ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸವಾರರಿಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಕ್ರಾಸ್ ಬಳಿ ಸಂಭವಿಸಿದೆ.
ಘಟನೆಯಲ್ಲಿ ಶಿವಪುರ ನಿವಾಸಿ ರಕ್ಷಿತ್ (25 ವರ್ಷ) ಹಾಗೂ ಗುಂಡಮಗೆರೆ ವೆಂಕಟೇಶ್ (45 ವರ್ಷ) ಸ್ಥಳದಲ್ಲಿ ಸಾವನಪ್ಪಿದ್ದು, ಮತ್ತೋರ್ವ ಮುತ್ತೂರು ನಿವಾಸಿ ವೆಂಕಟೇಶ್ (45 ವರ್ಷ) ಎನ್ನುವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಶುಕ್ರವಾರ ರಾತ್ರಿ ದೊಡ್ಡಬಳ್ಳಾಪುರ ಕಡೆಯಿಂದ ಹೊಸಹಳ್ಳಿ ಮಾರ್ಗವಾಗಿ ಬರುವ ವೇಳೆ ನೆಲ್ಲುಕುಂಟೆ ಕ್ರಾಸ್ ಬಳಿ ನಿಯಂತ್ರಣ ತಪ್ಪಿದ ಸ್ಕೂಟರ್ ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.