ಎತ್ತಿನಹೊಳೆ ನೀರು ಬಯಲು ಸೀಮೆ ಜಿಲ್ಲೆಗಳಿಗೆ ಶೀಘ್ರ: ಡಿಸಿಎಂ ಡಿಕೆ ಶಿವಕುಮಾರ್

Yettinahole water to reach plains districts soon: Chief Minister DK Shivakumar

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಗೆ ನೆಲಮಂಗಲ ತಾಲ್ಲೂಕಿನ ಕರೇಗೌಡನಹಳ್ಳಿ ಕೆರೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ ರಾಜ್ಯದ ಮಹಾ ಜನತೆ 136 ಸೀಟುಗಳನ್ನು ಕೊಟ್ಟು ನಮ್ಮ ಸರ್ಕಾರವನ್ನು ಗೆಲ್ಲಿಸಿದ್ದೀರಿ ನಿಮಗೆ ಧನ್ಯವಾದಗಳು. ವೃಷಭಾವತಿ ನೀರನ್ನು ಬಹಳ ಹಿಂದೆಯೇ ಸಂಸ್ಕರಣ ಮಾಡಿ ಹರಿಯಲು ಬಿಡಬೇಕು ಎಂದು ಅಂದುಕೊಂಡಿದ್ದೇವು.

ರೈತರ ಬದುಕಿಗೆ ಏನಾದರೂ ಸಹಾಯ ಮಾಡಬೇಕು ರೈತರಿಗೆ ಸಂಬಳವಾಗಲಿ, ಪೆನ್ಷನ್, ಪಿಂಚಣಿಯ ಸೌಲಭ್ಯಗಳು ಇರುವುದಿಲ್ಲ. ರೈತರ ಉಳಿವಿಗಾಗಿ ಅವರ ಅನುಕೂಲಕ್ಕಾಗಿ ಸರ್ಕಾರ ಯೋಜನೆಯನ್ನು ರೂಪಿಸಿದೆ.

ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಮಟ್ಟ ಹೆಚ್ಚಿಸುವುದು. ವೃಷಭಾವತಿ ಯೋಜನೆಯು 1900 ಕೋಟಿ ರೂಗಳ ಯೋಜನೆಯಾಗಿದ್ದು. 148 ಟ್ಯಾಂಕ್ ಗಳಿಗೆ ನೀರು ಹರಿಸುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಹಾಸನ ಭಾಗದಲ್ಲಿ ಅರಣ್ಯ ಪ್ರದೇಶ ಒತ್ತುವರಿ ಸಮಸ್ಯೆ ಆಗಿತ್ತು, ಆದಷ್ಟು ಶೀಘ್ರ ಬಗೆಹರಿಸಿ, ಈ ಭಾಗಕ್ಕೆ ಎತ್ತಿನಹೊಳೆಯ ನೀರು ತರಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ, ಬಯಲು ಸೀಮೆ ಪ್ರದೇಶಗಳಲ್ಲಿ ನೀರಿನ ಕೊರತೆ ನೀಗಿಸಲು ನಾನು ಕೇಂದ್ರದಲ್ಲಿ ಸಂಸತ್ ಸದಸ್ಯ ಆಗಿದ್ದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಯೋಜನೆ ರೂಪಿಸಿ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ ಯೋಜನೆ ಜಾರಿಗೆ ತರಲಾಯಿತು.

ವೃಷಭಾವತಿ ನೀರು ದೇವನಹಳ್ಳಿ, ದೊಡ್ಡಬಳ್ಳಾಪುರ ಭಾಗಕ್ಕೆ ಕೂಡ ಆದಷ್ಟು ಬೇಗ ಬರಲು ಡಿಪಿಆರ್ ಸಿದ್ದಪಡಿಸಿ ಪ್ರಸಕ್ತ ಸಾಲಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಎತ್ತಿನಹೊಳೆ ಯೋಜನೆಯು ಬಯಲು ಸೀಮೆ ರಾಜ್ಯಗಳ ಆಶಾಭಾವನೆ. ಮೊದಲು ಕುಡಿಯುವ ನೀರು ಸಿಗಬೇಕು. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ, ನಂತರ ಕೆರೆ ತುಂಬಿಸಿ. ಒಂದು ವರ್ಷದಲ್ಲಿ ದೊಡ್ಡಬಳ್ಳಾಪುರ ಕ್ಕೆ ಎತ್ತಿನಹೊಳೆ ನೀರು ಬರುವ ವಿಶ್ವಾಸವಿದೆ. ಈ ಭಾಗದ ಶಾಸಕರ ಸಭೆ ಕರೆದು ಎತ್ತಿನಹೊಳೆ ಬಗ್ಗೆ ಚರ್ಚಿಸಿ, ಆದಷ್ಟು ಬೇಗ ನೀರು ಕೊಡಲು ಉಪಮುಖ್ಯಮಂತ್ರಿಗಳಲ್ಲಿ ಕೋರಿದರು.

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ರೈತರ ಬಹುದಿನಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ.

2016 ರಲ್ಲಿ ಕೆ.ಸಿ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಎರಡೇ ವರ್ಷಗಳಲ್ಲಿ ಉದ್ಘಾಟನೆ ಮಾಡಿ ಕೋಲಾರ ಜಿಲ್ಲೆಯ ಭಾಗದ 400 ಕೆರೆಗಳಿಗೆ ನೀರು ಹರಿಸಲಾಗಿದೆ. 2017ರಲ್ಲಿ ಹೆಚ್.ಎನ್ ವ್ಯಾಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ 2019 ಕ್ಕೆ ಉಧ್ಘಾಟಿಸಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳಿಗೆ ನೀರು ಹೊರಿಸಲಾಗಿದೆ.

ವೃಷಭಾವತಿ ನೀರು ಹರಿಸುವ ಯೋಜನೆ ಅಡಿ 270 ಕೆರೆಗಳಿಗೆ ನೀರು ಹರಿಸುವ ಯೋಜನೆ ಇದಾಗಿದ್ದು. 4 ಟಿ.ಎಂ.ಸಿ ನೀರನ್ನು ಕೆರೆಗಳಿಗೆ ಹರಿಸಲಾಗುವುದು.
ಮುಂದಿನ 2 ವರ್ಷದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್.ಎನ್ ವ್ಯಾಲಿ, ಕೆ.ಸಿ ವ್ಯಾಲಿಯ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಹರಿಸಿದ ನಂತರ ಅಂತರ್ಜಲ ಮಟ್ಟ ಹೆಚ್ಚಾಗಿ, ರೈತರು ಕೃಷಿ ತೋಟಗಾರಿಕೆ ಹೈನುಗಾರಿಕೆ ಪಶುಸಂಗೋಪನೆಯಲ್ಲಿ ತೊಡಗಿದ್ದಾರೆ. ಬರಡು ಭೂಮಿ ಈಗ ಕೃಷಿ ಭೂಮಿ ಆಗಿ ಮಾರ್ಪಾಡಾಗಿದೆ. ಇದು ರೈತರ ಮೇಲಿನ ನಮ್ಮ ಸರ್ಕಾರ ಬದ್ಧತೆ ಎಂದರು.

ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕರಾದ ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಶಾ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]