ನವದೆಹಲಿ: ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ವಿರುದ್ಧ ಭಾರತೀಯ ಸೇನೆ ನಡೆಸಲಾದ ಆಪರೇಷನ್ ಸಿಂಧೂರ (Operation Sindoora) ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅನುಪಸ್ಥಿತಿ ತೀವ್ರ ಚರ್ಚಗೆ ಕಾರಣವಾಗಿದೆ.
ಈ ಕುರಿತಂತೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjuna Large) ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಅವರು ತಮ್ಮನ್ನು ಸಂಸತ್ತಿಗಿಂತ ದೊಡ್ಡವರೆಂದು ಭಾವಿಸಿದ್ದಾರೆಯೇ’ ಎಂದು ಪ್ರಶ್ನಿಸಿದ್ದಾರೆ.
Congress backs Centre at all-party meeting after Op Sindoor, Kharge questions PM Modi's absence
— ANI Digital (@ani_digital) May 8, 2025
Read @ANI Story |https://t.co/L10mJVkPg0#AllPartyMeeting #OperationSindoor #MallikarjunKharge #PMModi #Congress pic.twitter.com/6BbMixJAiD
ಪಹಲ್ಗಾಮ್ ದಾಳಿ ಬಳಿಕ ನಡೆದ ಸರ್ವಪಕ್ಷ ಸಭೆಯಲ್ಲಿ ಅವರು (ಪ್ರಧಾನಿ ಮೋದಿ) ಭಾಗಿಯಾಗಿರಲಿಲ್ಲ. ಈ ಬಾರಿಯೂ ಅವರು ಇಲ್ಲ. ಇದು ಬಿಕ್ಕಟ್ಟಿನ ಸಮಯ. ಆದ್ದರಿಂದ ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಸಮಯ ಬಂದಾಗ ಈ ಬಗ್ಗೆ ಪ್ರಶ್ನಿಸುತ್ತೇವೆ ಎಂದು ಹೇಳಿದ್ದಾರೆ.
ದೇಶದ ಹಿತಾಸಕ್ತಿ ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಕೆಲವೊಂದು ವಿಷಯವನ್ನು ಚರ್ಚಿಸಲು ಸಾಧ್ಯವಿಲ್ಲ ಎಂದು ಅವರು(ಸರ್ಕಾರ) ನಮಗೆ ಹೇಳಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತು ತುರ್ತು ಅಧಿವೇಶನ ನಡೆಸಲುವಂತೆ ರಾಹುಕ್ ಗಾಂಧಿ ಅವರು ಸಲಹೆ ನೀಡಿದ್ದಾರೆ. ಇದರಿಂದ ಉತ್ತಮ ಸಂದೇಶ ರವಾನೆಯಾಗಲಿದೆ. ಎಂದಿದ್ದಾರೆ.
ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರದೊಂದಿಗೆ ನಿಲ್ಲುವ ಭರವಸೆಯನ್ನು ನಾವೆಲ್ಲರೂ ಸರ್ಕಾರಕ್ಕೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.