ಮಂಗಳೂರು: ಪಹಲ್ಲಾಮ್ ಪಾಕ್ ಉಗ್ರಗಾಮಿಗಳ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ (Operation Sindoora) ಅಡಿಯಲ್ಲಿ ಪಾಕ್ ಮೇಲೆ ನಡೆಸಿದ ದಾಳಿಗೆ ಪಾಪಿ ಪಾಕಿಸ್ತಾನ ಪತರಗುಟ್ಟಿದ್ದು, ಅಮ್ಮಾ ತಾಯಿ ಸಾಲ ಕೊಡಿ ಎಂದು ಮಿತ್ರ ರಾಷ್ಟ್ರಗಳ ಬಳಿ ಮೊರೆಯಿಟ್ಟಿದೆ.
ಭಾರತೀಯ ಸೇನೆಗಳ ದಿಟ್ಟ ಕಾರ್ಯಾಚರಣೆ ಆಪರೇಷನ್ ಸಿಂಧೂರದ ಕುರಿತು ಕರಾವಳಿಯ ಯಕ್ಷಗಾನದಲ್ಲಿ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ವೈರಲ್ ಆಗಿದೆ.
ಈ ವಿಡಿಯೋದಲ್ಲಿ ಪಾವಂಜೆ ಮೇಳದಲ್ಲಿ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಆಪರೇಷನ್ ಸಿಂಧೂರದ ಬಗ್ಗೆ ಮಾತನಾಡಿದ್ದಾರೆ.
ಈ ಪವಿತ್ರವಾದ ನೆಲದಲ್ಲಿ ನಾನು ಹುಟ್ಟಿದವ ಪವಿತ್ರವಾದ ಸಂಸ್ಕಾರವನ್ನು ಪಡೆದವ. ಈ ನೆಲಕ್ಕೆ ತಾಯಿಯೆಂದು ನಾವು ಕರೆಯುತ್ತೇವೆ. ತಾಯಿಯೆಂದು ಕರೆಯುವ ಈ ನೆಲ ಇದು ಬಿಟ್ರೆ ಇನ್ನೊಂದಿಲ್ಲ. ಹೀಗಾಗಿ ನಮಗೆ ದೇಶ ಪ್ರೇಮವನ್ನು ಕಲಿಸಿದೆ. ಬಿಟ್ರೆ ದೇಶ ದ್ರೋಹ ಮಾಡುವುದನ್ನು ಕಲಿಸುವುದಿಲ್ಲ ಎಂದಿದ್ದಾರೆ.
ಈ ವೇಳೆ ಸ್ತಿ ಪಾತ್ರಧಾರಿಯೋರ್ವರು ಈ ತಾಯಿಯ ಸಿಂಧೂರ ಅಳಿಸಲು ಬಂದರೆ ಏನು ಮಾಡೋದು ಎಂಬ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಲಾವಿದ ದಿನೇಶ್ ಶೆಟ್ಟಿ, ತಾಯಿಯ ಸಿಂಧೂರವನ್ನು ಒರೆಸುತ್ತೇನೆಂದು ಬಂದರೆ, ಈ ನೆಲದ ಒಬ್ಬಳು ಹೆಣ್ಣಿನ ಸಿಂಧೂರ ಒರೆಸಿದರೆ ವೈರಿಗಳ ಸಾವಿರ ಸಾವಿರ ಮಡದಿಯರ ಸಿಂಧೂರ ಅಳಿಸುವುದಕ್ಕೆ ನಾವೆಲ್ಲಾ ಒಟ್ಟಾಗಿ ಸಿದ್ಧರಾಗಿ ನಿಂತಿದ್ದೇವೆ ಎಂದು ಹೇಳಿದ್ದಾರೆ.
ಕಲಾವಿದ ದಿನೇಶ್ ಶೆಟ್ಟಿಯವರ ಈ ಮಾತು ಕೇಳುತ್ತಿದ್ದಂತೆ ಯಕ್ಷಗಾನ ನೋಡಲೆಂದು ಆಗಮಿಸಿದ್ದ ಜನರು ಜೋರಾಗಿ ಕೂಗುವ ಮೂಲಕ ಬೆಂಬಲ ಸೂಚಿಸಿದ್ದಾರೆ.
ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ.