ ಇತ್ತು. ಆದ್ರೆ ಈ ಜಿಲ್ಲೆಯ ಶಾಸಕರೊಬ್ಬರು ಸೀರಿ ಹಂಚಿ ಸಂಭ್ರಮದ ಕಾರ್ಯಕ್ರಮ ಮಾಡಿದ್ದಾರೆ.

ಮಹಿಳೆಯರಿಗೆ ಸೀರೆಯನ್ನ ಕೊಡುವ ಅಧಿಕಾರ ಇರುವುದು ನಿಮ್ಮ ಮನೆಯವರಿಗೆ ಮಾತ್ರ, ಇನ್ಯಾರೋ ಮೂರನೇ ವ್ಯಕ್ತಿ ಸೀರೆ ಕೊಡ್ತೀನಿ ಅಂದ್ರೆ ಮರುಳಾಗಿ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು ಮಹಿಳೆಯರಿಗೆ ಅವರು ಮನವಿ ಮಾಡಿದರು.

ಸಿಎಂಗೆ ಭಗವಂತನ ಮೇಲೆ ಭಕ್ತಿ ಬಂದಿದೆ

ಸಿದ್ದರಾಮಯ್ಯ ಹಣೆಗೆ ಸಿಂಧೂರ ಇಟ್ಟುಕೊಂಡ ವಿಚಾರಕ್ಕೆ ಮಾತನಾಡಿದ ಅವರು. ಸಿಎಂ ಸಿದ್ದರಾಮಯ್ಯ ಅವರಿಗೆ ಈಗಲಾದರೂ ಮನಸ್ಸಿನಲ್ಲಿ ಭಗವಂತನ ಮೇಲೆ ಭಕ್ತಿ ಬಂದಿದೆ ಅಷ್ಟೇ ಸಾಕು ಎಂದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]